AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್ ಎರಡನೇ ಬಾಲಿವುಡ್ ಪ್ರಾಜೆಕ್ಟ್ ಶಾರುಖ್ ಜೊತೆ? ನಡೆಯುತ್ತಿದೆ ಮಾತುಕತೆ

ಬಾಲಿವುಡ್​ನಲ್ಲಿ ನಿತೇಶ್ ತಿವಾರಿ ಅವರು ರಾಮಾಯಣ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರಂತೆ. ಇದರ ಜೊತೆಗೆ ಯಶ್ ಅವರು ಬಾಲಿವುಡ್ ನಟ ಶಾರುಖ್ ಖಾನ್ ಜೊತೆ ಕೆಲಸ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Yash: ಯಶ್ ಎರಡನೇ ಬಾಲಿವುಡ್ ಪ್ರಾಜೆಕ್ಟ್ ಶಾರುಖ್ ಜೊತೆ? ನಡೆಯುತ್ತಿದೆ ಮಾತುಕತೆ
ಯಶ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on:Jan 30, 2024 | 11:06 AM

Share

‘ಕೆಜಿಎಫ್ 2’ ಚಿತ್ರದಿಂದ ಯಶ್ (Yash) ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಸದ್ಯ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗಲಿದೆ. ಇದಾದ ಬಳಿಕ ಅವರು ನಿತೇಶ್ ತಿವಾರಿ ನಿರ್ದೇಶನ ಮಾಡಲಿರುವ ‘ರಾಮಾಯಣ’ ಸಿನಿಮಾದಲ್ಲಿ (Ramayana Movie) ನಟಿಸಲಿದ್ದಾರೆ. ಈಗ ಅವರು ಮತ್ತೊಂದು ಬಾಲಿವುಡ್ ಪ್ರಾಜೆಕ್ಟ್ ಒಪ್ಪಿಕೊಳ್ಳಲು ರೆಡಿ ಆಗಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ವಿಚಾರ ಕೇಳಿ ಯಶ್​ ಫ್ಯಾನ್ಸ್​ಗೆ ಖುಷಿ ಆಗಿದೆ.

ನಿತೇಶ್ ತಿವಾರಿ ಅವರು ಬಾಲಿವುಡ್​ನಲ್ಲಿ ರಾಮಾಯಣ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರಂತೆ. ಇದರ ಜೊತೆಗೆ ಯಶ್ ಅವರು ಶಾರುಖ್ ಖಾನ್ ಜೊತೆ ಕೆಲಸ ಮಾಡೋ ಇಂಗಿತ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಒಟ್ಟಾಗಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದಾರೆ. ಆದರೆ, ಪರ್ಫೆಕ್ಟೆ ಸ್ಕ್ರಿಪ್ಟ್​ಗಾಗಿ ಇವರು ಕಾಯುತ್ತಿದ್ದಾರೆ.

ಶಾರುಖ್ ಖಾನ್ ಹಾಗೂ ಯಶ್ ಇಬ್ಬರೂ ದೊಡ್ಡ ಅಭಿಮಾನಿಬಳಗ ಹೊಂದಿದ್ದಾರೆ. ಸಿನಿಮಾ ಒಪ್ಪಿಕೊಳ್ಳುವಲ್ಲಿ ಇಬ್ಬರಿಗೂ ಆತುರ ಇಲ್ಲ. ಅಭಿಮಾನಿಗಳನ್ನು ನಿರಾಸೆ ಮಾಡಲು ಇಬ್ಬರೂ ಸಿದ್ಧರಿಲ್ಲ. ಹೀಗಾಗಿ, ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಬೇಕು ಎಂದರೆ ಸ್ಕ್ರಿಪ್ಟ್​ ಸ್ಟ್ರಾಂಗ್ ಆಗಿಯೇ ಇರಬೇಕು.

ಇನ್ನು, ಯಶ್ ಅವರು ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್​​ಟೇನ್​ಮೆಂಟ್ ಜೊತೆ ಒಂದು ಹೊಸ ಪ್ರಾಜೆಕ್ಟ್​ಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಕೂಡ ಇರುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Chikkanna: ಯಶ್-ರಾಧಿಕಾ ದಂಪತಿ ಜೊತೆ ಬ್ರೇಕ್​ಫಾಸ್ಟ್ ಮಾಡಿದ ‌ಚಿಕ್ಕಣ್ಣ

ಯಶ್ ಅವರ ಸಂಪೂರ್ಣ ಗಮನ ‘ಟಾಕ್ಸಿಕ್’ ಸಿನಿಮಾ ಮೇಲಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಮಾತ್ರ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಕರೀನಾ ಕಪೂರ್ ನಾಯಕಿ ಪಾತ್ರ ಮಾಡಲಿದ್ದಾರೆ ಎನ್ನುವ ಸುದ್ದಿ ಇದೆ. ಇದನ್ನು ಕರೀನಾ ತಂಡದವರು ಪರೋಕ್ಷವಾಗಿ ಒಪ್ಪಿಕೊಂಡಿದ್ದರು. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಚಿತ್ರ ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:59 am, Tue, 30 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!