AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ಯಶ್ ಅವರು ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಚಿತ್ರಗಳ ಕೆಲಸಗಳಿಗೆ ಬೆಂಗಳೂರು-ಮುಂಬೈ ನಡುವೆ ಖಾಸಗಿ ಜೆಟ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ ಯಶ್ ಹೊಸ ಹೇರ್‌ಸ್ಟೈಲ್‌ನೊಂದಿಗೆ ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ನಂತರ ಉದ್ದ ಕೂದಲು ಹೊಂದಿದ್ದ ಅವರು, ‘ಟಾಕ್ಸಿಕ್’ ಚಿತ್ರಕ್ಕಾಗಿ ಹೊಸ ಲುಕ್‌ನಲ್ಲಿ ಮಿಂಚಿದ್ದಾರೆ.

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?
ಯಶ್
ರಾಜೇಶ್ ದುಗ್ಗುಮನೆ
|

Updated on: Mar 12, 2026 | 10:11 AM

Share

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ.

‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ ಬಳಿಕ ಎರಡನೇ ಭಾಗದ ಶೂಟಿಂಗ್ ಸಮಯದಲ್ಲಿ ಅವರು ಮತ್ತೆ ಉದ್ದ ಕೂದಲು ಹಾಗೂ ಗಡ್ಡ ಬಿಟ್ಟರು. ನಂತರ ಅದೇ ಲುಕ್​​ನಲ್ಲಿ ಹಲವು ವರ್ಷ ಇದ್ದರು. ‘ಟಾಕ್ಸಿಕ್’ ಚಿತ್ರದಲ್ಲೂ ಯಶ್ ಉದ್ದ ಕೂದಲಲ್ಲಿ ಮಿಂಚಿದ್ದಾರೆ.

ವಿಶೇಷ ಎಂದರೆ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಅವರದ್ದು ದ್ವಿಪಾತ್ರ. ಒಂದು ಪಾತ್ರದ ಲುಕ್​​ಗಾಗಿ ಉದ್ದ ಕೂದಲು ಬಿಟ್ಟರೆ, ಮತ್ತೊಂದು ಪಾತ್ರಕ್ಕಾಗಿ ಅವರು ಗಡ್ಡ ಹಾಗೂ ಕೂದಲ ಬೋಳಿಸಿದ್ದರು. ಈಗ ಎಲ್ಲ ಕಡೆಗಳಲ್ಲೂ ಅವರು ಹೊಸ ಹೇರ್​​ಸ್ಟೈಲ್​​ನಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಯಶ್ ಕೊಟ್ಟ ಉಡುಗೊರೆಯೇನು? ರಾಧಿಕಾ ಪಂಡಿತ್ ಉತ್ತರ ಕೇಳಿ

ಇತ್ತೀಚೆಗೆ ಮುಂಬೈನ ಕಾಲಿನಾ ಟರ್ಮಿನಲ್​​ನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ, ಈ ಟರ್ಮಿನಲ್ ಅಲ್ಲಿ, ಪ್ರೈವೆಟ್ ಜೆಟ್​​​ಗಳು ಲ್ಯಾಂಡ್ ಆಗುತ್ತವೆ. ಅಂದರೆ ಯಶ್ ಅವರು ಖಾಸಗಿ ಜೆಟ್ ಮೂಲಕ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಕಾರಣದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಅವರು ಕಾಣಿಸಿಕೊಳ್ಳುತ್ತಿಲ್ಲ. ಅವರ ಲುಕ್ ಯಾರಿಗೂ ಕಾಣಿಸದೆ ಇರುವಂತೆ ನೋಡಿಕೊಳ್ಳುವ ಚಾಲೆಂಜ್ ಅವರಿಗೆ ಇತ್ತು. ಅಲ್ಲದೆ, ಕೆಲಸಗಳು ಅಂದುಕೊಂಡ ಸಮಯಕ್ಕೆ ಮುಗಿಯೋದಿಲ್ಲ. ಹೀಗಾಗಿ, ಓಡಾಟಕ್ಕೆ ಖಾಸಗಿ ಜೆಟ್ ಬಳಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ