AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣದ ಕುರಿತು ಮತ್ತೊಂದು ಸಿನಿಮಾ; ಯಶ್​ ಜೊತೆ ನಟಿಸ್ತಾರೆ ರಣಬೀರ್​, ಆಲಿಯಾ?

ಬಾಲಿವುಡ್​ ನಿರ್ದೇಶಕ ನಿತೇಶ್ ತಿವಾರಿ ಅವರು ರಾಮಾಯಣ ಆಧರಿಸಿ ಸಿನಿಮಾ ಒಂದನ್ನು ಮಾಡುತ್ತಿದ್ದು ಈ ಚಿತ್ರದಲ್ಲಿ ರಣಬೀರ್, ಆಲಿಯಾ ಭಟ್ ಹಾಗೂ ಯಶ್ ನಟಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.

ರಾಮಾಯಣದ ಕುರಿತು ಮತ್ತೊಂದು ಸಿನಿಮಾ; ಯಶ್​ ಜೊತೆ ನಟಿಸ್ತಾರೆ ರಣಬೀರ್​, ಆಲಿಯಾ?
ಯಶ್
ರಾಜೇಶ್ ದುಗ್ಗುಮನೆ
|

Updated on: Jun 08, 2023 | 7:14 AM

Share

ರಾಕಿಂಗ್ ಸ್ಟಾರ್ ಯಶ್ (Yash) ಕುರಿತು ಕೇಳಿ ಬರುತ್ತಿರುವ ಸುದ್ದಿಗಳು ಒಂದೆರಡಲ್ಲ. ಅವರು ಈವರೆಗೆ ತಮ್ಮ 19ನೇ ಸಿನಿಮಾ ಘೋಷಣೆ ಮಾಡಿಲ್ಲ. ಈ ಕಾರಣಕ್ಕೆ ಗಾಸಿಪ್ ಮಂದಿ ಆ್ಯಕ್ಟೀವ್ ಆಗಿದ್ದಾರೆ. ಇವರ ಬಗ್ಗೆ ಒಂದಷ್ಟು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಹಾಗಂದ ಮಾತ್ರಕ್ಕೆ ಅವೆಲ್ಲವೂ ಸಂಪೂರ್ಣ ಸುಳ್ಳು ಎಂದು ಹೇಳೋಕೆ ಸಾಧ್ಯವಿಲ್ಲ. ನರ್ತನ್ ಜೊತೆ ಯಶ್ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಆ ಬಗ್ಗೆ ಅಪ್​ಡೇಟ್ ಸಿಕ್ಕಿಲ್ಲ. ಈ ಸಿನಿಮಾ ಸೆಟ್ಟೇರುವುದರಲ್ಲಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಯಶ್ ಚಿತ್ರದಿಂದ ಹಿಂದೆ ಸರಿದರು ಎಂಬುದು ಬಳಿಕ ಗೊತ್ತಾಗಿತ್ತು. ಈಗ ಯಶ್ ಕುರಿತು ಮತ್ತೊಂದು ಸುದ್ದಿ ಹರಿದಾಡಿದೆ.

‘ಕೆಜಿಎಫ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶ್ ಖ್ಯಾತಿ ಹಬ್ಬಿದೆ. ಅವರಿಗೆ ಬಾಲಿವುಡ್​ನಿಂದಲೂ ಆಫರ್ ಬರುತ್ತಿದೆ. ಆದರೆ, ಯಶ್ ಯಾಕೋ ಮನಸ್ಸು ಮಾಡುತ್ತಿಲ್ಲ. ಅವರು ತಾಳ್ಮೆಯಿಂದ ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ ಬಾಲಿವುಡ್​ ನಿರ್ದೇಶಕ ನಿತೇಶ್ ತಿವಾರಿ ಅವರು ರಾಮಾಯಣ ಆಧರಿಸಿ ಸಿನಿಮಾ ಒಂದನ್ನು ಮಾಡುತ್ತಿದ್ದು ಈ ಚಿತ್ರದಲ್ಲಿ ರಣಬೀರ್, ಆಲಿಯಾ ಭಟ್ ಹಾಗೂ ಯಶ್ ನಟಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. ಈ ಸಿನಿಮಾ ಡಿಸೆಂಬರ್ ವೇಳೆಗೆ ಸೆಟ್ಟೇರಲಿದೆ.

‘ಈಗಾಗಲೇ ರಾಮಾಯಣ ಚಿತ್ರಕ್ಕೆ ಸಿದ್ಧತೆ ನಡೆದಿದೆ. ರಣಬೀರ್ ಕಪೂರ್ ಅವರು ಅನಿಮೇಷನ್​ ಸ್ಟುಡಿಯೋ ಡಿಎನ್​ಇಜಿಗೆ ಭೇಟಿ ನೀಡಿದ್ದಾರೆ. ರಾಮಾಯಣ ಕೆಲಸದ ಪ್ರೊಗ್ರೆಸ್ ವೀಕ್ಷಿಸಲು ಅವರು ಅಲ್ಲಿಗೆ ಭೇಟಿ ನೀಡಿದ್ದರು. ರಣಬೀರ್ ಕಪೂರ್ ಅವರ ಲುಕ್​ ಟೆಸ್ಟ್ ನಡೆಯಬೇಕಷ್ಟೆ. ಇದರ ಜೊತೆ ನಿತೇಶ್ ತಿವಾರಿ ಕಚೇರಿಗೂ ಅವರು ಭೇಟಿ ನೀಡಿದ್ದಾರೆ’ ಎಂದು ಮೂಲಗಳು ಹೇಳಿರುವುದಾಗಿ ಪಿಂಕ್​ವಿಲ್ಲಾ ವರದಿ ಮಾಡಿದೆ.

ರಣಬೀರ್ ಕಪೂರ್ ರಾಮನ ಪಾತ್ರ ಮಾಡಿದರೆ ಆಲಿಯಾ ಸೀತೆಯ ಪಾತ್ರ ಮಾಡಲಿದ್ದಾರೆ. ಯಶ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರದ್ದು ಯಾವ ಪಾತ್ರ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿಲ್ಲ. ಅವರು ಸಿನಿಮಾಗೆ ಅಧಿಕೃತವಾಗಿ ಸಹಿ ಹಾಕುವುದು ಅಷ್ಟೇ ಬಾಕಿ ಇದೆ ಎನ್ನಲಾಗುತ್ತಿದೆ. ಈ ಮೊದಲು ಸೀತೆಯ ಪಾತ್ರವನ್ನು ಸಾಯಿ ಪಲ್ಲವಿ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಗ್ಗೆ ಅಪ್​ಡೇಟ್ ಸಿಕ್ಕಿಲ್ಲ.

ಇದನ್ನೂ ಓದಿ: Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ರಾಮಾಯಣ ಚಿತ್ರವನ್ನು ಅಲ್ಲು ಅರವಿಂದ್, ಮಧು ಮಂತೇನಾ ಹಾಗೂ ನಮಿತ್ ಮಲ್ಹೋತ್ರಾ ನಿರ್ಮಾಣ ಮಾಡಲಿದ್ದಾರೆ. ನಿತೇಶ್ ತಿವಾರಿ ಹಾಗೂ ರವಿ ಉದ್ಯಾವರ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ದೀಪಾವಳಿಯಲ್ಲಿ ಅಧಿಕೃತ ಘೋಷಣೆ ಆಗೋ ಸಾಧ್ಯತೆ ಇದೆ.  ಈಗಾಗಲೇ ‘ಆದಿಪುರುಷ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇದು ಕೂಡ ರಾಮಾಯಣ ಆಧರಿಸಿದೆ. ಹೀಗಿರುವಾಗಲೇ ಮತ್ತೊಂದು ಸಿನಿಮಾ ಸಿದ್ಧ ಆಗುತ್ತಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು