AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಬೆಂಗಾವಲು ಕಾರು ಹರಿದು ಗಾಯ, ಯುವಕನಿಂದ ದೂರು ದಾಖಲು

Yash: ಬಳ್ಳಾರಿಯ ಅಮೃತೇಶ್ವರ ದೇವಾಲಯ ಉದ್ಘಾಟನೆಗೆ ಯಶ್ ಆಗಮಿಸಿದ್ದಾಗ ಆದ ಅವಘಡದಲ್ಲಿ ಗಾಯಗೊಂಡಿದ್ದ ಯುವಕ ಉಮೇಶ್ ಇದೀಗ ಪೊಲೀಸ್ ದೂರು ದಾಖಲಿಸಿದ್ದಾರೆ.

ಯಶ್ ಬೆಂಗಾವಲು ಕಾರು ಹರಿದು ಗಾಯ, ಯುವಕನಿಂದ ದೂರು ದಾಖಲು
ಮಂಜುನಾಥ ಸಿ.
|

Updated on: Mar 02, 2024 | 9:13 PM

Share

ಕೆಲವು ದಿನಗಳ ಹಿಂದಷ್ಟೆ ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬಂದಿದ್ದ ಯಶ್​ರ (Yash) ಹಿಂಬಾಲಕರ ಕಾರು ಹರಿದು ಯುವಕನೊಬ್ಬ ಗಾಯಗೊಂಡಿದ್ದ. ಇದೀಗ ಆ ಯುವಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನ್ಯಾಯಕ್ಕೆ ಒತ್ತಾಯಿಸಿದ್ದಾನೆ. ಫೆಬ್ರವರಿ 29 ರಂದು ಅಮೃತೇಶ್ವರ ದೇವಾಲಯ ಉದ್ಘಾಟನೆಗೆ ನಟ ಯಶ್ ಆಗಮಿಸಿದ್ದರು. ಈ ವೇಳೆ ಯಶ್​ರ ಹಿಂಬಾಲಕರ ಕಾರು ಸಿರಗುಪ್ಪ ತಾಲೂಕಿನ‌ ಮುದ್ದೇನೂರು ಗ್ರಾಮದ ಯುವಕ ಉಮೇಶ್ ಎಂಬುವರ ಕಾಲಿನ ಮೇಲೆ ಹರಿದಿತ್ತು. ಇದರಿಂದ ಯುವಕ ಗಾಯಗೊಂಡಿದ್ದ.

ಇದೀಗ ಯುವಕ ಉಮೇಶ್ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಮ್ಮ ಕಾಲ ಮೇಲೆ ಹರಿದ ಕಾರನ್ನು ಚಲಾಯಿಸುತ್ತಿದ್ದ ಚಾಲಕನ ಪತ್ತೆಗೆ ಒತ್ತಾಯಿಸಿದ್ದಾರೆ. ಕಾರಿನ ಚಾಲಕನಿಗೆ ಕಾನೂನು ರೀತ್ಯ ಶಿಕ್ಷೆ ಆಗಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದಾರುಣ ಸಾವನ್ನಪ್ಪಿದ ಯಶ್ ಅಭಿಮಾನಿಗಳ ಕುಟುಂಬಕ್ಕೆ ಭೂ ಒಡೆತನ ಯೋಜನೆ ಅಡಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದೇನೆ: ಹೆಚ್ ಕೆ ಪಾಟೀಲ್

ಫೆಬ್ರವರಿ 29 ರಂದು ಅಮೃತೇಶ್ವರ ದೇವಸ್ಥಾನ ಉದ್ಘಾಟನೆಗೆ ಯಶ್ ಬಳ್ಳಾರಿಗೆ ಆಗಮಿಸಿದ್ದರು. ಯಶ್​ರನ್ನು ನೋಡಲು ಸಾವಿರಾರು ಮಂದಿ ಜನ ಸ್ಥಳದಲ್ಲಿ ಸೇರಿದ್ದರು. ಪ್ರಾಣ ಪ್ರತಿಷ್ಠಾನಪನೆ ಕಾರ್ಯಕ್ರಮ ಮುಗಿಸಿ ಯಶ್ ವಾಪಾಸ್ಸಾಗುವ ವೇಳೆ ಸ್ಥಳದಲ್ಲಿ ನೂಕು ನುಗ್ಗಾಟ ಉಂಟಾಯಿತು. ಜನ ಸಂದಣಿಯ ನೂಕಾಟದಲ್ಲಿ ಯಶ್​ರ ಹಿಂಬಾಲಕ ಕಾರು ಉಮೇಶ್​ರ ಕಾಲಿನ ಮೇಲೆ ಹರಿದಿತ್ತು. ಇದರ ಪರಿಣಾಮ ಉಮೇಶ್ ಗಾಯಗೊಂಡಿದ್ದರು. ಕೂಡಲೇ ಆ ಯುವಕನನ್ನು ಬಳ್ಳಾರಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಯುವಕ ಚೇತರಿಸಿಕೊಂಡಿದ್ದು, ತಮಗೆ ಗಾಯ ಮಾಡಿದ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ಯಶ್​ರ ಹುಟ್ಟುಹಬ್ಬದ ವೇಳೆ ಯಶ್​ರ ಕಟೌಟ್ ಕಟ್ಟಲು ಹೋಗಿ ಒಂದೇ ಗ್ರಾಮದ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ನಿಧನ ಹೊಂದಿದ ಅಭಿಮಾನಿಗಳ ಮನೆಗೆ ಯಶ್ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಬಳಿಕ ಅದೇ ದಿನ ಯಶ್​ರನ್ನು ನೋಡಲು ಬರುವ ಧಾವಂತದಲ್ಲಿ ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿ ಯಶ್​ರ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದ. ಇದೆಲ್ಲದರ ನೆನಪು ಹಸಿಯಾಗಿರುವಂತೆಯೇ ಇತ್ತೀಚೆಗೆ ಬಳ್ಳಾರಿಯಲ್ಲಿ ಯಶ್​ ಅಭಿಮಾನಿಯ ಮೇಲೆ ಅವರ ಹಿಂಬಾಲಕರ ಕಾರು ಹರಿದು ತೀವ್ರ ಗಾಯವಾಗಿತ್ತು. ಪುಣ್ಯಕ್ಕೆ ಅಭಿಮಾನಿಯ ಜೀವಕ್ಕೆ ಏನೂ ಆಗಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ