Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

Yash: ‘ರಾಮಾಯಣ’ ಸಿನಿಮಾ ಲಾಭದಲ್ಲಿ ಯಶ್​ಗೆ ಸಿಗೋ ಪಾಲೆಷ್ಟು? ಇಲ್ಲಿದೆ ವಿವರ
ಯಶ್

Updated on: May 17, 2024 | 7:31 AM

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರಕ್ಕೆ ಯಶ್ (Yash) ನಿರ್ಮಾಪಕನಾಗಿರೋದು ಗೊತ್ತಿರುವ ವಿಚಾರವೇ. ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡರೆ, ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರೆ. ಅವರು ಈ ಪಾತ್ರವನ್ನು ಒಪ್ಪಿಕೊಳ್ಳುವುದರ ಜೊತೆಗೆ ನಿರ್ಮಾಪಕನೂ ಆಗಿರುವುದರಿಂದ ಅವರಿಗೆ ಲಾಭದಲ್ಲಿ ಪಾಲು ಸಿಗಲಿದೆ. ಈ ಚಿತ್ರದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗದೆ ಇದ್ದರೂ ಒಂದಷ್ಟು ವಿಚಾರಗಳು ಜೋರಾಗಿ ಚರ್ಚೆಯಲ್ಲಿದೆ. ಈ ಚಿತ್ರಕ್ಕೆ ಬಂಡವಾಳ ಹೂಡಿರೋ ಯಶ್​ಗೆ ಲಾಭದಲ್ಲಿ ಸಿಗೋ ಪಾಲೆಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿರುವುದು 800+ ಕೋಟಿ ರೂಪಾಯಿ ಬಜೆಟ್​ನಲ್ಲಿ. ಈ ಚಿತ್ರಕ್ಕಾಗಿ ಯಶ್ ಅವರು ಲಾಭದಲ್ಲಿ 20-30 ಪರ್ಸೆಂಟ್ ಪಡೆಯಲಿದ್ದಾರಂತೆ. ಅಂದರೆ, ಅವರ ಹೂಡಿಕೆ ಕೂಡ ಇಷ್ಟೇ ದೊಡ್ಡ ಮಟ್ಟದಲ್ಲಿ ಇರಲಿದೆ ಅನ್ನೋದು ಪಕ್ಕಾ ಆಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೂ ಅಧಿಕೃತ ಆಗಿಲ್ಲ.

ಏಪ್ರಿಲ್​ನಲ್ಲಿ ಯಶ್ ಅವರು ‘ರಾಮಾಯಣ’ದ ಬಗ್ಗೆ ಮಾತನಾಡಿದ್ದರು. ಸಿನಿಮಾದ ಪಾತ್ರದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಮಾಡಿರಲಿಲ್ಲ. ಆದರೆ, ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದು ಏಕೆ ಎಂದು ವಿವರಿಸಿದ್ದರು. ಇದು ಅವರ ಕನಸಿನ ಪ್ರಾಜೆಕ್ಟ್​ ಅಂತೆ. ಹೀಗಾಗಿ ಸಿನಿಮಾ ನಿರ್ಮಾಣ ಮಾಡಲು ಮುಂದಾದರು. ಯಶ್ ಅವರನ್ನು ರಾವಣನಾಗಿ ಫ್ಯಾನ್ಸ್ ಹೇಗೆ ಸ್ವೀಕರಿಸುತ್ತಾರೆ ಅನ್ನೋ ಕುತೂಹಲ ಅನೇಕರಿಗೆ ಮೂಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ: ರಣ್​ಬೀರ್-ಸಾಯಿ ಪಲ್ಲವಿ ಫೋಟೊ ಲೀಕ್

‘ರಾಮಾಯಣ’ದ ಬಜೆಟ್ 835 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಲಿದೆ. ಇದರ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ 600 ದಿನಗಳ ಅವಶ್ಯಕತೆ ಇದೆಯಂತೆ. ಗ್ಲೋಬಲ್ ಲೆವೆಲ್​ನಲ್ಲಿ ಸಿನಿಮಾ ಮಾಡಲು ತಂಡ ನಿರ್ಧರಿಸಿದೆ. ಸಾಯಿ ಪಲ್ಲವಿ ಅವರು ಸೀತೆಯಾಗಿ, ಅರುಣ್ ಗೋವಿಲ್ ಹಾಗೂ ಲಾರಾ ದತ್ ಅವರು ದಶರಥ ಹಾಗೂ ಕೈಕೇಯಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಸೆಟ್​ ಫೋಟೋ ವೈರಲ್ ಆಗಿದೆ. ಈ ಲೀಕ್ ತಡೆಯಲು ಫ್ಯಾನ್ಸ್ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us