AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್

‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಮಿಲಿಯನ್ ವೀಕ್ಷಣೆಗಳನ್ನು ಪಡೆದು ಭಾರಿ ಹಲ್​ಚಲ್ ಸೃಷ್ಟಿಸಿದೆ. ಈ ಮೂಲಕ ಯಶ್ ಅವರ ಅಚಲ ನಿರ್ಧಾರ ಮತ್ತು ಗೆಲುವಿನ ಛಲ ಸ್ಪಷ್ಟವಾಗಿದೆ. ಹಿಂದಿಯ ‘ಧುರಂಧರ್ 2’ ಚಿತ್ರದ ಎದುರು ಸ್ಪರ್ಧಿಸುತ್ತಿರುವ ‘ಟಾಕ್ಸಿಕ್’ ಟೀಸರ್ ಮೂಲಕ ಉತ್ತರ ಕೊಟ್ಟಿದ್ದಾರೆ.

‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್
ಯಶ್-ರಣವೀರ್
ರಾಜೇಶ್ ದುಗ್ಗುಮನೆ
|

Updated on:Feb 20, 2026 | 10:18 AM

Share

‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ರಿಲೀಸ್ ಆಗಿ ಹಲ್​ಚಲ್​ ಎಬ್ಬಿಸುತ್ತಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಹೊತ್ತಿಗೆ ಮಿಲಿಯನ್ ವೀಕ್ಷಣೆ ಕಂಡಿದೆ. ಈ ಸಿನಿಮಾ ಹಿಂದಿಯ ‘ಧುರಂಧರ್ 2’ ಚಿತ್ರದ ಎದುರು ರಿಲೀಸ್ ಆಗುತ್ತಿದೆ. ರೇಸ್​​ಗೆ ಇಳಿದು ಯಶ್ ಸೋತ ದಾಖಲೆ ಇಲ್ಲ. ಹೀಗಾಗಿ, ‘ಧುರಂಧರ್ 2’ ಸಿನಿಮಾ ಎದುರು ಕೂಡ ಗೆಲ್ಲೋದು ‘ಟಾಕ್ಸಿಕ್’ ಎಂಬ ಮಾತು ಕೇಳಿ ಬಂದಿದೆ. ಈ ಮಧ್ಯೆ ಟೀಸರ್​ನಲ್ಲಿ ಬರೋ ಒಂದು ಡೈಲಾಗ್ ‘ಧುರಂಧರ್ 2’ ಚಿತ್ರಕ್ಕೆ ಕೊಟ್ಟ ಕೊಟ್ಟ ಕೌಂಟರ್ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಇದೆ.

ಯಶ್ ಅವರು ಸ್ವಭಾವದಲ್ಲಿ ಹಠವಾದಿ. ಏನೇ ಬಂದರೂ ಅದನ್ನು ಸಾಧಿಸಿಯೇ ತೀರುತ್ತೇನೆ ಎಂಬ ಹಠ ಅವರಿಗೆ ಇದೆ. ಒಂದೊಂದೇ ಮೆಟ್ಟಿಲು ಹತ್ತಿ ಅವರು ತುಂಬಾನೇ ಎತ್ತರಕ್ಕೆ ಹೋಗಿದ್ದಾರೆ. ಹೀಗಾಗಿ ಅವರಲ್ಲಿ ಹಠ ಮತ್ತಷ್ಟು ಹೆಚ್ಚಿದೆ. ‘ಧುರಂಧರ್ 2’ ಚಿತ್ರದ ಎದುರು ರಿಲೀಸ್ ಆಗಿ ಗೆದ್ದೇ ಗೆಲ್ಲುತ್ತೇನೆ ಎಂಬ ಛಲದಲ್ಲಿ ಅವರಿದ್ದಾರೆ. ಟೀಸರ್​​ನಲ್ಲಿ ಬರುವ ಸಂಭಾಷಣೆಯನ್ನು ಅನೇಕರು ‘ಧುರಂಧರ್ 2’ ಚಿತ್ರಕ್ಕೆ ಕೊಟ್ಟ ಕೌಂಟರ್ ಎಂದು ಹೇಳುತ್ತಿದ್ದಾರೆ.

‘ಈ ಸಲ ಯುದ್ಧನೇ ಬೇರೆ, ಅವರ ಕುತಂತ್ರನೇ ಬೇರೆ, ಎಲ್ಲರನ್ನೂ ಎದುರು ಹಾಕಿಕೊಂಡು ಬದುಕೋಕೆ ಆಗಲ್ಲ ರಾಯ. ಹಠ ಬಿಟ್ಬಿಡು, ಇಟ್ಸ್ ಓವರ್’ ಎಂದು ವ್ಯಕ್ತಿಯೋರ್ವನ ಧ್ವನಿ ಬರುತ್ತದೆ. ಆಗ ರಾಯ (ಯಶ್) ಇದಕ್ಕೆ ಉತ್ತರಿಸುತ್ತಾನೆ. ‘ನಾನು ಹೇಳಿದ್ರೆ ಮಾತ್ರ ಅದು ಓವರ್, ಇಲ್ಲದಿದ್ರೆ ಅಲ್ಲ’ ಎಂದು ರಾಯ ಹೇಳುತ್ತಾನೆ.

ಇದನ್ನೂ ಓದಿ: ಟಾಕ್ಸಿಕ್​ ಟೀಸರ್​: ಫ್ಯಾನ್ಸ್​​ಗೆ ಡಬಲ್ ಧಮಾಕ; ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ ‘ಧುರಂಧರ್ ಸೀಕ್ವೆಲ್ ಎದುರು ಬರಬೇಡಿ. ಮುಂದಕ್ಕೆ ಹೋಗಿ’ ಎಂಬ ಕಿವಿಮಾತನ್ನು ಯಶ್​​ಗೆ ಅನೇಕರು ಹೇಳಿದ್ದು ಇದೆ. ಇದಕ್ಕೆ ಕೌಂಟರ್ ಕೊಡೋ ದೃಷ್ಟಿಯಲ್ಲಿ ಈ ರೀತಿ ಹೇಳಿರಬಹುದು ಎಂದು ಅನೇಕರು ಹೇಳಿದ್ದಾರೆ. ಹಠ ಬಿಡೋ ಮಾತೆ ಇಲ್ಲ ಎಂಬುದನ್ನು ಟೀಸರ್ ಮೂಲಕ ಯಶ್ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:16 am, Fri, 20 February 26

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್