AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ
ಯಶ್
ರಾಜೇಶ್ ದುಗ್ಗುಮನೆ
|

Updated on: May 17, 2024 | 7:31 AM

Share

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರಕ್ಕೆ ಯಶ್ (Yash) ನಿರ್ಮಾಪಕನಾಗಿರೋದು ಗೊತ್ತಿರುವ ವಿಚಾರವೇ. ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡರೆ, ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರೆ. ಅವರು ಈ ಪಾತ್ರವನ್ನು ಒಪ್ಪಿಕೊಳ್ಳುವುದರ ಜೊತೆಗೆ ನಿರ್ಮಾಪಕನೂ ಆಗಿರುವುದರಿಂದ ಅವರಿಗೆ ಲಾಭದಲ್ಲಿ ಪಾಲು ಸಿಗಲಿದೆ. ಈ ಚಿತ್ರದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗದೆ ಇದ್ದರೂ ಒಂದಷ್ಟು ವಿಚಾರಗಳು ಜೋರಾಗಿ ಚರ್ಚೆಯಲ್ಲಿದೆ. ಈ ಚಿತ್ರಕ್ಕೆ ಬಂಡವಾಳ ಹೂಡಿರೋ ಯಶ್​ಗೆ ಲಾಭದಲ್ಲಿ ಸಿಗೋ ಪಾಲೆಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

ಏಪ್ರಿಲ್​ನಲ್ಲಿ ಯಶ್ ಅವರು ‘ರಾಮಾಯಣ’ದ ಬಗ್ಗೆ ಮಾತನಾಡಿದ್ದರು. ಸಿನಿಮಾದ ಪಾತ್ರದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಮಾಡಿರಲಿಲ್ಲ. ಆದರೆ, ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದು ಏಕೆ ಎಂದು ವಿವರಿಸಿದ್ದರು. ಇದು ಅವರ ಕನಸಿನ ಪ್ರಾಜೆಕ್ಟ್​ ಅಂತೆ. ಹೀಗಾಗಿ ಸಿನಿಮಾ ನಿರ್ಮಾಣ ಮಾಡಲು ಮುಂದಾದರು. ಯಶ್ ಅವರನ್ನು ರಾವಣನಾಗಿ ಫ್ಯಾನ್ಸ್ ಹೇಗೆ ಸ್ವೀಕರಿಸುತ್ತಾರೆ ಅನ್ನೋ ಕುತೂಹಲ ಅನೇಕರಿಗೆ ಮೂಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ: ರಣ್​ಬೀರ್-ಸಾಯಿ ಪಲ್ಲವಿ ಫೋಟೊ ಲೀಕ್

‘ರಾಮಾಯಣ’ದ ಬಜೆಟ್ 835 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಲಿದೆ. ಇದರ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ 600 ದಿನಗಳ ಅವಶ್ಯಕತೆ ಇದೆಯಂತೆ. ಗ್ಲೋಬಲ್ ಲೆವೆಲ್​ನಲ್ಲಿ ಸಿನಿಮಾ ಮಾಡಲು ತಂಡ ನಿರ್ಧರಿಸಿದೆ. ಸಾಯಿ ಪಲ್ಲವಿ ಅವರು ಸೀತೆಯಾಗಿ, ಅರುಣ್ ಗೋವಿಲ್ ಹಾಗೂ ಲಾರಾ ದತ್ ಅವರು ದಶರಥ ಹಾಗೂ ಕೈಕೇಯಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಸೆಟ್​ ಫೋಟೋ ವೈರಲ್ ಆಗಿದೆ. ಈ ಲೀಕ್ ತಡೆಯಲು ಫ್ಯಾನ್ಸ್ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ