AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಕೂತಿಲ್ಲ ಯಶ್, ‘ಟಾಕ್ಸಿಕ್’ ಸಿನಿಮಾ ಬಗ್ಗೆ ಹೇಳಿದ್ದಿಷ್ಟು

Yash: ಫಿಟ್​ನೆಸ್ ಟ್ರೈನರ್ ಕಿಟ್ಟಿ ಅವರ ಹೊಸ ಜಿಮ್ ಉದ್ಘಾಟನೆಗೆ ಆಗಮಿಸಿದ್ದ ನಟ ಯಶ್, ‘ಟಾಕ್ಸಿಕ್’ ಸಿನಿಮಾ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದರು.

ಖಾಲಿ ಕೂತಿಲ್ಲ ಯಶ್, ‘ಟಾಕ್ಸಿಕ್’ ಸಿನಿಮಾ ಬಗ್ಗೆ ಹೇಳಿದ್ದಿಷ್ಟು
ಮಂಜುನಾಥ ಸಿ.
|

Updated on: Feb 14, 2024 | 9:26 PM

Share

ನಟ ಯಶ್ (Yash) ಹಲವು ವರ್ಷಗಳ ಬಳಿಕ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ‘ಟಾಕ್ಸಿಕ್’ ಹೆಸರಿನ ಸಿನಿಮಾದಲ್ಲಿ ಯಶ್ ನಟಿಸುತ್ತಿದ್ದು, ಸಿನಿಮಾದ ಟೈಟಲ್ ಟೀಸರ್ ಮಾತ್ರವೇ ಬಿಡುಗಡೆ ಮಾಡಲಾಗಿದೆ. ಸಿನಿಮಾದ ಚಿತ್ರೀಕರಣ ಇನ್ನಷ್ಟೆ ಪ್ರಾರಂಭವಾಗಬೇಕಿದೆ. ಇದೀಗ ಯಶ್​ರ ಫಿಸಿಕಲ್ ಟ್ರೈನರ್, ಗೆಳೆಯ ಕಿಟ್ಟಿಯ ಹೊಸ ಜಿಮ್ ಉದ್ಘಾಟನೆಗೆ ಯಶ್ ಆಗಮಿಸಿದ್ದರು. ಈ ವೇಳೆ ಮಾಧ್ಯಮದದವರೊಡನೆ ಮಾತನಾಡಿದ ಯಶ್ ‘ಟಾಕ್ಸಿಕ್’ ಸಿನಿಮಾ ಬಗ್ಗೆ ತುಸುವಷ್ಟೆ ಮಾಹಿತಿ ನೀಡಿದರು.

‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ಸಿನಿಮಾದ ಬಗ್ಗೆ ದೊಡ್ಡ ಮಟ್ಟದಲ್ಲಿ ಯೋಜನೆಗಳು ನಡೆಯುತ್ತಿವೆ. ‘ಟಾಕ್ಸಿಕ್’ ಸಿನಿಮಾವನ್ನು ಯಾವುದೇ ಕಾಂಪ್ರಮೈಸ್ ಮಾಡಲಿದ್ದೇವೆ. ಈಗ ಸದ್ಯಕ್ಕೆ ಚಿತ್ರೀಕರಣ ಇಲ್ಲವೆಂದು ನಾನು ಸುಮ್ಮನೆ ಕೂತಿಲ್ಲ, ಈಗಲೂ ಸಹ ಸಾಕಷ್ಟು ಬ್ಯುಸಿಯಾಗಿದ್ದೀನಿ’ ಎಂದಿದ್ದಾರೆ ನಟ ಯಶ್.

ಚಿತ್ರರಂಗದ ಬಗ್ಗೆ ಮಾತನಾಡಿ, ‘ನನ್ನಿಂದ ಕನ್ನಡ ಚಿತ್ರರಂಗ ಅಲ್ಲ. ಚಿತ್ರರಂಗಕ್ಕಾಗಿ ನಾನು ಏನು ಮಾಡಬಹುದು ಎಂದು ಸದಾ ಯೋಚನೆ ಮಾಡುತ್ತಾ ಇರುತ್ತೀನಿ. ಹೊಸ ಹೀರೋಗಳಿಗೆ ಬೆಂಬಲ ಮಾಡಿ‌. ನಾಲ್ಕು ಜನ ಹೀರೋಗಳಿಗಷ್ಟೇ ಸಿನಿಮಾ ಮಾಡಿ ಅಂತಾ ಹೇಳೋದಲ್ಲ. ಎಲ್ಲರಿಗೂ ಬೆಂಬಲ ತೋರಿಸಿ. ಮಾಡಿದ ಸಿನಿಮಾ ಎಲ್ಲ ಚೆನ್ನಾಗಿಲ್ಲ ಅಂತಾ ಹೇಳೋದಲ್ಲ. ಮಾಡಿರೋ ಸಿನಿಮಾಗಳೆಲ್ಲ ಹಿಟ್ ಆಗುವುದಿಲ್ಲ ಎಂಬುದೂ ಸಹ ನಿಜ. ಮುಂದೆ ಬರುತ್ತಿರುವ ಸಿನಿಮಾಗಳಿಗೆ ಬೆಂಬಲ ನೀಡಿ’ ಎಂದರು.

ಇದನ್ನೂ ಓದಿ:ಯಶ್ ಮುಂದಿನ ಚಿತ್ರಗಳ ಬಗ್ಗೆ ಹುಟ್ಟಿದೆ ಬ್ಯಾಕ್ ಟು ಬ್ಯಾಕ್ ವದಂತಿ; ಟಾಲಿವುಡ್ ಅಂಗಳದಿಂದ ಹೊಸ ಸುದ್ದಿ

‘ಚಾಲೆನ್ ನವರು ಹೊಸಬರ ಸಿನಿಮಾಗಳ ಸ್ಯಾಟಲೈಟ್ ರೈಟ್ಸ್ ತಗೋಬೇಕು. ಆಗ ಸಿನಿಮಾಗಳ ಸಂಖ್ಯೆ ಜಾಸ್ತಿ ಆಗುತ್ತೆ. ರೈಟ್ಸ್ ವಿಚಾರದ ಬಗ್ಗೆ ಚಿತ್ರರಂಗದವರು ಋಣಾತ್ಮಕವಾಗಿ ಯೋಚನೆ ಮಾಡುವುದು ಬೇಡ. ಪ್ರಶಾಂತ್ ನೀಲ್ ‘ಉಗ್ರಂ’ ಸಿನಿಮಾ ಮಾಡಿದಾಗ ಯಾರೂ ಸ್ಯಾಟಲೈಟ್ ರೈಟ್ಸ್ ತಗೊಂಡಿರಲಿಲ್ಲ. ಆದರೆ ಸಿನಿಮಾ ಬಿಡುಗಡೆ ಆದಮೇಲೆ ಎಲ್ಲರೂ ಮಾತನಾಡಿದರು’ ಎಂದಿದ್ದಾರೆ ಯಶ್.

ಗೆಳೆಯ ಕಿಟ್ಟಿ ಬಗ್ಗೆ ಮಾತನಾಡಿದ ಯಶ್, ‘ನನ್ನ ಕುಟುಂಬದ ಜೊತೆ ಕಳೆಯುವ ಸಮಯಕ್ಕಿಂತಲೂ ಕಿಟ್ಟಿ ಜೊತೆಗೆ ಹೆಚ್ಚು ಸಮಯ ಕಳೆದಿದ್ದೀನಿ. ಕಿಟ್ಟಿ ಶಿಸ್ತಿನ ಮನುಷ್ಯ. ಸರಿಯಾದ ಟೈಂಗೆ ಬರುತ್ತಾರೆ, ವರ್ಕೌಟ್​ನಲ್ಲೂ ಬಹಳ ಶಿಸ್ತು. ನಾನು ಸಿನಿಮಾಗಳಲ್ಲಿ ಚೆನ್ನಾಗಿ ಕಂಡರೂ ಅವರೇ ಕಾರಣ. ನಾನು ಚೆನ್ನಾಗಿ ಕಾಣದೇ ಇದ್ದರೂ ಸಹ ಅವರೇ ಕಾರಣ’ ಎಂದರು. ಕತ್ರಗುಪ್ಪೆ ಏರಿಯಾ ಬಗ್ಗೆ ಮಾತನಾಡಿದ ಯಶ್, ‘ಈ ಏರಿಯಾ ಬಹಳ ಚೆನ್ನಾಗಿ ಗೊತ್ತು, ಬಹಳ ದಿನಗಳ ಬಳಿಕ ಇಲ್ಲಿಗೆ ಬಂದಿದ್ದೀನಿ. ಇಲ್ಲಿ ಒಂದು ಮನೆ ಇದೆ. ನನ್ನ ಸಹೋದರಿ ಇರುವುದು ಸಹ ಇಲ್ಲೆ. ಇಂದು ವ್ಯಾಲೆಂಟೈನ್ಸ್ ಡೇ ಎನ್ನುವುದು ಗೊತ್ತಿರಲಿಲ್ಲ. ಇವರು ಕರೆದರು ಬಂದುಬಿಟ್ಟೆ, ಈಗ ಮನೆಗೆ ಹೋಗಿ ಕುಟುಂಬದವರ ಜೊತೆ ಸೆಲೆಬ್ರೇಟ್ ಮಾಡಬೇಕು’ ಎಂದರು ಯಶ್. ಹೋಗುವ ಮುಂಚೆ ರಾಜಕೀಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಯಶ್, ‘ಚುನಾವಣೆ ಬಗ್ಗೆ ನಾನೇನು ಮಾತಾಡಲ್ಲ‌. ನನ್ನ ಯೋಚನೆ, ಗುರಿ ಬೇರೆನೇ ಇದೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!