Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು

ಯಶ್​ ಅವರು ಪತ್ನಿ ರಾಧಿಕಾ ಪಂಡಿತ್​ ಜತೆ ದುಬೈಗೆ ತೆರಳಿದ್ದಾರೆ. ‘ಕೆಜಿಎಫ್​ 2’ ತೆರೆಕಾಣೋಕೆ ಇನ್ನೂ ಸಮಯವಿದೆ. ಸಿನಿಮಾ ತಂಡ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಇದ್ದು, ಶೀಘ್ರವೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದೆ.

ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು
ಯಶ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 14, 2021 | 8:48 PM

ಯಶ್​ ಸ್ಟಾರ್​ಡಮ್​ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಏನೇ ಮಾಡಿದರೂ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತದೆ. ‘ಕೆಜಿಎಫ್​’ ಸಿನಿಮಾ ಅಷ್ಟು ದೊಡ್ಡಮಟ್ಟದ ಖ್ಯಾತಿ ತಂದುಕೊಟ್ಟಿದೆ. ಈಗ ಯಶ್​ ಸಿಂಹದ ಜತೆ ನಿಂತು ಪೋಸ್ ನೀಡಿದ್ದಾರೆ. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಯಶ್​ ಅವರು ಪತ್ನಿ ರಾಧಿಕಾ ಪಂಡಿತ್​ ಜತೆ ದುಬೈಗೆ ತೆರಳಿದ್ದಾರೆ. ‘ಕೆಜಿಎಫ್​ 2’ ತೆರೆಕಾಣೋಕೆ ಇನ್ನೂ ಸಮಯವಿದೆ. ಸಿನಿಮಾ ತಂಡ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಇದ್ದು, ಶೀಘ್ರವೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದೆ. ಅದಕ್ಕೂ ಮೊದಲು ಯಶ್​ ರಜೆಯ ಮಜ ಕಳೆಯೋಕೆ ದುಬೈಗೆ ತೆರಳಿದ್ದಾರೆ. ಇತ್ತೀಚೆಗೆ ಅಲ್ಲಿನ ಜನಪ್ರಿಯ ಹೋಟೆಲ್​ಗೆ ತೆರಳಿ ರಾಧಿಕಾ ಪಂಡಿತ್​ ಜತೆಗೆ ಸಮಯ ಕಳೆಯುತ್ತಿರುವ ಫೋಟೋ ಹಾಕಿದ್ದರು. ಈಗ ಯಶ್​ ಸಿಂಹದ ಜತೆ ಪೋಸ್​ ನೀಡಿದ್ದಾರೆ.

ಯಶ್​ ಸಿಂಹದ ಪಕ್ಕದಲ್ಲಿ ನಿಂತು ಮಾಂಸ ತಿನ್ನಿಸುತ್ತಿದ್ದಾರೆ. ಈ ವಿಡಿಯೋವನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಖತ್ ಖುಷಿ ಆಗಿದ್ದಾರೆ. ‘ಸಿಂಹದ ಜತೆ ಮತ್ತೊಂದು ಸಿಂಹ’ ‘ನಿಮ್ಮ ಧೈರ್ಯಕ್ಕೆ ಮೆಚ್ಚಬೇಕು’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ.

ದುಬೈನಲ್ಲಿ ವನ್ಯಜೀವಿಗಳನ್ನು ಸಾಕೋಕೆ ಅವಕಾಶವಿದೆ. ನಮ್ಮ ದೇಶದಲ್ಲಿ ಮನೆಯಲ್ಲಿ ನಾಯಿಗಳನ್ನು ಸಾಕಿದಂತೆ ಅಲ್ಲಿನ ರಾಜ ಮನೆತನದವರು ಸಿಂಹವನ್ನು ಸಾಕುತ್ತಾರೆ. ಅದು ಪ್ರತಿಷ್ಠೆಯ ಸಂಕತೇವೂ ಹೌದು. ಖಾಸಗಿ ಝೂ ಮಾಡೋಕೂ ಅಲ್ಲಿ ಅವಕಾಶವಿದೆ. ಆ ಸಿಂಹಗಳು ಮನುಷ್ಯರಿಗೆ ಏನನ್ನೂ ಮಾಡುವುದಿಲ್ಲ. ಯಶ್ ಕೂಡ ಹೀಗೆ ಸಾಕಿದ ಸಿಂಹಕ್ಕೆ ಮಾಂಸ ತಿನ್ನಿಸಿದ್ದಾರೆ.

View this post on Instagram

A post shared by Yash (@thenameisyash)

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ: ‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

Yash: ದುಬೈನಲ್ಲಿ ಮಿಂಚುತ್ತಿದ್ದಾರೆ ರಾಕಿಂಗ್ ಸ್ಟಾರ್ ಯಶ್ ದಂಪತಿ; ಏನು ವಿಶೇಷ?

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!