AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟೀಸರ್​ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದಾಗ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಬೋಲ್ಡ್ ಸೀನ್ ಇದೆ ಎಂದು ಟೀಕೆ ವ್ಯಕ್ತವಾಗಿತ್ತು. ಅದಕ್ಕೆ ಈಗ ನಟ ಯಶ್ ಅವರು ಉತ್ತರ ನೀಡಿದ್ದಾರೆ. ‘ಸಿನಿಮಾಕಾನ್’ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ‘ಟಾಕ್ಸಿಕ್’ ಸಿನಿಮಾ ಕುರಿತು ಮಾತನಾಡಿದ್ದಾರೆ.

‘ಟಾಕ್ಸಿಕ್’ ಟೀಸರ್​ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್
Toxic
ಮದನ್​ ಕುಮಾರ್​
|

Updated on: Apr 26, 2026 | 8:29 AM

Share

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಪ್ರಚಾರ ಜೋರಾಗಿ ನಡೆಯುತ್ತಿದೆ. ಯಶ್ ಅವರು ವಿದೇಶದಲ್ಲಿ ಸಂದರ್ಶನ ನೀಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ‘ಟಾಕ್ಸಿಕ್’ (Toxic) ಚಿತ್ರದ ಟೀಸರ್​ನಲ್ಲಿ ಇರುವ ಕೆಲವು ಬೋಲ್ಡ್ ದೃಶ್ಯಗಳ ಬಗ್ಗೆ ಜನರಿಂದ ವ್ಯಕ್ತವಾದ ಟೀಕೆಗಳಿಗೆ ಯಶ್ ಈಗ ಉತ್ತರ ನೀಡಿದ್ದಾರೆ. ಆ ಮೂಲಕ ಅವರು ಸಿನಿಮಾ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

ಅಮೆರಿಕದಲ್ಲಿ ನಡೆದ ‘ಸಿನಿಮಾಕಾನ್’ ಈವೆಂಟ್​ನಲ್ಲಿ ಪಾಲ್ಗೊಂಡಿದ್ದ ಯಶ್ ಅವರು ಸಂದರ್ಶನ ನೀಡಿದ್ದಾರೆ. ಈ ವೇಳೆ ‘ಟಾಕ್ಸಿಕ್’ ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಬಗ್ಗೆ ಮಾತನಾಡಿದ ಅವರು, ‘ಭಾರತದಲ್ಲಿ ಆ್ಯಕ್ಷನ್ ಸಿನಿಮಾಗಳನ್ನು ಸಾಮಾನ್ಯವಾಗಿ ಪುರುಷ ನಿರ್ದೇಶಕರೇ ನಿರ್ದೇಶಿಸುತ್ತಾರೆ ಎಂಬ ಇತಿಹಾಸವಿದೆ. ಆದರೆ, ಒಬ್ಬ ಮಹಿಳಾ ನಿರ್ದೇಶಕಿ ಗ್ಯಾಂಗ್‌ಸ್ಟರ್ ಸಿನಿಮಾವನ್ನು ತನ್ನದೇ ಆದ ಹೆಣ್ಣಿನ ದೃಷ್ಟಿಕೋನದಿಂದ ತೆರೆಯ ಮೇಲೆ ತರುತ್ತಿರುವುದು ತುಂಬಾ ಹೊಸತನದಿಂದ ಕೂಡಿದೆ’ ಎಂದಿದ್ದಾರೆ.

ಚಿತ್ರದಲ್ಲಿನ ಬೋಲ್ಡ್ ದೃಶ್ಯಗಳ ಬಗ್ಗೆ ಮಾತನಾಡಿದ ಅವರು, ‘ಗೀತು ಅವರು ಕಥೆಯನ್ನು ಬರೆಯುವ ರೀತಿ ಮತ್ತು ಅದರಲ್ಲಿ ಪ್ರಣಯ ತೋರಿಸುವ ವಿಧಾನವೇ ಬೇರೆ. ಒಬ್ಬ ಮಹಿಳೆ ಬಯಕೆ ಅಥವಾ ಭಾವನೆಗಳನ್ನು ಎಷ್ಟು ಆಳವಾಗಿ ಮತ್ತು ವಿಭಿನ್ನವಾಗಿ ತೋರಿಸಬಲ್ಲರು ಎಂಬುದು ಈ ಚಿತ್ರದ ಜರ್ನಿಯಲ್ಲಿ ನನಗೆ ಅರಿವಾಯಿತು. ಇದು ಈವರೆಗಿನ ಆ್ಯಕ್ಷನ್ ಸಿನಿಮಾಗಳಿಗಿಂತ ಬಹಳ ವಿಭಿನ್ನವಾಗಿರಲಿದೆ’ ಎಂದು ಯಶ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

2025ರ ಜನವರಿಯಲ್ಲಿ ಬಿಡುಗಡೆಯಾದ ಬರ್ತ್‌ಡೇ ಟೀಸರ್​​ನಲ್ಲಿ ಯಶ್ ಅವರು ಕ್ಯಾಸಿನೋವೊಂದಕ್ಕೆ ಎಂಟ್ರಿ ಕೊಡುವ ದೃಶ್ಯವಿತ್ತು. ಇತ್ತೀಚೆಗೆ ಬಿಡುಗಡೆಯಾದ ‘ಇಂಟ್ರಡ್ಯೂಸಿಂಗ್ ರಾಯಾ’ ವಿಡಿಯೋದಲ್ಲಿನ ಕೆಲವು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಸ್ಮಶಾನ, ಕಾರ್ ಮತ್ತು ಬಾಂಬ್ ಒಳಗೊಂಡ ಆ ದೃಶ್ಯವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ಕ್ರಿಶ್ಚಿಯನ್ ಫೆಡರೇಷನ್ ದೂರನ್ನು ದಾಖಲಿಸಿತ್ತು.

ಇದನ್ನೂ ಓದಿ: ‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್

ಮಿಶ್ರ ಪ್ರತಿಕ್ರಿಯೆ ಮತ್ತು ಸಣ್ಣಪುಟ್ಟ ವಿರೋಧಗಳ ನಡುವೆಯೂ, ‘ಟಾಕ್ಸಿಕ್’ ಚಿತ್ರವು ತನ್ನ ವಿಭಿನ್ನ ಮೇಕಿಂಗ್ ಮತ್ತು ಯಶ್ ಅವರ ಸ್ಟೈಲಿಶ್ ಲುಕ್‌ನಿಂದಾಗಿ ಜಾಗತಿಕ ಮಟ್ಟದಲ್ಲಿ ಕುತೂಹಲ ಮೂಡಿಸಿರುವುದಂತೂ ನಿಜ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಕಾರಣಾಂತರಗಳಿಂದ ಮುಂದೂಡಿಕೆ ಆಯಿತು. ಜೂನ್ 4ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!