‘ಕಲ್ಕಿ’ಯ ಕೊಂಡಾಡಿದ ಯಶ್, ಸಿನಿಮಾ ಬಗ್ಗೆ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಯಶ್, ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಿಸಿ, ಸಿನಿಮಾವನ್ನು ಕೊಂಡಾಡಿ ಟ್ವೀಟ್ ಮಾಡಿದ್ದಾರೆ. ಅದ್ಭುತವಾದ ಸಿನಿಮಾ ನೀಡಿದ್ದಕ್ಕೆ ಚಿತ್ರತಂಡಕ್ಕೆ ಧನ್ಯವಾದ ಹೇಳಿದ್ದಾರೆ.

‘ಕಲ್ಕಿ’ಯ ಕೊಂಡಾಡಿದ ಯಶ್, ಸಿನಿಮಾ ಬಗ್ಗೆ ಹೇಳಿದ್ದೇನು?
Follow us
|

Updated on: Jun 28, 2024 | 6:51 PM

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ನಿನ್ನೆ (ಜೂನ್ 27) ಬಿಡುಗಡೆ ಆಗಿ ಎಲ್ಲೆಡೆ ಸದ್ದು ಮಾಡುತ್ತಿದೆ. ಎಲ್ಲ ವರ್ಗದ ಪ್ರೇಕ್ಷಕರಿಂದಲೂ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ತಮ್ಮ ಕುಟುಂಬ ಸದಸ್ಯರನ್ನು ಕರೆದುಕೊಂಡು ಬಂದು ಸಿನಿಮಾ ತೋರಿಸುತ್ತಿದ್ದಾರೆ. ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಮಾತ್ರವೇ ಅಲ್ಲದೆ ಸೆಲೆಬ್ರಿಟಿಗಳು ಸಹ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಖುಷಿ ಪಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಳ್ಳುತ್ತಿದ್ದಾರೆ.

ಅಪರೂಪಕ್ಕೆ ಟ್ವೀಟ್ ಮಾಡುವ ನಟ ಯಶ್ ಇದೀಗ ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಿಸಿ ಸಿನಿಮಾ ಬಗ್ಗೆ ಮೆಚ್ಚಿ ಟ್ವೀಟ್ ಮಾಡಿದ್ದಾರೆ. ‘ಕಣ್ಣಿಗೆ ಹಬ್ಬವಾಗುವ ರೀತಿ ಅದ್ಭುತ ದೃಶ್ಯಗಳನ್ನು ಕಟ್ಟಿಕೊಟ್ಟಿರುವ ‘ಕಲ್ಕಿ 2898 ಎಡಿ’ ಚಿತ್ರತಂಡಕ್ಕೆ ಶುಭಾಶಯಗಳು. ಈ ಸಿನಿಮಾವು ಹೆಚ್ಚು ಸೃಜನಶೀಲವಾಗಿ ಕತೆಗಳನ್ನು ಹೇಳಲು ದಾರಿ ತೋರಿಸಿಕೊಟ್ಟಿದೆ. ನಿರ್ದೇಶಕ ನಾಗ್ ಅಶ್ವಿನ್ ಮತ್ತು ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್, ಸಿನಿಮಾ ಮಂದಿ ದೊಡ್ಡದಾಗಿ ಕನಸು ಕಂಡು ದೊಡ್ಡ ಹೆಜ್ಜೆಗಳನ್ನು ಇಡಲು ಧೈರ್ಯ ಕೊಟ್ಟಿದೆ’ ಎಂದಿದ್ದಾರೆ.

ಇದನ್ನೂ ಓದಿ:‘ಕಲ್ಕಿ’ ಸಿನಿಮಾಕ್ಕೆ ಪ್ರಭಾಸ್ ಅನ್ನೇ ಆಯ್ಕೆ ಮಾಡಿದ್ದೇಕೆ: ನಿರ್ದೇಶಕ ಕೊಟ್ಟ ಕಾರಣವಿದು?

ಮುಂದುವರೆದು, ‘ಡಾರ್ಲಿಂಗ್ ಪ್ರಭಾಸ್, ಅಮಿತಾಬ್ ಬಚ್ಚನ್ ಸರ್, ಕಮಲ್ ಹಾಸನ್ ಸರ್ ಮತ್ತು ದೀಪಿಕಾ ಪಡುಕೋಣೆ ಹಾಗೂ ಕೆಲವು ಸರ್ಪ್ರೈಸಿಂಗ್ ಕ್ಯಾಮಿಯೋ ಒಟ್ಟಿಗೆ ನೋಡುವುದು ಒಂದು ಅದ್ಭುತವಾದ ಅನುಭವ. ಇಂಥಹಾ ಒಂದು ಅದ್ಭುತವಾದ ಸಿನಿಮಾವನ್ನು ಪ್ರೇಕ್ಷಕರ ಎದುರು ತಂದ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು, ಈ ಸಿನಿಮಾ ನಿಜಕ್ಕೂ ಬೆಳ್ಳಿತೆರೆಯನ್ನು ಬೆಳಗಿಸುತ್ತಿದೆ’ ಎಂದಿದ್ದಾರೆ.

ಯಶ್ ಸಹ ಭಾರಿ ಬಜೆಟ್​ನ ಸಿನಿಮಾ ಒಂದನ್ನು ನೀಡಲು ಶ್ರಮಪಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾವನ್ನು ನಟ ಯಶ್ ಘೋಷಣೆ ಮಾಡಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾವನ್ನು ಮಲಯಾಳಂ ನಟಿ ಮತ್ತು ನಿರ್ದೇಶಕಿ ಗೀತು ಮೋಹನ್​ದಾಸ್ ‘ಟಾಕ್ಸಿಕ್​’ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್​ನವರು ಸಿನಿಮಾದ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಬಾಲಿವುಡ್ ನಟಿಯರು ನಟಿಸುತ್ತಿದ್ದಾರೆ. ಹಾಲಿವುಡ್​ನ ಆಕ್ಷನ್ ಕೊರಿಯೋಗ್ರಾಫರ್ ‘ಟಾಕ್ಸಿಕ್’ ಸಿನಿಮಾಕ್ಕೆ ಫೈಟ್ಸ್ ಕಂಪೋಸ್ ಮಾಡಲಿದ್ದಾರೆ. ಸಿನಿಮಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ