AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆ ಮೀರಿದ ಪುಷ್ಪಾ ಮಾತು; ಮಧ್ಯಸ್ಥಿಕೆಗೆ ಬರ್ತಾರಾ ರಾಕಿಂಗ್ ಸ್ಟಾರ್ ಯಶ್?

ಯಶ್ ತಾಯಿ ಪುಷ್ಪಾ ಅವರ ಸಂದರ್ಶನಗಳು ಸಾಕಷ್ಟು ವಿವಾದ ಸೃಷ್ಟಿಸಿವೆ. ದೀಪಿಕಾ ದಾಸ್ ಬಗ್ಗೆ ನೀಡಿದ ಹೇಳಿಕೆಗಳು ವಿಶೇಷವಾಗಿ ಟೀಕೆಗೆ ಗುರಿಯಾಗಿವೆ. ಪುಷ್ಪಾ ಅವರ ಹೇಳಿಕೆಗಳಿಂದ ಉಂಟಾಗಿರುವ ಅವಾಂತರಗಳನ್ನು ತಡೆಯಲು ಯಶ್ ಮಧ್ಯಪ್ರವೇಶಿಸಬೇಕೆಂದು ಅನೇಕರು ಆಗ್ರಹಿಸುತ್ತಿದ್ದಾರೆ. ಇಲ್ಲದಿದ್ದರೆ ಭವಿಷ್ಯದಲ್ಲಿ ಇನ್ನಷ್ಟು ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ.

ಎಲ್ಲೆ ಮೀರಿದ ಪುಷ್ಪಾ ಮಾತು; ಮಧ್ಯಸ್ಥಿಕೆಗೆ ಬರ್ತಾರಾ ರಾಕಿಂಗ್ ಸ್ಟಾರ್ ಯಶ್?
ಪುಷ್ಪಾ, ಯಶ್, ದೀಪಿಕಾ
ರಾಜೇಶ್ ದುಗ್ಗುಮನೆ
|

Updated on:Aug 23, 2025 | 11:56 AM

Share

ಯಶ್ ತಾಯಿ ಪುಷ್ಪಾ ಅವರು ‘ಕೊತ್ತಲವಾಡಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದರು. ಈ ಚಿತ್ರ ಹೆಚ್ಚು ಸದ್ದು ಮಾಡಿತೋ ಇಲ್ಲವೋ,  ಪುಷ್ಪಾ (Pushpa) ಅವರು ನೀಡಿದ ಸಂದರ್ಶನಗಳು ಮಾತ್ರ ಸಾಕಷ್ಟು ವೈರಲ್ ಆದವು. ಸಿನಿಮಾ ರಿಲೀಸ್​ಗೂ ಮೊದಲೇ ಅವರು ಸಾಕಷ್ಟು ಸಂದರ್ಶನಗಳನ್ನು ನೀಡಿದ್ದರು. ಈಗ ಸಿನಿಮಾ ರಿಲೀಸ್ ಬಳಿಕವೂ ಒಂದಷ್ಟು ಸಂದರ್ಶನ ನೀಡುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಅವರ ಮಾತು ಎಲ್ಲೆ ಮೀರಿದೆ. ಇದಕ್ಕೆ ಅಂಕುಶ ಹಾಕಲು ಯಶ್ ಬರಬೇಕಿದೆ ಎಂದು ಅನೇಕರು ಆಗ್ರಹಿಸಿದ್ದಾರೆ.

ದೀಪಿಕಾ ದಾಸ್ ಬಗ್ಗೆ ಪುಷ್ಪಾ ಅವರು ಮಾತನಾಡಿದ್ದಾರೆ. ‘ದೀಪಿಕಾ ಚಿತ್ರರಂಗದಲ್ಲಿ ಮಾಡಿದ ಸಾಧನೆ ಏನು’ ಎಂಬ ರೀತಿಯಲ್ಲಿ ಪುಷ್ಪಾ ಪ್ರಶ್ನೆ ಇತ್ತು. ಈ ಹೇಳಿಕೆ ವೈರಲ್ ಆಗಿದೆ. ಪುಷ್ಪಾ ಅವರು ದೀಪಿಕಾಗೆ ದೊಡ್ಡಮ್ಮ ಆಗಬೇಕು. ಯಶ್​​ಗೆ ತಂಗಿ ಆಗಬೇಕು. ಕುಟುಂಬದವರ ಬಗ್ಗೆಯೇ ಪುಷ್ಪಾ ಈ ರೀತಿ ಹೇಳಿಕೆ ನೀಡೋದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ವಿಚ್ಛೇದನದ ಹಂತದಲ್ಲಿ ಗೋವಿಂದ ದಾಂಪತ್ಯ; ಪತಿಯಿಂದ ಮೋಸ ಆಗಿದೆ ಎಂದ ಸುನೀತಾ
Image
‘ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’; ದೀಪಿಕಾ ದಾಸ್
Image
ವಿಶೇಷ ದಿನದಂದೇ ವಿವಾಹ ಆಗುತ್ತಿದ್ದಾರೆ ಆ್ಯಂಕರ್ ಅನುಶ್ರೀ; ಇಲ್ಲಿದೆ ವಿವರ
Image
‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ​ ಋಣ ತೀರಿಸಿದ ರಾಜ್

ಪುಷ್ಪಾ ಅವರಿಗೆ ಯಶ್ ಕಿವಿಮಾತು ಹೇಳುವ ಸಮಯ ಬಂದಿದೆ ಎಂದು ಅನೇಕರು ಹೇಳಿದ್ದಾರೆ. ಪುಷ್ಪಾ ಅವರ ಕಡೆಯಿಂದ ನಿತ್ಯವೂ ಒಂದೊಂದು ರೀತಿಯ ಹೇಳಿಕೆ ಬರುತ್ತಿದೆ. ಈ ರೀತಿಯ ಮಾತುಗಳಿಂದ ಅನೇಕರಿಗೆ ಬೇಸರ ಆಗುತ್ತಿದೆ. ದೀಪಿಕಾ ದಾಸ್ ಅಭಿಮಾನಿಗಳಿಗೂ ಪುಷ್ಪಾ ನೀಡಿದ್ದ ಹೇಳಿಕೆ ಬಗ್ಗೆ ಅಸಮಾಧಾನ ಇದೆ. ಹೀಗಾಗಿ, ಯಶ್ ಎಲ್ಲಿದ್ದೀರಾ ಎಂದು ದೀಪಿಕಾ ದಾಸ್ ಫ್ಯಾನ್ಸ್ ಪ್ರಶ್ನೆ ಮಾಡುತ್ತಿದ್ದಾರೆ.

ಒಂದೊಮ್ಮೆ ಯಶ್ ಅವರು ಈಗ ತಾಯಿಗೆ ಈ ಬಗ್ಗೆ ಹೇಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಅವರು ಮತ್ತಷ್ಟು ಹೇಳಿಕೆಗಳನ್ನು ನಿಡಿ ಅವಾಂತರಗಳು ಮತ್ತಷ್ಟು ಹೆಚ್ಚಬಹುದು. ಇದರಿಂದ ಯಶ್ ಹೆಸರಿಗೂ ಕಳಂಕ ಬರಬಹುದು ಎಂಬುದು ಯಶ್ ಅಭಿಮಾನಿಗಳ ಆತಂಕ ಕೂಡ ಹೌದು. ಹೀಗಾಗಿ, ಈ ವಿಚಾರದಲ್ಲಿ ಯಶ್ ಮಧ್ಯಸ್ಥಿಕೆ ವಹಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಅವಳಿನ್ನೂ ಸಣ್ಣವಳು’; ನನ್ನ ಬಗ್ಗೆ ಮಾತನಾಡಬೇಡಿ ಎಂದ ದೀಪಿಕಾ ದಾಸ್​ಗೆ ಪುಷ್ಪಾ ಪ್ರತಿಕ್ರಿಯೆ

‘ಕೊತ್ತಲವಾಡಿ’ ಸಿನಿಮಾ ಅಂದುಕೊಂಡ ರೀತಿಯಲ್ಲಿ ಯಶಸ್ಸು ಕಂಡಿಲ್ಲ. ಈ ವಿಚಾರವನ್ನು ಪುಷ್ಪಾ ಅವರೇ ಪರೋಕ್ಷವಾಗಿ ಸಂದರ್ಶನಗಳಲ್ಲಿ ಒಪ್ಪಿಕೊಂಡಿದ್ದಾರೆ. ಸಿನಿಮಾ ಸೋಲಿಗೆ ಕಾರಣರಾದವರ ಬಗ್ಗೆಯೂ ಅವರಿಗೆ ಅಸಮಾಧಾನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 11:47 am, Sat, 23 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ