AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು

ಯಶ್​ ಅವರು ಪತ್ನಿ ರಾಧಿಕಾ ಪಂಡಿತ್​ ಜತೆ ದುಬೈಗೆ ತೆರಳಿದ್ದಾರೆ. ‘ಕೆಜಿಎಫ್​ 2’ ತೆರೆಕಾಣೋಕೆ ಇನ್ನೂ ಸಮಯವಿದೆ. ಸಿನಿಮಾ ತಂಡ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಇದ್ದು, ಶೀಘ್ರವೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದೆ.

ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು
ಯಶ್​
TV9 Web
| Edited By: |

Updated on: Oct 14, 2021 | 8:48 PM

Share

ಯಶ್​ ಸ್ಟಾರ್​ಡಮ್​ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಏನೇ ಮಾಡಿದರೂ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತದೆ. ‘ಕೆಜಿಎಫ್​’ ಸಿನಿಮಾ ಅಷ್ಟು ದೊಡ್ಡಮಟ್ಟದ ಖ್ಯಾತಿ ತಂದುಕೊಟ್ಟಿದೆ. ಈಗ ಯಶ್​ ಸಿಂಹದ ಜತೆ ನಿಂತು ಪೋಸ್ ನೀಡಿದ್ದಾರೆ. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಯಶ್​ ಅವರು ಪತ್ನಿ ರಾಧಿಕಾ ಪಂಡಿತ್​ ಜತೆ ದುಬೈಗೆ ತೆರಳಿದ್ದಾರೆ. ‘ಕೆಜಿಎಫ್​ 2’ ತೆರೆಕಾಣೋಕೆ ಇನ್ನೂ ಸಮಯವಿದೆ. ಸಿನಿಮಾ ತಂಡ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಇದ್ದು, ಶೀಘ್ರವೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದೆ. ಅದಕ್ಕೂ ಮೊದಲು ಯಶ್​ ರಜೆಯ ಮಜ ಕಳೆಯೋಕೆ ದುಬೈಗೆ ತೆರಳಿದ್ದಾರೆ. ಇತ್ತೀಚೆಗೆ ಅಲ್ಲಿನ ಜನಪ್ರಿಯ ಹೋಟೆಲ್​ಗೆ ತೆರಳಿ ರಾಧಿಕಾ ಪಂಡಿತ್​ ಜತೆಗೆ ಸಮಯ ಕಳೆಯುತ್ತಿರುವ ಫೋಟೋ ಹಾಕಿದ್ದರು. ಈಗ ಯಶ್​ ಸಿಂಹದ ಜತೆ ಪೋಸ್​ ನೀಡಿದ್ದಾರೆ.

ಯಶ್​ ಸಿಂಹದ ಪಕ್ಕದಲ್ಲಿ ನಿಂತು ಮಾಂಸ ತಿನ್ನಿಸುತ್ತಿದ್ದಾರೆ. ಈ ವಿಡಿಯೋವನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಖತ್ ಖುಷಿ ಆಗಿದ್ದಾರೆ. ‘ಸಿಂಹದ ಜತೆ ಮತ್ತೊಂದು ಸಿಂಹ’ ‘ನಿಮ್ಮ ಧೈರ್ಯಕ್ಕೆ ಮೆಚ್ಚಬೇಕು’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ.

ದುಬೈನಲ್ಲಿ ವನ್ಯಜೀವಿಗಳನ್ನು ಸಾಕೋಕೆ ಅವಕಾಶವಿದೆ. ನಮ್ಮ ದೇಶದಲ್ಲಿ ಮನೆಯಲ್ಲಿ ನಾಯಿಗಳನ್ನು ಸಾಕಿದಂತೆ ಅಲ್ಲಿನ ರಾಜ ಮನೆತನದವರು ಸಿಂಹವನ್ನು ಸಾಕುತ್ತಾರೆ. ಅದು ಪ್ರತಿಷ್ಠೆಯ ಸಂಕತೇವೂ ಹೌದು. ಖಾಸಗಿ ಝೂ ಮಾಡೋಕೂ ಅಲ್ಲಿ ಅವಕಾಶವಿದೆ. ಆ ಸಿಂಹಗಳು ಮನುಷ್ಯರಿಗೆ ಏನನ್ನೂ ಮಾಡುವುದಿಲ್ಲ. ಯಶ್ ಕೂಡ ಹೀಗೆ ಸಾಕಿದ ಸಿಂಹಕ್ಕೆ ಮಾಂಸ ತಿನ್ನಿಸಿದ್ದಾರೆ.

View this post on Instagram

A post shared by Yash (@thenameisyash)

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ: ‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

Yash: ದುಬೈನಲ್ಲಿ ಮಿಂಚುತ್ತಿದ್ದಾರೆ ರಾಕಿಂಗ್ ಸ್ಟಾರ್ ಯಶ್ ದಂಪತಿ; ಏನು ವಿಶೇಷ?

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ