AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಬಿಗ್ ರಿಲೀಫ್; ‘ಟಾಕ್ಸಿಕ್’ ಸಿನಿಮಾ ವಿರುದ್ಧ ಎಫ್​ಐಆರ್​ಗೆ ಹೈಕೋರ್ಟ್ ತಡೆ

Toxic Kannada Movie: ಯಶ್ ನಟನೆಯ ‘ಟಾಕ್ಸಿಕ್’ ಚಿತ್ರತಂಡ ಅರಣ್ಯ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿ ಹಾಕಲಾಗಿದ್ದ ಎಫ್​ಐಆರ್​ಗೆ ಕರ್ನಾಟಕ ರಾಜ್ಯ ಹೈಕೋರ್ಟ್​ ತಡೆ ನೀಡಿದೆ.

ಯಶ್​ಗೆ ಬಿಗ್ ರಿಲೀಫ್; ‘ಟಾಕ್ಸಿಕ್’ ಸಿನಿಮಾ ವಿರುದ್ಧ ಎಫ್​ಐಆರ್​ಗೆ ಹೈಕೋರ್ಟ್ ತಡೆ
Yash-HMT
ಮಂಜುನಾಥ ಸಿ.
| Edited By: |

Updated on:Dec 06, 2024 | 11:39 AM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕರ ವಿರುದ್ಧ ಹಾಕಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ. ಆ ಮೂಲಕ ಸಿನಿಮಾದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್​ ನಿರಾಳರಾಗಿದ್ದಾರೆ. ‘ಟಾಕ್ಸಿಕ್’ ಚಿತ್ರತಂಡ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿತ್ತು ಎಂದು ಆರೋಪಿಸಿ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಮಾನ್ಸಸ್ಟರ್ ಮೈಂಡ್ಸ್​ ವಿರುದ್ಧ ರಾಜ್ಯ ಅರಣ್ಯ ಇಲಾಖೆ ದೂರು ನೀಡಿತ್ತು. ದೂರು ಆಧರಿಸಿ ಎಫ್​ಐಆರ್ ಸಹ ದಾಖಲಾಗಿತ್ತು. ಇದೀಗ ಈ ಎಫ್​ಐಆರ್​ಗೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರಿನ ಹೊರವಲಯದಲ್ಲಿರುವ ಎಚ್​ಎಂಟಿಯ ಮೈದಾನದಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್​ ನಿರ್ಮಾಣ ಮಾಡಲಾಗಿತ್ತು. ಭಾರಿ ಮೊತ್ತದ ಹಣ ಖರ್ಚು ಮಾಡಿ ಬೃಹತ್ ಸೆಟ್ ಅನ್ನು ಇಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಈ ಸೆಟ್ ನಿರ್ಮಾಣ ಮಾಡಲು ಮೈದಾನದಲ್ಲಿದ್ದ ಮರಗಳನ್ನು ಅಕ್ರಮವಾಗಿ, ಯಾವುದೇ ಪೂರ್ವಾನುಮತಿ ಇಲ್ಲದೆ ಕಡಿಯಲಾಗಿದೆ ಎಂದು ಅರಣ್ಯ ಇಲಾಖೆ ಆರೋಪ ಮಾಡಿತ್ತು, ವಕೀಲರೊಬ್ಬರು ಸಹ ನ್ಯಾಯಾಲಯದಲ್ಲಿ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಹ ಸಲ್ಲಿಕೆ ಮಾಡಿದ್ದರು.

ಸ್ವತಃ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರು ‘ಟಾಕ್ಸಿಕ್’ ಸಿನಿಮಾ ಸೆಟ್​ಗೆ ಭೇಟಿ ನೀಡಿ ಅಲ್ಲಿ ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ವತಿಯಿಂದ ಸ್ಯಾಟಲೈಟ್ ಚಿತ್ರಗಳನ್ನು ಬಿಡುಗಡೆ ಮಾಡಿ, ‘ಟಾಕ್ಸಿಕ್’ ಸಿನಿಮಾ ಸೆಟ್ ಹಾಕುವ ಮುಂಚೆ ಆ ಪ್ರದೇಶ ಹೇಗಿತ್ತು, ಸೆಟ್ ನಿರ್ಮಾಣ ಮಾಡಿದ ಮೇಲೆ ಹೇಗಾಗಿದೆ ಎಂದು ಮಾಧ್ಯಮಗಳ ಮುಂದೆ ತೋರಿಸಿದ್ದರು. ಆದರೆ ಚಿತ್ರತಂಡ, ತಾವು ಮರಗಳನ್ನು ಕಡಿದಿಲ್ಲವೆಂದು, ಅಲ್ಲದೆ ಮೈದಾನದಲ್ಲಿದ್ದ ಗಿಡಗಂಟೆಗಳನ್ನಷ್ಟೆ ಸ್ವಚ್ಛ ಮಾಡಿರುವುದಾಗಿ ಹೇಳಿಕೊಂಡಿತ್ತು.

ಇದನ್ನೂ ಓದಿ:ಟಾಕ್ಸಿಕ್ ಸಿನಿಮಾ: ಯಶ್​ ಜೊತೆಗೂಡಿದ ಮತ್ತೊಬ್ಬ ಬಾಲಿವುಡ್ ಬೆಡಗಿ

ಈ ಪ್ರಕರಣದಲ್ಲಿ ಎಚ್​ಎಂಟಿ ಸಂಸ್ಥೆ ಮೇಲೆ ಸಹ ಆರೋಪಗಳು ಕೇಳಿ ಬಂದಿದ್ದವು. ಸರ್ಕಾರ ನೀಡಿರುವ ಭೂಮಿಯನ್ನು ಸಿನಿಮಾ ಚಿತ್ರೀಕರಣಗಳಿಗೆ ನೀಡಿ ಎಚ್​ಎಂಟಿ ಅಕ್ರಮವಾಗಿ ಹಣ ಮಾಡುತ್ತಿದೆ. ತಪ್ಪು ಉದ್ದೇಶಗಳಿಗೆ ಸರ್ಕಾರ ನೀಡಿರುವ ಜಾಗವನ್ನು ಬಳಸುತ್ತಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ಬಿಡುಗಡೆ ಮಾಡಿದ್ದ ಎಚ್​ಎಂಟಿ, ‘ಟಾಕ್ಸಿಕ್’ ಸಿನಿಮಾಕ್ಕೆ ಸೆಟ್ ಹಾಕಿರುವ ಜಾಗಕ್ಕೂ ತಮಗೂ ಸಂಬಂಧ ಇಲ್ಲ ಎಂದಿತ್ತು. ಆ ಜಾಗ ಈಗ ಕೆನರಾ ಬ್ಯಾಂಕ್ ಸುಪರ್ಧಿಯಲ್ಲಿರುವ ವಿಷಯ ಬಳಿಕ ಬೆಳಕಿಗೆ ಬಂದಿತ್ತು.

ಇದೀಗ ರಾಜ್ಯ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿ ಸಿನಿಮಾದ ನಿರ್ಮಾಪಕರ ಮೇಲೆ ಸಲ್ಲಿಸಲಾಗಿದ್ದ ಎಫ್​ಐಆರ್​ಗೆ ಮಧ್ಯಂತರ ತಡೆ ಆಜ್ಞೆ ನೀಡಿದೆ. ‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕರ ಪರವಾಗಿ ವಾದಿಸಿದ ವಕೀಲ ಬಿಪಿನ್ ಹೆಗ್ಡೆ, 400 ಎಕರೆ ಜಮೀನಿನ 18 ಎಕರೆ ಜಾಗವನ್ನು ಹೆಚ್ ಎಂ ಟಿ ಸಂಸ್ಥೆ ಕೆನರಾ ಬ್ಯಾಂಕ್​ಗೆ ಮಾರಾಟ ಮಾಡಿದೆ. ಇಲ್ಲಿ, 30 ಕೋಟಿ ಹೂಡಿಕೆ ಮಾಡಿ ಸಿನಿಮಾ ಸೆಟ್ ಹಾಕಲಾಗಿದೆ. ಈಗ ಸೆಟ್ ನಿರ್ಮಿಸಲಾಗಿರುವ ಜಾಗ ಅರಣ್ಯ ಭೂಮಿಯಲ್ಲ ಎಂದು ಸ್ವತಃ ಸರ್ಕಾರವೇ ಸುಪ್ರೀಂ ಕೋರ್ಟ್ ಗೆ ಹೇಳಿದೆ. ಅಲ್ಲದೆ ಶೂಟಿಂಗ್ ಸೆಟ್​ ಹಾಕಲು ಯಾವುದೇ ಮರಗಳನ್ನು ಕಡಿದಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಮಧ್ಯಂತರ ತಡೆ ಆದೇಶ ನೀಡಿದರು.

‘ಟಾಕ್ಸಿಕ್’ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್​ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್​ ಒಟ್ಟಿಗೆ ನಿರ್ಮಾಣ ಮಾಡುತ್ತಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಮುಂಬೈಗೆ ಸ್ಥಳಾಂತರಗೊಂಡಿದೆ. ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ ಇನ್ನೂ ಹಲವು ಖ್ಯಾತ ನಟ-ನಟಿಯರು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Thu, 5 December 24

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?