AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​​ಗೆ ‘ಕೆಜಿಎಫ್’​​ನಲ್ಲಿ ನಕಲಿ ಗೋಲ್ಡ್​ ಬಿಸ್ಕತ್​, ‘ರಾಮಾಯಣ’ದಲ್ಲಿ ರಿಯಲ್ ಚಿನ್ನ; ಏನಿದು ಕಥೆ?

ಸಿನಿಮಾದಲ್ಲಿ ದೊಡ್ಡ ಮಟ್ಟದಲ್ಲಿ ಚಿನ್ನವನ್ನು ತೋರಿಸಬೇಕಿದ್ದರೆ ಸಾಮಾನ್ಯವಾಗಿ ನಕಲಿ ಚಿನ್ನ ಬಳಕೆ ಮಾಡಲಾಗುತ್ತದೆ. ಅಸಲಿ ಚಿನ್ನ ಬಳಕೆ ಮಾಡಿದರೆ ಸಿನಿಮಾದ ಬಜೆಟ್ ಹೆಚ್ಚಲಿದೆ. ಆದರೆ, ‘ರಾಮಾಯಣ’ ಸಿನಿಮಾ ನಿರ್ಮಾಪಕರು ಬಜೆಟ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಂತಿಲ್ಲ.

ಯಶ್​​ಗೆ ‘ಕೆಜಿಎಫ್’​​ನಲ್ಲಿ ನಕಲಿ ಗೋಲ್ಡ್​ ಬಿಸ್ಕತ್​, ‘ರಾಮಾಯಣ’ದಲ್ಲಿ ರಿಯಲ್ ಚಿನ್ನ; ಏನಿದು ಕಥೆ?
ಯಶ್
ರಾಜೇಶ್ ದುಗ್ಗುಮನೆ
|

Updated on: May 21, 2024 | 7:04 AM

Share

ಯಶ್ (Yash) ನಟನೆಯ ‘ಕೆಜಿಎಫ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾದ ಕಥೆ ಇರೋದು ಚಿನ್ನದ ಮೇಲೆ. ಗೋಲ್ಡ್ ಬಿಸ್ಕತ್​ಗಳ ಸ್ಮಗ್ಲಿಂಗ್ ಕಥೆಯನ್ನು ಈ ಚಿತ್ರ ಹೊಂದಿದೆ. ಇದರಲ್ಲಿ ಬಳಕೆ ಆಗಿರೋದು ನಕಲಿ ಚಿನ್ನವಾಗಿತ್ತು. ಈ ಚಿತ್ರಕ್ಕೆ ಪಾರ್ಟ್​ 3 ಬರಬೇಕಿದೆ. ಹೀಗಿರುವಾಗಲೇ ಯಶ್ ಅವರು ಈಗ ನಿಜವಾದ ಚಿನ್ನದ ಜೊತೆ ಡೀಲ್ ಮಾಡಬೇಕಿದೆ. ‘ರಾಮಾಯಣ’ ಸಿನಿಮಾದಲ್ಲಿ ಅಸಲಿ ಗೋಲ್ಡ್ ಬಳಕೆಗೆ ನಿರ್ದೇಶಕ ನಿತೇಶ್ ತಿವಾರಿ ಮುಂದಾಗಿದ್ದಾರೆ.

ಸಿನಿಮಾದಲ್ಲಿ ದೊಡ್ಡ ಮಟ್ಟದಲ್ಲಿ ಚಿನ್ನವನ್ನು ತೋರಿಸಬೇಕಿದ್ದರೆ ಸಾಮಾನ್ಯವಾಗಿ ನಕಲಿ ಚಿನ್ನ ಬಳಕೆ ಮಾಡಲಾಗುತ್ತದೆ. ಅಸಲಿ ಚಿನ್ನ ಬಳಕೆ ಮಾಡಿದರೆ ಸಿನಿಮಾದ ಬಜೆಟ್ ಹೆಚ್ಚಲಿದೆ. ಆದರೆ, ‘ರಾಮಾಯಣ’ ಸಿನಿಮಾ ನಿರ್ಮಾಪಕರು ಬಜೆಟ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಂತಿಲ್ಲ. ಈ ಸಿನಿಮಾದ ಬಜೆಟ್ 850 ಕೋಟಿ ರೂಪಾಯಿ ಮೀರಿದೆ ಎಂದು ಈಗಾಗಲೇ ವರದಿ ಆಗಿದೆ. ಅಸಲಿ ಚಿನ್ನ ಬಳಕೆ ಮಾಡುತ್ತಿರುವುದು ಕೂಡ ಚಿತ್ರಕ್ಕೆ ದುಬಾರಿ ಆಗಿದೆ.

ಯಶ್​ ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ನಿಜವಾದ ಚಿನ್ನದ ಜ್ಯುವೆಲರಿ ಬಳಕೆ ಮಾಡಲಾಗುತ್ತಿದೆ. ಚಿನ್ನದ ಕಿರೀಟ ಕೂಡ ಇರಲಿದೆ. ‘ಕೆಜಿಎಫ್​’ನಲ್ಲಿ ನಕಲಿ ಗೋಲ್ಡ್ ಬಿಸ್ಕತ್ ಬಳಕೆ ಮಾಡಲಾಗಿತ್ತು. ಈಗ ‘ರಾಮಾಯಣ’ಕ್ಕಾಗಿ ಯಶ್ ನಿಜವಾದ ಗೋಲ್ಡ್​ಗಳ ಜೊತೆ ಡೀಲ್ ಮಾಡಬೇಕಿದೆ. ಯಶ್ ಜೊತೆ ರಾಮನ ಪಾತ್ರ ಮಾಡುತ್ತಿರುವ ರಣಬೀರ್ ಕಪೂರ್, ಸೀತೆ ಪಾತ್ರ ಮಾಡುತ್ತಿರುವ ಸಾಯಿ ಪಲ್ಲವಿಗೂ ಅಸಲಿ ಚಿನ್ನ ಬಳಕೆ ಆಗಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಮುಂದಿನ ಏಪ್ರಿಲ್​ನಲ್ಲಿ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ