AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಬಿಗ್ ರಿಲೀಫ್; ‘ಟಾಕ್ಸಿಕ್’ ಸಿನಿಮಾ ವಿರುದ್ಧ ಎಫ್​ಐಆರ್​ಗೆ ಹೈಕೋರ್ಟ್ ತಡೆ

Toxic Kannada Movie: ಯಶ್ ನಟನೆಯ ‘ಟಾಕ್ಸಿಕ್’ ಚಿತ್ರತಂಡ ಅರಣ್ಯ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿ ಹಾಕಲಾಗಿದ್ದ ಎಫ್​ಐಆರ್​ಗೆ ಕರ್ನಾಟಕ ರಾಜ್ಯ ಹೈಕೋರ್ಟ್​ ತಡೆ ನೀಡಿದೆ.

ಯಶ್​ಗೆ ಬಿಗ್ ರಿಲೀಫ್; ‘ಟಾಕ್ಸಿಕ್’ ಸಿನಿಮಾ ವಿರುದ್ಧ ಎಫ್​ಐಆರ್​ಗೆ ಹೈಕೋರ್ಟ್ ತಡೆ
Yash-HMT
ಮಂಜುನಾಥ ಸಿ.
| Edited By: |

Updated on:Dec 06, 2024 | 11:39 AM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕರ ವಿರುದ್ಧ ಹಾಕಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ. ಆ ಮೂಲಕ ಸಿನಿಮಾದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್​ ನಿರಾಳರಾಗಿದ್ದಾರೆ. ‘ಟಾಕ್ಸಿಕ್’ ಚಿತ್ರತಂಡ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿತ್ತು ಎಂದು ಆರೋಪಿಸಿ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಮಾನ್ಸಸ್ಟರ್ ಮೈಂಡ್ಸ್​ ವಿರುದ್ಧ ರಾಜ್ಯ ಅರಣ್ಯ ಇಲಾಖೆ ದೂರು ನೀಡಿತ್ತು. ದೂರು ಆಧರಿಸಿ ಎಫ್​ಐಆರ್ ಸಹ ದಾಖಲಾಗಿತ್ತು. ಇದೀಗ ಈ ಎಫ್​ಐಆರ್​ಗೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರಿನ ಹೊರವಲಯದಲ್ಲಿರುವ ಎಚ್​ಎಂಟಿಯ ಮೈದಾನದಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್​ ನಿರ್ಮಾಣ ಮಾಡಲಾಗಿತ್ತು. ಭಾರಿ ಮೊತ್ತದ ಹಣ ಖರ್ಚು ಮಾಡಿ ಬೃಹತ್ ಸೆಟ್ ಅನ್ನು ಇಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಈ ಸೆಟ್ ನಿರ್ಮಾಣ ಮಾಡಲು ಮೈದಾನದಲ್ಲಿದ್ದ ಮರಗಳನ್ನು ಅಕ್ರಮವಾಗಿ, ಯಾವುದೇ ಪೂರ್ವಾನುಮತಿ ಇಲ್ಲದೆ ಕಡಿಯಲಾಗಿದೆ ಎಂದು ಅರಣ್ಯ ಇಲಾಖೆ ಆರೋಪ ಮಾಡಿತ್ತು, ವಕೀಲರೊಬ್ಬರು ಸಹ ನ್ಯಾಯಾಲಯದಲ್ಲಿ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಹ ಸಲ್ಲಿಕೆ ಮಾಡಿದ್ದರು.

ಸ್ವತಃ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರು ‘ಟಾಕ್ಸಿಕ್’ ಸಿನಿಮಾ ಸೆಟ್​ಗೆ ಭೇಟಿ ನೀಡಿ ಅಲ್ಲಿ ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ವತಿಯಿಂದ ಸ್ಯಾಟಲೈಟ್ ಚಿತ್ರಗಳನ್ನು ಬಿಡುಗಡೆ ಮಾಡಿ, ‘ಟಾಕ್ಸಿಕ್’ ಸಿನಿಮಾ ಸೆಟ್ ಹಾಕುವ ಮುಂಚೆ ಆ ಪ್ರದೇಶ ಹೇಗಿತ್ತು, ಸೆಟ್ ನಿರ್ಮಾಣ ಮಾಡಿದ ಮೇಲೆ ಹೇಗಾಗಿದೆ ಎಂದು ಮಾಧ್ಯಮಗಳ ಮುಂದೆ ತೋರಿಸಿದ್ದರು. ಆದರೆ ಚಿತ್ರತಂಡ, ತಾವು ಮರಗಳನ್ನು ಕಡಿದಿಲ್ಲವೆಂದು, ಅಲ್ಲದೆ ಮೈದಾನದಲ್ಲಿದ್ದ ಗಿಡಗಂಟೆಗಳನ್ನಷ್ಟೆ ಸ್ವಚ್ಛ ಮಾಡಿರುವುದಾಗಿ ಹೇಳಿಕೊಂಡಿತ್ತು.

ಇದನ್ನೂ ಓದಿ:ಟಾಕ್ಸಿಕ್ ಸಿನಿಮಾ: ಯಶ್​ ಜೊತೆಗೂಡಿದ ಮತ್ತೊಬ್ಬ ಬಾಲಿವುಡ್ ಬೆಡಗಿ

ಈ ಪ್ರಕರಣದಲ್ಲಿ ಎಚ್​ಎಂಟಿ ಸಂಸ್ಥೆ ಮೇಲೆ ಸಹ ಆರೋಪಗಳು ಕೇಳಿ ಬಂದಿದ್ದವು. ಸರ್ಕಾರ ನೀಡಿರುವ ಭೂಮಿಯನ್ನು ಸಿನಿಮಾ ಚಿತ್ರೀಕರಣಗಳಿಗೆ ನೀಡಿ ಎಚ್​ಎಂಟಿ ಅಕ್ರಮವಾಗಿ ಹಣ ಮಾಡುತ್ತಿದೆ. ತಪ್ಪು ಉದ್ದೇಶಗಳಿಗೆ ಸರ್ಕಾರ ನೀಡಿರುವ ಜಾಗವನ್ನು ಬಳಸುತ್ತಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ಬಿಡುಗಡೆ ಮಾಡಿದ್ದ ಎಚ್​ಎಂಟಿ, ‘ಟಾಕ್ಸಿಕ್’ ಸಿನಿಮಾಕ್ಕೆ ಸೆಟ್ ಹಾಕಿರುವ ಜಾಗಕ್ಕೂ ತಮಗೂ ಸಂಬಂಧ ಇಲ್ಲ ಎಂದಿತ್ತು. ಆ ಜಾಗ ಈಗ ಕೆನರಾ ಬ್ಯಾಂಕ್ ಸುಪರ್ಧಿಯಲ್ಲಿರುವ ವಿಷಯ ಬಳಿಕ ಬೆಳಕಿಗೆ ಬಂದಿತ್ತು.

ಇದೀಗ ರಾಜ್ಯ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿ ಸಿನಿಮಾದ ನಿರ್ಮಾಪಕರ ಮೇಲೆ ಸಲ್ಲಿಸಲಾಗಿದ್ದ ಎಫ್​ಐಆರ್​ಗೆ ಮಧ್ಯಂತರ ತಡೆ ಆಜ್ಞೆ ನೀಡಿದೆ. ‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕರ ಪರವಾಗಿ ವಾದಿಸಿದ ವಕೀಲ ಬಿಪಿನ್ ಹೆಗ್ಡೆ, 400 ಎಕರೆ ಜಮೀನಿನ 18 ಎಕರೆ ಜಾಗವನ್ನು ಹೆಚ್ ಎಂ ಟಿ ಸಂಸ್ಥೆ ಕೆನರಾ ಬ್ಯಾಂಕ್​ಗೆ ಮಾರಾಟ ಮಾಡಿದೆ. ಇಲ್ಲಿ, 30 ಕೋಟಿ ಹೂಡಿಕೆ ಮಾಡಿ ಸಿನಿಮಾ ಸೆಟ್ ಹಾಕಲಾಗಿದೆ. ಈಗ ಸೆಟ್ ನಿರ್ಮಿಸಲಾಗಿರುವ ಜಾಗ ಅರಣ್ಯ ಭೂಮಿಯಲ್ಲ ಎಂದು ಸ್ವತಃ ಸರ್ಕಾರವೇ ಸುಪ್ರೀಂ ಕೋರ್ಟ್ ಗೆ ಹೇಳಿದೆ. ಅಲ್ಲದೆ ಶೂಟಿಂಗ್ ಸೆಟ್​ ಹಾಕಲು ಯಾವುದೇ ಮರಗಳನ್ನು ಕಡಿದಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಮಧ್ಯಂತರ ತಡೆ ಆದೇಶ ನೀಡಿದರು.

‘ಟಾಕ್ಸಿಕ್’ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್​ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್​ ಒಟ್ಟಿಗೆ ನಿರ್ಮಾಣ ಮಾಡುತ್ತಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಮುಂಬೈಗೆ ಸ್ಥಳಾಂತರಗೊಂಡಿದೆ. ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ ಇನ್ನೂ ಹಲವು ಖ್ಯಾತ ನಟ-ನಟಿಯರು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Thu, 5 December 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು