AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವಂದುಕೊಂಡಂತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್

Yash movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಜೂನ್ ತಿಂಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮಾಯಣ’ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿ, ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಅಪರೂಪದ ವಿಷಯಗಳನ್ನು ಯಶ್ ಹಂಚಿಕೊಂಡಿದ್ದಾರೆ.

ನೀವಂದುಕೊಂಡಂತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್
Yash Toxic
ಮಂಜುನಾಥ ಸಿ.
|

Updated on:Apr 15, 2026 | 10:05 AM

Share

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಾರ್ಚ್ 19ರಂದೇ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಭೀತಿಯ ಕಾರಣ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಜೂನ್ 04 ರಂದು ಅದ್ಧೂರಿಯಾಗಿ ‘ಟಾಕ್ಸಿಕ್’ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮಾಯಣ’ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿ, ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಅಪರೂಪದ ವಿಷಯಗಳನ್ನು ಯಶ್ ಹಂಚಿಕೊಂಡಿದ್ದಾರೆ.

ಹಾಲಿವುಡ್​​ನ ಫ್ಯಾಂಡಾಂಗೊ ಮತ್ತು ರೋಟನ್ ಟೊಮೆಟೊ ಜೊತೆಗೆ ಮಾತನಾಡಿರುವ ನಟ ಯಶ್, ‘ರಾಮಾಯಣ’ ಸಿನಿಮಾದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ‘ಟಾಕ್ಸಿಕ್’ ಬಹಳ ಮಹಾತ್ವಾಕಾಂಕ್ಷೆಯ ಸಿನಿಮಾ. ಮೊದಲ ಬಾರಿಗೆ ನಾವು ಆ ಸಿನಿಮಾವನ್ನು ಭಾರತೀಯ ಭಾಷೆಗಳ ಜೊತೆಗೆ ಇಂಗ್ಲೀಷ್​​ನಲ್ಲೂ ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ.

‘ಸಿನಿಮಾದ ವಸ್ತು ವಿಷಯದ ಬಗ್ಗೆ ಹೇಳುವುದಾದರೆ ಹಲವು ಪದರಗಳನ್ನು ಒಳಗೊಂಡ ಸೂಕ್ಷ್ಮವಾದ ಕತೆಯನ್ನು ‘ಟಾಕ್ಸಿಕ್’ ಹೊಂದಿದೆ. ಮೇಲ್ನೋಟಕ್ಕೆ ಗ್ಯಾಂಗ್​​ಸ್ಟರ್ ಎನಿಸಬಹುದಾದರೂ ಆಳದಲ್ಲಿ ಅದು ಬೇರೆಯದ್ದೇ ಅಂಶವನ್ನು ಒಳಗೊಂಡಿದೆ. ಮೇಲ್ನೋಟಕ್ಕೆ ಹಿಂಸಾತ್ಮಕ, ಆಕ್ಷನ್ ಸಿನಿಮಾ ಎನಿಸಿದರೂ ಸಹ ಅದು ಒಂದು ಸೈಕಾಲಜಿಕಲ್ ಥ್ರಿಲ್ಲರ್ ಸಹ ಆಗಿದೆ. ಜೊತೆಗೆ ಮಾನವೀಯ ಅಂಶಗಳನ್ನು ಸಾರುವ ಕತೆಯನ್ನು ಸಿನಿಮಾ ಒಳಗೊಂಡಿದೆ’ ಎಂದಿದ್ದಾರೆ.

ಇದನ್ನೂ ಓದಿ:ರಣ್​​ಬೀರ್ ಕಪೂರ್ ಜೊತೆ ನಟನೆ, ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾ ಒಂದು ಡಾರ್ಕ್ ಅಥವಾ ಋಣಾತ್ಮಕ ಪಾತ್ರವನ್ನು ಬಹಳ ಭಿನ್ನ ರೀತಿಯಲ್ಲಿ ಪ್ರೆಸೆಂಟ್ ಮಾಡುವ ಸಿನಿಮಾ. ಕೆಲವು ಅದ್ಭುತವಾದ ತಂತ್ರಜ್ಞರು ಆ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ನನ್ನ ನಿರ್ದೇಶಕಿ ಗೀತು ಮೋಹನ್​​ದಾಸ್, ಗ್ಯಾಂಗ್​​ಸ್ಟರ್ ಸಿನಿಮಾವನ್ನು ಸಂಪೂರ್ಣ ಭಿನ್ನ ದೃಷ್ಟಿಕೋನದಿಂದ ಕಟ್ಟಿಕೊಟ್ಟಿದ್ದಾರೆ. ನಾನಂತೂ ಆ ಸಿನಿಮಾನಲ್ಲಿ ನಟಿಸುವುದನ್ನು ಎಂಜಾಯ್ ಮಾಡಿದ್ದೇನೆ. ಸಿನಿಮಾ ಕಣ್ಣಿಗೆ ಹಬ್ಬವೇ ಆಗಲಿದೆ. ಜೊತೆಗೆ ಸಿನಿಮಾ ನೋಡುವ ಪ್ರೇಕ್ಷಕರ ಮನಸ್ಸಿನ ಮೇಲೂ ಸಹ ಗಾಢ ಪರಿಣಾಮವನ್ನು ಆ ಸಿನಿಮಾ ಬೀರಲಿದೆ’ ಎಂದಿದ್ದಾರೆ ಯಶ್.

ಇದೀಗ ಬಿಡುಗಡೆ ಆಗಿರುವ ಟೀಸರ್​​ಗಳಲ್ಲಿ ಹಿಂಸಾಚಾರ, ಲೈಂಗಿಕತೆಗೆ ಹೆಚ್ಚು ಒತ್ತು ನೀಡಿದಂತೆ ಕಾಣಿಸುತ್ತಿದೆ. ಆದರೆ ಯಶ್ ಅವರು ಇದೀಗ ಹೇಳಿರುವಂತೆ ಅದೆಲ್ಲ ಮೇಲ್ನೋಟದ ಕತೆಯಷ್ಟೆ. ಕತೆಯ ಅಂತರಾಳ ಬೇರೆಯೇ ಇದೆ. ಗೀತು ಮೋಹನ್​​ದಾಸ್ ಈ ಹಿಂದೆ ನಿರ್ದೇಶಿಸಿದ ಸಿನಿಮಾಗಳಲ್ಲಿ ಮಾನವೀಯ ಅಂಶಗಳಿಗೆ ಹೆಚ್ಚು ಒತ್ತು ಇತ್ತು. ಅದರಂತೆ ಈ ಸಿನಿಮಾನಲ್ಲಿಯೂ ಇರುವುದು ಖಾತ್ರಿ ಆಗಿದೆ. ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 am, Wed, 15 April 26

Follow Us
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ