AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು

ಯಶ್​ ಅವರು ಪತ್ನಿ ರಾಧಿಕಾ ಪಂಡಿತ್​ ಜತೆ ದುಬೈಗೆ ತೆರಳಿದ್ದಾರೆ. ‘ಕೆಜಿಎಫ್​ 2’ ತೆರೆಕಾಣೋಕೆ ಇನ್ನೂ ಸಮಯವಿದೆ. ಸಿನಿಮಾ ತಂಡ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಇದ್ದು, ಶೀಘ್ರವೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದೆ.

ಸಿಂಹದ ಪಕ್ಕ ನಿಂತು ಮಾಂಸ ತಿನ್ನಿಸಿದ ಯಶ್​; ರಾಕಿ ಭಾಯ್ ಡೇರಿಂಗ್​ ನೋಡಿ ಫಿದಾ ಆದ ಅಭಿಮಾನಿಗಳು
ಯಶ್​
TV9 Web
| Edited By: |

Updated on: Oct 14, 2021 | 8:48 PM

Share

ಯಶ್​ ಸ್ಟಾರ್​ಡಮ್​ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಏನೇ ಮಾಡಿದರೂ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತದೆ. ‘ಕೆಜಿಎಫ್​’ ಸಿನಿಮಾ ಅಷ್ಟು ದೊಡ್ಡಮಟ್ಟದ ಖ್ಯಾತಿ ತಂದುಕೊಟ್ಟಿದೆ. ಈಗ ಯಶ್​ ಸಿಂಹದ ಜತೆ ನಿಂತು ಪೋಸ್ ನೀಡಿದ್ದಾರೆ. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಯಶ್​ ಅವರು ಪತ್ನಿ ರಾಧಿಕಾ ಪಂಡಿತ್​ ಜತೆ ದುಬೈಗೆ ತೆರಳಿದ್ದಾರೆ. ‘ಕೆಜಿಎಫ್​ 2’ ತೆರೆಕಾಣೋಕೆ ಇನ್ನೂ ಸಮಯವಿದೆ. ಸಿನಿಮಾ ತಂಡ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಇದ್ದು, ಶೀಘ್ರವೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದೆ. ಅದಕ್ಕೂ ಮೊದಲು ಯಶ್​ ರಜೆಯ ಮಜ ಕಳೆಯೋಕೆ ದುಬೈಗೆ ತೆರಳಿದ್ದಾರೆ. ಇತ್ತೀಚೆಗೆ ಅಲ್ಲಿನ ಜನಪ್ರಿಯ ಹೋಟೆಲ್​ಗೆ ತೆರಳಿ ರಾಧಿಕಾ ಪಂಡಿತ್​ ಜತೆಗೆ ಸಮಯ ಕಳೆಯುತ್ತಿರುವ ಫೋಟೋ ಹಾಕಿದ್ದರು. ಈಗ ಯಶ್​ ಸಿಂಹದ ಜತೆ ಪೋಸ್​ ನೀಡಿದ್ದಾರೆ.

ಯಶ್​ ಸಿಂಹದ ಪಕ್ಕದಲ್ಲಿ ನಿಂತು ಮಾಂಸ ತಿನ್ನಿಸುತ್ತಿದ್ದಾರೆ. ಈ ವಿಡಿಯೋವನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಖತ್ ಖುಷಿ ಆಗಿದ್ದಾರೆ. ‘ಸಿಂಹದ ಜತೆ ಮತ್ತೊಂದು ಸಿಂಹ’ ‘ನಿಮ್ಮ ಧೈರ್ಯಕ್ಕೆ ಮೆಚ್ಚಬೇಕು’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ.

ದುಬೈನಲ್ಲಿ ವನ್ಯಜೀವಿಗಳನ್ನು ಸಾಕೋಕೆ ಅವಕಾಶವಿದೆ. ನಮ್ಮ ದೇಶದಲ್ಲಿ ಮನೆಯಲ್ಲಿ ನಾಯಿಗಳನ್ನು ಸಾಕಿದಂತೆ ಅಲ್ಲಿನ ರಾಜ ಮನೆತನದವರು ಸಿಂಹವನ್ನು ಸಾಕುತ್ತಾರೆ. ಅದು ಪ್ರತಿಷ್ಠೆಯ ಸಂಕತೇವೂ ಹೌದು. ಖಾಸಗಿ ಝೂ ಮಾಡೋಕೂ ಅಲ್ಲಿ ಅವಕಾಶವಿದೆ. ಆ ಸಿಂಹಗಳು ಮನುಷ್ಯರಿಗೆ ಏನನ್ನೂ ಮಾಡುವುದಿಲ್ಲ. ಯಶ್ ಕೂಡ ಹೀಗೆ ಸಾಕಿದ ಸಿಂಹಕ್ಕೆ ಮಾಂಸ ತಿನ್ನಿಸಿದ್ದಾರೆ.

View this post on Instagram

A post shared by Yash (@thenameisyash)

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ: ‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

Yash: ದುಬೈನಲ್ಲಿ ಮಿಂಚುತ್ತಿದ್ದಾರೆ ರಾಕಿಂಗ್ ಸ್ಟಾರ್ ಯಶ್ ದಂಪತಿ; ಏನು ವಿಶೇಷ?

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು