AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವಂದುಕೊಂಡಂತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್

Yash movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಜೂನ್ ತಿಂಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮಾಯಣ’ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿ, ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಅಪರೂಪದ ವಿಷಯಗಳನ್ನು ಯಶ್ ಹಂಚಿಕೊಂಡಿದ್ದಾರೆ.

ನೀವಂದುಕೊಂಡಂತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್
Yash Toxic
ಮಂಜುನಾಥ ಸಿ.
|

Updated on:Apr 15, 2026 | 10:05 AM

Share

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಾರ್ಚ್ 19ರಂದೇ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಭೀತಿಯ ಕಾರಣ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಜೂನ್ 04 ರಂದು ಅದ್ಧೂರಿಯಾಗಿ ‘ಟಾಕ್ಸಿಕ್’ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮಾಯಣ’ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿ, ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಅಪರೂಪದ ವಿಷಯಗಳನ್ನು ಯಶ್ ಹಂಚಿಕೊಂಡಿದ್ದಾರೆ.

ಹಾಲಿವುಡ್​​ನ ಫ್ಯಾಂಡಾಂಗೊ ಮತ್ತು ರೋಟನ್ ಟೊಮೆಟೊ ಜೊತೆಗೆ ಮಾತನಾಡಿರುವ ನಟ ಯಶ್, ‘ರಾಮಾಯಣ’ ಸಿನಿಮಾದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ‘ಟಾಕ್ಸಿಕ್’ ಬಹಳ ಮಹಾತ್ವಾಕಾಂಕ್ಷೆಯ ಸಿನಿಮಾ. ಮೊದಲ ಬಾರಿಗೆ ನಾವು ಆ ಸಿನಿಮಾವನ್ನು ಭಾರತೀಯ ಭಾಷೆಗಳ ಜೊತೆಗೆ ಇಂಗ್ಲೀಷ್​​ನಲ್ಲೂ ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ.

‘ಸಿನಿಮಾದ ವಸ್ತು ವಿಷಯದ ಬಗ್ಗೆ ಹೇಳುವುದಾದರೆ ಹಲವು ಪದರಗಳನ್ನು ಒಳಗೊಂಡ ಸೂಕ್ಷ್ಮವಾದ ಕತೆಯನ್ನು ‘ಟಾಕ್ಸಿಕ್’ ಹೊಂದಿದೆ. ಮೇಲ್ನೋಟಕ್ಕೆ ಗ್ಯಾಂಗ್​​ಸ್ಟರ್ ಎನಿಸಬಹುದಾದರೂ ಆಳದಲ್ಲಿ ಅದು ಬೇರೆಯದ್ದೇ ಅಂಶವನ್ನು ಒಳಗೊಂಡಿದೆ. ಮೇಲ್ನೋಟಕ್ಕೆ ಹಿಂಸಾತ್ಮಕ, ಆಕ್ಷನ್ ಸಿನಿಮಾ ಎನಿಸಿದರೂ ಸಹ ಅದು ಒಂದು ಸೈಕಾಲಜಿಕಲ್ ಥ್ರಿಲ್ಲರ್ ಸಹ ಆಗಿದೆ. ಜೊತೆಗೆ ಮಾನವೀಯ ಅಂಶಗಳನ್ನು ಸಾರುವ ಕತೆಯನ್ನು ಸಿನಿಮಾ ಒಳಗೊಂಡಿದೆ’ ಎಂದಿದ್ದಾರೆ.

ಇದನ್ನೂ ಓದಿ:ರಣ್​​ಬೀರ್ ಕಪೂರ್ ಜೊತೆ ನಟನೆ, ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾ ಒಂದು ಡಾರ್ಕ್ ಅಥವಾ ಋಣಾತ್ಮಕ ಪಾತ್ರವನ್ನು ಬಹಳ ಭಿನ್ನ ರೀತಿಯಲ್ಲಿ ಪ್ರೆಸೆಂಟ್ ಮಾಡುವ ಸಿನಿಮಾ. ಕೆಲವು ಅದ್ಭುತವಾದ ತಂತ್ರಜ್ಞರು ಆ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ನನ್ನ ನಿರ್ದೇಶಕಿ ಗೀತು ಮೋಹನ್​​ದಾಸ್, ಗ್ಯಾಂಗ್​​ಸ್ಟರ್ ಸಿನಿಮಾವನ್ನು ಸಂಪೂರ್ಣ ಭಿನ್ನ ದೃಷ್ಟಿಕೋನದಿಂದ ಕಟ್ಟಿಕೊಟ್ಟಿದ್ದಾರೆ. ನಾನಂತೂ ಆ ಸಿನಿಮಾನಲ್ಲಿ ನಟಿಸುವುದನ್ನು ಎಂಜಾಯ್ ಮಾಡಿದ್ದೇನೆ. ಸಿನಿಮಾ ಕಣ್ಣಿಗೆ ಹಬ್ಬವೇ ಆಗಲಿದೆ. ಜೊತೆಗೆ ಸಿನಿಮಾ ನೋಡುವ ಪ್ರೇಕ್ಷಕರ ಮನಸ್ಸಿನ ಮೇಲೂ ಸಹ ಗಾಢ ಪರಿಣಾಮವನ್ನು ಆ ಸಿನಿಮಾ ಬೀರಲಿದೆ’ ಎಂದಿದ್ದಾರೆ ಯಶ್.

ಇದೀಗ ಬಿಡುಗಡೆ ಆಗಿರುವ ಟೀಸರ್​​ಗಳಲ್ಲಿ ಹಿಂಸಾಚಾರ, ಲೈಂಗಿಕತೆಗೆ ಹೆಚ್ಚು ಒತ್ತು ನೀಡಿದಂತೆ ಕಾಣಿಸುತ್ತಿದೆ. ಆದರೆ ಯಶ್ ಅವರು ಇದೀಗ ಹೇಳಿರುವಂತೆ ಅದೆಲ್ಲ ಮೇಲ್ನೋಟದ ಕತೆಯಷ್ಟೆ. ಕತೆಯ ಅಂತರಾಳ ಬೇರೆಯೇ ಇದೆ. ಗೀತು ಮೋಹನ್​​ದಾಸ್ ಈ ಹಿಂದೆ ನಿರ್ದೇಶಿಸಿದ ಸಿನಿಮಾಗಳಲ್ಲಿ ಮಾನವೀಯ ಅಂಶಗಳಿಗೆ ಹೆಚ್ಚು ಒತ್ತು ಇತ್ತು. ಅದರಂತೆ ಈ ಸಿನಿಮಾನಲ್ಲಿಯೂ ಇರುವುದು ಖಾತ್ರಿ ಆಗಿದೆ. ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 am, Wed, 15 April 26

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ