AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’; ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್

ಪುಷ್ಪಾ ಅವರು ದೀಪಿಕಾ ದಾಸ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿದೆ. ದೀಪಿಕಾ ಅವರು ಪುಷ್ಪಾ ಅವರ ಕುಟುಂಬದವರೇ ಆದರೂ, ಪುಷ್ಪಾ ಅವರ ಟೀಕೆಗಳಿಗೆ ದೀಪಿಕಾ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪುಷ್ಪಾ ಅವರು ದೀಪಿಕಾ ಹೇಳಿಕೆಗೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’; ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್
ದೀಪಿಕಾ-ಪುಷ್ಪಾ
ರಾಜೇಶ್ ದುಗ್ಗುಮನೆ
|

Updated on: Aug 23, 2025 | 7:36 AM

Share

ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್​ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಅವರು ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಯಶ್ ಬಗ್ಗೆಯೇ ನಾನಾ ರೀತಿಯ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಪುಷ್ಪಾ ಅವರು ನಟಿ ದೀಪಿಕಾ ದಾಸ್ (Deepika Das) ಬಗ್ಗೆ ಟೀಕೆ ಮಾಡಿದ್ದರು. ಇದು ದೀಪಿಕಾ ಅವರನ್ನು ಕೆರಳಿಸಿದೆ. ದೀಪಿಕಾ ಈ ಬಗ್ಗೆ ಓಪನ್ ಆಗಿ ಪೋಸ್ಟ್ ಹಾಕಿದ್ದಾರೆ.

ಇಬ್ಬರ ಸಂಬಂಧ

ದೀಪಿಕಾ ದಾಸ್​ಗೆ ಪುಷ್ಪಾ ಅವರು ದೊಡ್ಡಮ್ಮ ಆಗಬೇಕು. ಪುಷ್ಪಾ ಹಾಗೂ ದೀಪಿಕಾ ದಾಸ್ ತಾಯಿ ಸೋದರಿಯರು. ಹೀಗಾಗಿ, ಸಂಬಂಧದಲ್ಲಿ ಯಶ್ ಹಾಗೂ ದೀಪಿಕಾ ಅಣ್ಣ-ತಂಗಿ. ದೀಪಿಕಾ ಮಾತ್ರ ಎಲ್ಲಿಯೂ ಯಶ್ ನನ್ನ ಅಣ್ಣ ಎಂದು ಹೇಳಿಕೊಂಡು ಓಡಾಡಿಲ್ಲ.

ಇದನ್ನೂ ಓದಿ
Image
ವಿಶೇಷ ದಿನದಂದೇ ವಿವಾಹ ಆಗುತ್ತಿದ್ದಾರೆ ಆ್ಯಂಕರ್ ಅನುಶ್ರೀ; ಇಲ್ಲಿದೆ ವಿವರ
Image
‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ​ ಋಣ ತೀರಿಸಿದ ರಾಜ್
Image
ನಟ ಚಿರಂಜೀವಿ ಅದೆಷ್ಟು ಶ್ರೀಮಂತ ನೋಡಿ; ಪ್ರೈವೆಟ್ ಜೆಟ್ ಒಡೆಯ
Image
ದಳಪತಿ ವಿಜಯ್ ಸಮಾವೇಶಕ್ಕೆ ಸೇರಿದ ಜನರ ಸಂಖ್ಯೆ ನೋಡಿ; ಅಬ್ಬಬ್ಬಾ ಇಷ್ಟೊಂದಾ

ಪುಷ್ಪಾ ಹೇಳಿದ್ದೇನು?

ಇತ್ತೀಚೆಗೆ ಅಶ್ವವೇಗ ಯೂಟ್ಯೂಬ್ ಚಾನೆಲ್​ನಲ್ಲಿ ಮಾತನಾಡುವಾಗ, ದೀಪಿಕಾಗೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪುಷ್ಪಾ, ಅವರನ್ನು ಹೀಯಾಳಿಸಿದ್ದರು. ‘ದೀಪಿಕಾ ದಾಸ್ ಹಾಗೂ ನಮಗೆ ಆಗಿ ಬರಲ್ಲ. ಅವಳು ಯಾವ ಹೀರೋಯಿನ್ ಅಂತ ಆಯ್ಕೆ ಮಾಡಿಕೊಳ್ಳಬೇಕು? ಅವಳು ಏನು ಸಾಧನೆ ಮಾಡಿದ್ದಾಳೆ? ಅವರನ್ನು ನಾವು ದೂರದಲ್ಲೇ ಇಟ್ಟಿದ್ದೇವೆ’ ಎಂದು ಪುಷ್ಪಾ ಹೇಳಿದ್ದರು. ಟಿವಿ9 ಕನ್ನಡದ ಜೊತೆ ಮಾತನಾಡುವಾಗ, ‘ದೀಪಿಕಾಗೆ ನನ್ನ ಕಂಡರೆ ಭಯ. ಅವಳು ನನ್ನ ಹತ್ತಿರ ಹೆಚ್ಚು ಮಾತನಾಡಲ್ಲ’ ಎಂದಿದ್ದರು.

ಇದನ್ನೂ ಓದಿ:  ತಾವು ಕಂಡ ಕನಸುಗಳ ಜೊತೆ ಜೀವಿಸುತ್ತಿದ್ದಾರೆ ದೀಪಿಕಾ ದಾಸ್

ದೀಪಿಕಾ ದಾಸ್ ಪ್ರತಿಕ್ರಿಯೆ

ದೀಪಿಕಾ ದಾಸ್ ಅವರು ಕನ್ನಡ ಕಿರುತೆರೆ ನಟಿಯಾಗಿ ಗಮನ ಸೆಳೆದಿದ್ದಾರೆ. ಅವರು ‘ನಾಗಿಣಿ’ ಧಾರಾವಾಹಿಯಲ್ಲಿ ಕಾಣಿಸಿಕೊಂಡು ಸಾಕಷ್ಟು ಗಮನ ಸೆಳೆದರು. ಅಲ್ಲದೆ, ಬಿಗ್ ಬಾಸ್ ​ಶೋಗೆ ಅವರು ಎರಡು ಬಾರಿ ಆಗಮಿಸಿದ್ದರು. ಈ ಮೂಲಕ ದೊಡ್ಡ ಹೆಸರು ಮಾಡಿದ್ದಾರೆ. ಅವರು ಈಗ ವಿವಾಹ ಆಗಿ ಸಂಸಾರದ ಕಡೆ ಗಮನ ಹರಿಸಿದ್ದಾರೆ. ಹೀಗಿರುವಾಗಲೇ ದೀಪಿಕಾ ಬಗ್ಗೆ ಪುಷ್ಪಾ ಈ ರೀತಿಯ ಹೇಳಿಕೆ ನೀಡಿದ್ದರು.

View this post on Instagram

A post shared by Deepika Das (@deepika__das)

ಈ ಬಗ್ಗೆ ಪ್ರತಿಕ್ರಿಯಿಸಿರೋ ದೀಪಿಕಾ ದಾಸ್, ‘ಹೊಸ ಕಲಾವಿದರನ್ನು ಬೆಳೆಸೋ ಜನರು ಕಲಾವಿದರಿಗೆ ಬೆಲೆ ಕೊಡೋದ್ದನ್ನು ಕಲಿತಿರಬೇಕು. ಇಲ್ಲಿವರೆಗೂ ಯಾರ ಹೆಸರನ್ನು ಹೇಳಿಕೊಂಡು ಬಂದಿಲ್ಲ ಮುಂದೇನೂ ಬರಲ್ಲ. ಕೆಲವರಿಗೆ ಬೆಲೆಕೊಟ್ಟ ಮಾತ್ರಕ್ಕೆ ಯಾರಿಗೂ ಯಾರ ಮೇಲೂ ಭಯ ಇದೆ ಅಂತ ಅಲ್ಲ. ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿ. ವಿಥ್‌ ಡ್ಯೂ ರೆಸ್ಪೆಕ್ಟ್ ಸ್ಟಾ‌ರ್ ಆಫ್ ಅವರ್ ಇಂಡಸ್ಟ್ರಿ. ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ, ಏನು ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’ ಎಂದು ದೀಪಿಕಾ ಎಚ್ಚರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ