AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಯಾವಾಗ ಆರಂಭಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಆಗಸ್ಟ್ 8ರಿಂದ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಆರಂಭಿಸಲಿದ್ದಾರೆ ಎಂದು ವರದಿ ಆಗಿದೆ.

ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್
ಯಶ್
ರಾಜೇಶ್ ದುಗ್ಗುಮನೆ
| Edited By: |

Updated on:Aug 08, 2024 | 11:30 AM

Share

ನಟ ಯಶ್ ಅವರು ಸದ್ಯ ಟೆಂಪಲ್ ರನ್​ನಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಪತ್ನಿ ರಾಧಿಕಾ ಪಂಡಿತ್ ಹಾಗೂ ‘ಟಾಕ್ಸಿಕ್’ ಚಿತ್ರದ ನಿರ್ಮಾಪಕ ವೆಂಕಟ್ ನಾರಾಯಣ್ ಅವರು ಜೊತೆಯಾಗಿದ್ದಾರೆ. ಈಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟ್ ಆರಂಭಿಸಲಿದ್ದಾರೆ. ಅದೂ ಅವರ ಲಕ್ಕಿ ಡೇಟ್ ನಂಬರ್​ನಿಂದ ಅನ್ನೋದು ವಿಶೇಷ. ಈ ಬಗ್ಗೆ ಬಾಲಿವುಡ್ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಆಗಸ್ಟ್ 8ರಂದು ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ. ಯಶ್ ಅವರು ಇದೇ ದಿನಾಂಕದಂದು ಸಿನಿಮಾ ಶೂಟಿಂಗ್ ಆರಂಭಿಸುವುದಕ್ಕೂ ಒಂದು ಕಾರಣ ಇದೆ. ಯಶ್ ಅವರ ಜನ್ಮದಿನ ಜನವರಿ 8. ಹೀಗಾಗಿ, ಎಂಟನೇ ನಂಬರ್​ನ ಅವರು ಲಕ್ಕಿ ಎಂದು ಪರಿಗಣಿಸಿದ್ದಾರೆ. ಈ ಕಾರಣದಿಂದಲೇ ಯಶ್ ಅವರು ‘ಟಾಕ್ಸಿಕ್’ ಚಿತ್ರವನ್ನು ಡಿಸೆಂಬರ್ 8ರಂದೇ ಘೋಷಣೆ ಮಾಡಿದ್ದರು.

ಇದನ್ನೂ ಓದಿ: ಬಾಡಿಗಾರ್ಡ್​ ಮೇಲೆ ಏಕಾಏಕಿ ಗರಂ ಆದ ಯಶ್​; ಧರ್ಮಸ್ಥಳದಲ್ಲಿ ಅಂಥದ್ದೇನಾಯ್ತು?

ಗುರುವಾರದ ದಿನಾಂಕ 8-8-2024. 2+0+2+4 ಕೂಡಿದಾಗ ಬರೋದು ಕೂಡ 8. ಹೀಗಾಗಿ, ಆಗಸ್ಟ್ 8ರಿಂದ ಯಶ್ ಅವರು ಶೂಟಿಂಗ್ ಆರಂಭ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಆದಷ್ಟು ಬೇಗ ಸಿನಿಮಾ ತೆರೆಮೇಲೆ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಯಶ್ ಅವರು ಹಲವು ದೇವಾಲಯಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಸಿನಿಮಾ ಶೂಟಿಂಗ್​ಗೂ ಮೊದಲು ಅವರು ದೇವರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಹೊರವಲಯ ನೆಲಮಂಗಲದಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್​ ಹಾಕಲಾಗಿದೆ. ಇಲ್ಲಿಯೇ ಸಿನಿಮಾ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಪಾತ್ರವರ್ಗ ಇನ್ನೂ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Wed, 7 August 24

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್