AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ
ಯಶ್
ರಾಜೇಶ್ ದುಗ್ಗುಮನೆ
|

Updated on: May 17, 2024 | 7:31 AM

Share

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರಕ್ಕೆ ಯಶ್ (Yash) ನಿರ್ಮಾಪಕನಾಗಿರೋದು ಗೊತ್ತಿರುವ ವಿಚಾರವೇ. ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡರೆ, ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರೆ. ಅವರು ಈ ಪಾತ್ರವನ್ನು ಒಪ್ಪಿಕೊಳ್ಳುವುದರ ಜೊತೆಗೆ ನಿರ್ಮಾಪಕನೂ ಆಗಿರುವುದರಿಂದ ಅವರಿಗೆ ಲಾಭದಲ್ಲಿ ಪಾಲು ಸಿಗಲಿದೆ. ಈ ಚಿತ್ರದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗದೆ ಇದ್ದರೂ ಒಂದಷ್ಟು ವಿಚಾರಗಳು ಜೋರಾಗಿ ಚರ್ಚೆಯಲ್ಲಿದೆ. ಈ ಚಿತ್ರಕ್ಕೆ ಬಂಡವಾಳ ಹೂಡಿರೋ ಯಶ್​ಗೆ ಲಾಭದಲ್ಲಿ ಸಿಗೋ ಪಾಲೆಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

ಏಪ್ರಿಲ್​ನಲ್ಲಿ ಯಶ್ ಅವರು ‘ರಾಮಾಯಣ’ದ ಬಗ್ಗೆ ಮಾತನಾಡಿದ್ದರು. ಸಿನಿಮಾದ ಪಾತ್ರದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಮಾಡಿರಲಿಲ್ಲ. ಆದರೆ, ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದು ಏಕೆ ಎಂದು ವಿವರಿಸಿದ್ದರು. ಇದು ಅವರ ಕನಸಿನ ಪ್ರಾಜೆಕ್ಟ್​ ಅಂತೆ. ಹೀಗಾಗಿ ಸಿನಿಮಾ ನಿರ್ಮಾಣ ಮಾಡಲು ಮುಂದಾದರು. ಯಶ್ ಅವರನ್ನು ರಾವಣನಾಗಿ ಫ್ಯಾನ್ಸ್ ಹೇಗೆ ಸ್ವೀಕರಿಸುತ್ತಾರೆ ಅನ್ನೋ ಕುತೂಹಲ ಅನೇಕರಿಗೆ ಮೂಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ: ರಣ್​ಬೀರ್-ಸಾಯಿ ಪಲ್ಲವಿ ಫೋಟೊ ಲೀಕ್

‘ರಾಮಾಯಣ’ದ ಬಜೆಟ್ 835 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಲಿದೆ. ಇದರ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ 600 ದಿನಗಳ ಅವಶ್ಯಕತೆ ಇದೆಯಂತೆ. ಗ್ಲೋಬಲ್ ಲೆವೆಲ್​ನಲ್ಲಿ ಸಿನಿಮಾ ಮಾಡಲು ತಂಡ ನಿರ್ಧರಿಸಿದೆ. ಸಾಯಿ ಪಲ್ಲವಿ ಅವರು ಸೀತೆಯಾಗಿ, ಅರುಣ್ ಗೋವಿಲ್ ಹಾಗೂ ಲಾರಾ ದತ್ ಅವರು ದಶರಥ ಹಾಗೂ ಕೈಕೇಯಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಸೆಟ್​ ಫೋಟೋ ವೈರಲ್ ಆಗಿದೆ. ಈ ಲೀಕ್ ತಡೆಯಲು ಫ್ಯಾನ್ಸ್ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್