AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಅಭಿಮಾನಿಗಳನ್ನು ಕಳೆದುಕೊಂಡ ನೋವು; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಪೋಸ್ಟ್​ಪೋನ್?

ಈ ದುರ್ಘಟನೆಯಿಂದ ಯಶ್ ಸಾಕಷ್ಟು ನೊಂದಿದ್ದಾರೆ. ಹೀಗಾಗಿ ಅವರು ಶೂಟಿಂಗ್ ಪೋಸ್ಟ್​ಪೋನ್ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ನಾಲ್ವರು ಅಭಿಮಾನಿಗಳನ್ನು ಕಳೆದುಕೊಂಡ ನೋವು; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಪೋಸ್ಟ್​ಪೋನ್?
ಯಶ್
ರಾಜೇಶ್ ದುಗ್ಗುಮನೆ
|

Updated on: Jan 11, 2024 | 12:42 PM

Share

ಯಶ್ ಅವರ ಜನ್ಮದಿನದ (ಜನವರಿ 8) ಸಂದರ್ಭದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಯಲ್ಲಿ ಅವರ  ನಾಲ್ವರು ಅಭಿಮಾನಿಗಳು ಮೃತಪಟ್ಟಿದ್ದರು. ಯಶ್ (Yash) ಅವರ ಬರ್ತ್​ಡೇ ಬ್ಯಾನರ್ ನಿಲ್ಲಿಸಲು ಹೋಗಿ ಗದಗದಲ್ಲಿ ಮೂವರು ವಿದ್ಯುತ್ ಸ್ಪರ್ಷದಿಂದ ಮೃತಪಟ್ಟರೆ ಮತ್ತೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ಈ ಘಟನೆ ಯಶ್ ಅವರಿಗೆ ಸಾಕಷ್ಟು ನೋವು ತಂದಿದೆ. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​​ನ ಪೋಸ್ಟ್​ಪೋನ್ ಮಾಡಿದ್ದಾರೆ ಎಂದು ವರದಿ ಆಗಿದೆ.

ಜನ್ಮದಿನದಂದು ‘ಟಾಕ್ಸಿಕ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆಗಿರುವುದರಿಂದ ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಯಶ್ ಹೇಳಿದ್ದರು. ಆದರೆ, ಅಂದು ನಡೆದ ದುರ್ಘಟನೆಯಿಂದ ಯಶ್ ಶೂಟಿಂಗ್​ನ ಬಿಟ್ಟು ಮೃತರ ಕುಟುಂಬದವರನ್ನು ಮಾತನಾಡಿಸಲು ಗದಗಕ್ಕೆ ತೆರಳಬೇಕಾಗಿ ಬಂತು. ಅವರನ್ನು ನೋಡಲು ಬಂದ ಅಭಿಮಾನಿ ಮನೆಗೆ ತೆರಳುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ಒಟ್ಟೂ ನಾಲ್ವರು ಮೃತಪಟ್ಟರು.

ಈ ದುರ್ಘಟನೆಯಿಂದ ಯಶ್ ಸಾಕಷ್ಟು ನೊಂದಿದ್ದಾರೆ. ಹೀಗಾಗಿ ಅವರು ಶೂಟಿಂಗ್ ಪೋಸ್ಟ್​ಪೋನ್ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈಗಾಗಲೇ ಕುಟುಂಬದವರ ಜೊತೆ ಯಶ್ ತಂಡ ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಇರುವ ಸಹಾಯವನ್ನು ತಂಡ ಮಾಡಲಿದೆ.

ಇದನ್ನೂ ಓದಿ: ‘ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳುತ್ತೇನೆ’; ಯಶ್ ಸಿನಿಮಾದಲ್ಲಿ ಕರೀನಾ ನಟಿಸೋದು ಫಿಕ್ಸ್?

ಕರೀನಾ ನಾಯಕಿ?

‘ಟಾಕ್ಸಿಕ್’ ಚಿತ್ರಕ್ಕೆ ಕರೀನಾ ಕಪೂರ್ ಅವರು ನಾಯಕಿ ಎನ್ನುವ ಮಾತು ಜೋರಾಗಿದೆ. ಇದಕ್ಕೆ ಸ್ಪಷ್ಟನೆ ನೀಡಿದ ಕರೀನಾ ಮತ್ತಷ್ಟು ಕುತೂಹಲ ಮೂಡಿಸಿದ್ದರು. ‘ಶೀಘ್ರದಲ್ಲೇ ಎಗ್ಸೈಟಿಂಗ್ ವಿಚಾರ ಬರಲಿದೆ’ ಎಂದು ಅವರು ಹೇಳಿದ್ದರು. ‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ. ಯಶ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದ ಪಾತ್ರವರ್ಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ