AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಹೆದರಿದ ಬನ್ಸಾಲಿ; ‘ಟಾಕ್ಸಿಕ್’ ಚಿತ್ರದ ಎದುರು ಬರಲು ‘ಲವ್ ಆ್ಯಂಡ್ ವಾರ್’ ಹಿಂದೇಟು

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19, 2026 ರಂದು ತೆರೆಗೆ ಬರಲು ಸಿದ್ಧವಾಗಿದೆ. ಹೀಗಾಗಿ, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ತಮ್ಮ 'ಲವ್ ಆ್ಯಂಡ್ ವಾರ್' ಚಿತ್ರವನ್ನು ಮುಂದೂಡಲು ಆಲೋಚಿಸುತ್ತಿದ್ದಾರೆ. ಹಿಂದಿನ 'ಕೆಜಿಎಫ್' ಚಿತ್ರಗಳ ಎದುರು ಬಂದ ಸಿನಿಮಾಗಳು ಸೋತಿದ್ದವು. 'ಟಾಕ್ಸಿಕ್' ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಯಶ್​ಗೆ ಹೆದರಿದ ಬನ್ಸಾಲಿ; ‘ಟಾಕ್ಸಿಕ್’ ಚಿತ್ರದ ಎದುರು ಬರಲು ‘ಲವ್ ಆ್ಯಂಡ್ ವಾರ್’ ಹಿಂದೇಟು
ಯಶ್-ಸಂಜಯ್
ರಾಜೇಶ್ ದುಗ್ಗುಮನೆ
|

Updated on: Nov 04, 2025 | 2:42 PM

Share

ಯಶ್ ನಟನೆಯ ‘ಕೆಜಿಎಫ್’ ಎದುರು ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಜೀರೋ’ ಸಂಪೂರ್ಣವಾಗಿ ಝೀರೋನೆ ಆಯಿತು. ‘ಕೆಜಿಎಫ್ 2’ ಎದುರು ಬಂದ ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ ರಿಲೀಸ್ ಆಗಿ ಸ್ಪರ್ಧೆ ಮಾಡಲಾಗದೆ ಸೋತಿತು. ಈಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮುಂದಿನ ಮಾರ್ಚ್ 19ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಎದುರು ಬರಬೇಕು ಎಂದುಕೊಂಡವರು ಈಗಾಗಲೇ ಕಾಲ್ಕೀಳುತ್ತಿದ್ದಾರೆ. ಬಾಲಿವುಡ್​ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಕೂಡ ಹೀಗೆಯೇ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಬನ್ಸಾಲಿ ಅವರು ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ವಿಕ್ಕಿ ಕೌಶಲ್ ಜೊತೆ ಸೇರಿ ‘ಲವ್ ಆ್ಯಂಡ್ ವಾರ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ 2026ರ ಈದ್​ಗೆ (ಮಾರ್ಚ್ 19) ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಬನ್ಸಾಲಿ ಈ ವಿಚಾರದಲ್ಲಿ ಹಿಂದೇಟು ಹಾಕುತ್ತಿದ್ದಾರಂತೆ.

‘ಟಾಕ್ಸಿಕ್’ ಸಿನಿಮಾ ಬಜೆಟ್ ಹಾಗೂ ಮೇಕಿಂಗ್ ವಿಚಾರಕ್ಕೆ ಸದ್ದು ಮಾಡುತ್ತಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಇಂಗ್ಲಿಷ್​​ನಲ್ಲೂ ಶೂಟ್ ಆಗುತ್ತಿದೆ. ಇದು ತೆಲುಗು, ತಮಿಳು ಮೊದಲಾದ ಭಾಷೆಗಳಲ್ಲಿ ಡಬ್ ಆಗಿ ತೆರೆಗೆ ಬರಲಿದೆ. ಹಿಂದಿ ಭಾಷೆಯಲ್ಲಿ ಈ ಸಿನಿಮಾನ ರಿಲೀಸ್ ಮಾಡುವ ಹಕ್ಕನ್ನು ಪಡೆಯಲು ಅನೇಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಇದೆಲ್ಲವನ್ನೂ ಗಮನಿಸಿ ಬನ್ಸಾಲಿ ಅವರು ತಮ್ಮ ಸಿನಿಮಾನ ಮುಂದಕ್ಕೆ ಹಾಕಿಕೊಳ್ಳುವ ಆಲೋಚನೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಣವೀರ್-ಬನ್ಸಾಲಿ ಕಿತ್ತಾಟದ ವಿಚಾರ ಕೊನೆಗೂ ಹೊರಬಂತು; ಹೊಸ ಚಿತ್ರದಿಂದ ನಟ ಹೊರಕ್ಕೆ

‘ಲವ್ ಆ್ಯಂಡ್ ವಾರ್’ ಸಿನಿಮಾದ ಶೂಟಿಂಗ್​ನಲ್ಲಿ ಬನ್ಸಾಲಿ ನಿಧಾನತೆ ತೋರುತ್ತಿದ್ದಾರೆ. ಹೀಗಾಗಿ, ಸಿನಿಮಾ ಪೂರ್ಣಗೊಳ್ಳೋದು ಮುಂದಿನ ಏಪ್ರಿಲ್ ಸಮೀಪಿಸಲಿದೆ. ಹೀಗಾಗಿ, ರಿಲೀಸ್​ ಡೇಟ್​ನ ಐಪಿಎಲ್ ಮುಗಿದ ಮೇಲೆ ಅಂದರೆ 2026ರ ಜೂನ್​ಗೆ ಮುಂದೂಡುವ ಆಲೋಚನೆ ಬನ್ಸಾಲಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ