AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಹೆದರಿದ ಬನ್ಸಾಲಿ; ‘ಟಾಕ್ಸಿಕ್’ ಚಿತ್ರದ ಎದುರು ಬರಲು ‘ಲವ್ ಆ್ಯಂಡ್ ವಾರ್’ ಹಿಂದೇಟು

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19, 2026 ರಂದು ತೆರೆಗೆ ಬರಲು ಸಿದ್ಧವಾಗಿದೆ. ಹೀಗಾಗಿ, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ತಮ್ಮ 'ಲವ್ ಆ್ಯಂಡ್ ವಾರ್' ಚಿತ್ರವನ್ನು ಮುಂದೂಡಲು ಆಲೋಚಿಸುತ್ತಿದ್ದಾರೆ. ಹಿಂದಿನ 'ಕೆಜಿಎಫ್' ಚಿತ್ರಗಳ ಎದುರು ಬಂದ ಸಿನಿಮಾಗಳು ಸೋತಿದ್ದವು. 'ಟಾಕ್ಸಿಕ್' ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಯಶ್​ಗೆ ಹೆದರಿದ ಬನ್ಸಾಲಿ; ‘ಟಾಕ್ಸಿಕ್’ ಚಿತ್ರದ ಎದುರು ಬರಲು ‘ಲವ್ ಆ್ಯಂಡ್ ವಾರ್’ ಹಿಂದೇಟು
ಯಶ್-ಸಂಜಯ್
ರಾಜೇಶ್ ದುಗ್ಗುಮನೆ
|

Updated on: Nov 04, 2025 | 2:42 PM

Share

ಯಶ್ ನಟನೆಯ ‘ಕೆಜಿಎಫ್’ ಎದುರು ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಜೀರೋ’ ಸಂಪೂರ್ಣವಾಗಿ ಝೀರೋನೆ ಆಯಿತು. ‘ಕೆಜಿಎಫ್ 2’ ಎದುರು ಬಂದ ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ ರಿಲೀಸ್ ಆಗಿ ಸ್ಪರ್ಧೆ ಮಾಡಲಾಗದೆ ಸೋತಿತು. ಈಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮುಂದಿನ ಮಾರ್ಚ್ 19ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಎದುರು ಬರಬೇಕು ಎಂದುಕೊಂಡವರು ಈಗಾಗಲೇ ಕಾಲ್ಕೀಳುತ್ತಿದ್ದಾರೆ. ಬಾಲಿವುಡ್​ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಕೂಡ ಹೀಗೆಯೇ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಬನ್ಸಾಲಿ ಅವರು ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ವಿಕ್ಕಿ ಕೌಶಲ್ ಜೊತೆ ಸೇರಿ ‘ಲವ್ ಆ್ಯಂಡ್ ವಾರ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ 2026ರ ಈದ್​ಗೆ (ಮಾರ್ಚ್ 19) ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಬನ್ಸಾಲಿ ಈ ವಿಚಾರದಲ್ಲಿ ಹಿಂದೇಟು ಹಾಕುತ್ತಿದ್ದಾರಂತೆ.

‘ಟಾಕ್ಸಿಕ್’ ಸಿನಿಮಾ ಬಜೆಟ್ ಹಾಗೂ ಮೇಕಿಂಗ್ ವಿಚಾರಕ್ಕೆ ಸದ್ದು ಮಾಡುತ್ತಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಇಂಗ್ಲಿಷ್​​ನಲ್ಲೂ ಶೂಟ್ ಆಗುತ್ತಿದೆ. ಇದು ತೆಲುಗು, ತಮಿಳು ಮೊದಲಾದ ಭಾಷೆಗಳಲ್ಲಿ ಡಬ್ ಆಗಿ ತೆರೆಗೆ ಬರಲಿದೆ. ಹಿಂದಿ ಭಾಷೆಯಲ್ಲಿ ಈ ಸಿನಿಮಾನ ರಿಲೀಸ್ ಮಾಡುವ ಹಕ್ಕನ್ನು ಪಡೆಯಲು ಅನೇಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಇದೆಲ್ಲವನ್ನೂ ಗಮನಿಸಿ ಬನ್ಸಾಲಿ ಅವರು ತಮ್ಮ ಸಿನಿಮಾನ ಮುಂದಕ್ಕೆ ಹಾಕಿಕೊಳ್ಳುವ ಆಲೋಚನೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಣವೀರ್-ಬನ್ಸಾಲಿ ಕಿತ್ತಾಟದ ವಿಚಾರ ಕೊನೆಗೂ ಹೊರಬಂತು; ಹೊಸ ಚಿತ್ರದಿಂದ ನಟ ಹೊರಕ್ಕೆ

‘ಲವ್ ಆ್ಯಂಡ್ ವಾರ್’ ಸಿನಿಮಾದ ಶೂಟಿಂಗ್​ನಲ್ಲಿ ಬನ್ಸಾಲಿ ನಿಧಾನತೆ ತೋರುತ್ತಿದ್ದಾರೆ. ಹೀಗಾಗಿ, ಸಿನಿಮಾ ಪೂರ್ಣಗೊಳ್ಳೋದು ಮುಂದಿನ ಏಪ್ರಿಲ್ ಸಮೀಪಿಸಲಿದೆ. ಹೀಗಾಗಿ, ರಿಲೀಸ್​ ಡೇಟ್​ನ ಐಪಿಎಲ್ ಮುಗಿದ ಮೇಲೆ ಅಂದರೆ 2026ರ ಜೂನ್​ಗೆ ಮುಂದೂಡುವ ಆಲೋಚನೆ ಬನ್ಸಾಲಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ