AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಕನ್ನಡದಲ್ಲೇ ಪ್ರಶ್ನೆ ಕೇಳಿದ ಮುಂಬೈ ವ್ಯಕ್ತಿ; ರಾಕಿಂಗ್ ಸ್ಟಾರ್ ಉತ್ತರ ಹೇಗಿತ್ತು?

ಮುಂಬೈನಲ್ಲಿ 'ಟಾಕ್ಸಿಕ್' ಚಿತ್ರದ ಚಿತ್ರೀಕರಣದ ವೇಳೆ, ಯಶ್ ಅವರನ್ನು ಕನ್ನಡದಲ್ಲಿ ಮಾತನಾಡಿಸಿದ ವ್ಯಕ್ತಿಯೊಬ್ಬರಿಗೆ ಅವರು ಸಿಹಿಯಾಗಿ ಉತ್ತರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಕೂಡ ನಟಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ.

ಯಶ್​ಗೆ ಕನ್ನಡದಲ್ಲೇ ಪ್ರಶ್ನೆ ಕೇಳಿದ ಮುಂಬೈ ವ್ಯಕ್ತಿ; ರಾಕಿಂಗ್ ಸ್ಟಾರ್ ಉತ್ತರ ಹೇಗಿತ್ತು?
ಯಶ್
ರಾಜೇಶ್ ದುಗ್ಗುಮನೆ
|

Updated on:Nov 11, 2024 | 7:01 AM

Share

ನಟ ಯಶ್ ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್. ರಾಷ್ಟ್ರ ಮಟ್ಟದಲ್ಲಿ ಅವರಿಗೆ ಬೇಡಿಕೆ ಇದೆ. ಮುಂಬೈಗೆ ಹೋದರೆ ಅವರನ್ನು ಗುರುತಿಸುತ್ತಾರೆ. ಪಾಪರಾಜಿಗಳು ಯಶ್ ಫೋಟೋ ತೆಗೆಯಲು ಮುಗಿಬೀಳುತ್ತಾರೆ. ಇತ್ತೀಚೆಗೆ ಅವರು ‘ಟಾಕ್ಸಿಕ್’ ಸಿನಿಮಾ ಶೂಟ್​ಗೆ ಮುಂಬೈಗೆ ತೆರಳಿದ್ದರು. ಈ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು ಕನ್ನಡದಲ್ಲೇ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಾಕಿಂಗ್ ಸ್ಟಾರ್ ಉತ್ತರ ಸಖತ್ ಸ್ವೀಟ್ ಆಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಕಿಂಗ್ ಸ್ಟಾರ್ ಯಶ್ ಅವರಿಗೆ ಕನ್ನಡದ ಮೇಲೆ ಸಾಕಷ್ಟು ಪ್ರೀತಿ ಇದೆ. ಮುಂಬೈಗೆ ತೆರಳಿದಾಗ ಅವರನ್ನು ಕನ್ನಡದಲ್ಲಿ ಯಾರಾದರೂ ಮಾತನಾಡಿಸಿದರೆ ಅವರು ಪ್ರೀತಿಯಿಂದ ಉತ್ತರ ನೀಡುತ್ತಾರೆ. ಈಗ ಅವರು ಮುಂಬೈನಲ್ಲಿದ್ದಾರೆ. ‘ಟಾಕ್ಸಿಕ್​’ ಸಿನಿಮಾ ಶೂಟಿಂಗ್ ಸೆಟ್​ಗೆ ಹೋಗಲು ಬೋಟ್ ಏರಿದ್ದಾರೆ. ಈ ವೇಳೆ ಅವರನ್ನು ಅಲ್ಲಿನ ವ್ಯಕ್ತಿ ಕನ್ನಡದಲ್ಲಿ ಮಾತನಾಡಿಸಲು ಪ್ರಯತ್ನಿಸಿದ್ದಾರೆ.

‘ಯಶ್, ಯಶ್..’ ಎಂದು ಅನೇಕರು ಕರೆದಿದ್ದಾರೆ. ಆದರೆ, ಯಾರೊಬ್ಬರಿಗೂ ಯಶ್ ಅವರು ಪ್ರತಿಕ್ರಿಯೆ ನೀಡಲಿಲ್ಲ. ಆದರೆ, ಅಲ್ಲಿದ್ದ ವ್ಯಕ್ತಿ, ‘ಅಣ್ಣ ಹೇಗಿದ್ದೀರಾ’ ಎಂದು ಕನ್ನಡದಲ್ಲೇ ಮಾತನಾಡಿದ್ದಾರೆ. ಅವರು ಪ್ರಶ್ನೆ ಕೇಳಿದ ಶೈಲಿಯಲ್ಲೇ ಅವರು ಕನ್ನಡದವರಲ್ಲ ಎಂಬುದು ಸ್ಪಷ್ಟವಾಗುತ್ತದೆ. ಇದಕ್ಕೆ ಯಶ್ ಉತ್ತರಿಸಿದ್ದಾರೆ. ‘ನಾವು ಚೆನ್ನಾಗಿದೀವಿ, ನೀವು ಹೇಗಿದೀರಾ’ ಎಂದು ಉತ್ತರಿಸಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.

ಯಶ್ ಅವರು ಮುಖಕ್ಕೆ ಮಾಸ್ಕ್ ಹಾಕಿದ್ದರು. ಅದನ್ನು ತೆಗೆಯುವಂತೆ ಯಶ್​ಗೆ ಪದೇ ಪದೇ ಬಂದಿದೆ. ‘ಮಾಸ್ಕ್ ತೆಗಿ ಅಣ್ಣಾ’ ಎಂದು ಕೇಳಲಾಗಿದೆ. ಆದರೆ, ಧೂಳಿನ ಕಾರಣಕ್ಕೆ ಯಶ್ ಅವರು ಮಾಸ್ಕ್ ತೆಗೆಯಲಿಲ್ಲ. ಯಶ್ ಅವರ ಸುತ್ತ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಇದ್ದರು.

ಇದನ್ನೂ ಓದಿ:‘ಕೋಟಿ ಖರ್ಚಾದರೂ ಉಳಿಸಿಕೊಳ್ತೀನಿ ಅಂದ್ರು’; ಯಶ್ ಸಹಾಯ ನೆನೆದು ಭಾವುಕರಾದ ‘ಕೆಜಿಎಫ್’ ಚಾಚಾ

ಯಶ್ ಜೊತೆ ಕಿಯಾರಾ ಅಡ್ವಾಣಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಈ ಚಿತ್ರದಲ್ಲಿ ನಟಿಸುತ್ತಿರುವುದ ಖಚಿತವಾಗಿದೆ. ಈ ಸಿನಿಮಾ ಮೂಲಕ ಕಿಯಾರಾ ಅವರು ಕನ್ನಡಕ್ಕೆ ಕಾಲಿಟ್ಟಂತೆ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Mon, 11 November 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ