AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ಪೂರ್ಣಗೊಂಡಿತು ‘ಟಾಕ್ಸಿಕ್’ ಶೂಟ್? ಮುಂದಿರೋ ಪ್ಲ್ಯಾನ್​​ಗಳೇನು?

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಶೂಟಿಂಗ್ ಸದ್ದಿಲ್ಲದೆ ಪೂರ್ಣಗೊಂಡಿದೆ. ಈ ಕುರಿತು ಹರಡಿದ್ದ ಗಾಸಿಪ್‌ಗಳಿಗೆ ತೆರೆ ಬಿದ್ದಿದ್ದು, ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾರ್ಚ್ 19ರಂದು ಬಿಡುಗಡೆಯಾಗಲಿರುವ ಈ ಪ್ಯಾನ್-ವರ್ಲ್ಡ್ ಸಿನಿಮಾಕ್ಕಾಗಿ ಮೂರೂವರೆ ತಿಂಗಳ ಮೊದಲೇ ತಂಡ ಭರ್ಜರಿ ಪ್ರಚಾರಕ್ಕೆ ಸಿದ್ಧವಾಗಿದೆ. ಜನವರಿ 8ರಂದು ಯಶ್ ಜನ್ಮದಿನದಂದು ಟೀಸರ್ ಬಿಡುಗಡೆಯ ನಿರೀಕ್ಷೆಯಿದೆ.

ಸದ್ದಿಲ್ಲದೆ ಪೂರ್ಣಗೊಂಡಿತು ‘ಟಾಕ್ಸಿಕ್’ ಶೂಟ್? ಮುಂದಿರೋ ಪ್ಲ್ಯಾನ್​​ಗಳೇನು?
ಯಶ್
ರಾಜೇಶ್ ದುಗ್ಗುಮನೆ
|

Updated on: Dec 04, 2025 | 3:02 PM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಶೂಟ್ ಪೂರ್ಣಗೊಂಡಿಲ್ಲ, ಈ ಚಿತ್ರ 2026ರ ಮಾರ್ಚ್​​ಗೆ ರಿಲೀಸ್ ಆಗಲ್ಲ ಎಂದೆಲ್ಲ ಸುದ್ದಿಗಳು ಹರಿದಾಡಿದ್ದವು. ಆದರೆ, ಈಗ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಈ ಚಿತ್ರದ ಶೂಟ್ ಪೂರ್ಣಗೊಂಡಿದೆಯಂತೆ. ಸಿನಿಮಾ ರಿಲೀಸ್​ಗೆ ಮೂರವರೆ ತಿಂಗಳು ಬಾಕಿ ಇರುವಾಗ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಪ್ರಚಾರಕ್ಕೆ ತಂಡದವರು ದೊಡ್ಡ ಪ್ಲ್ಯಾನ್ ರೂಪಿಸಿಕೊಂಡಿದೆ ಎಂದು ವರದಿ ಆಗಿದೆ.

‘ಟಾಕ್ಸಿಕ್’ ಸಿನಿಮಾದ ತಂಡದವರೊಬ್ಬರು ಶೂಟ್​ನ ಕೊನೆಯ ದಿನ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಮೂಲಕ ತಂಡದವರು ಸದ್ದಿಲ್ಲದೆ ಕುಂಬಳಕಾಯಿ ಒಡೆದಿದ್ದಾರೆ. ಬೆಂಗಳೂರಲ್ಲಿ ಕೊನೆಯ ಹಂತದ ಚಿತ್ರೀಕರಣ ನಡೆದಿದೆ.

‘ಟಾಕ್ಸಿಕ್’ ಸಿನಿಮಾ ಕೇವಲ ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಸಿನಿಮಾ. ಈ ಚಿತ್ರವನ್ನು ಕನ್ನಡದ ಜೊತೆಗೆ ಇಂಗ್ಲಿಷನ್​ನಲ್ಲೂ ಏಕಕಾಲಕ್ಕೆ ಶೂಟ್ ಮಾಡಲಾಗಿದೆ. ಹೀಗಾಗಿ, ಈ ಚಿತ್ರದ ಪ್ರಚಾರಕ್ಕೆ ಹೆಚ್ಚಿನ ಸಮಯ ಬೇಕು. ಈ ಕಾರಣದಿಂದಲೇ ಮೂರುವರೆ ತಿಂಗಳು ಮೊದಲು ಶೂಟ್​ನ ಪೂರ್ಣಗೊಳಿಸಿದೆ ತಂಡ.

ಸದ್ಯ ‘ಟಾಕ್ಸಿಕ್’ ತಂಡದವರು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಕೆಲ ತಿಂಗಳು ಮೊದಲೇ ಚಿತ್ರತಂಡ ಪ್ರಚಾರ ಮಾಡಲಿದೆ. ಜನವರಿ 8 ಯಶ್ ಜನ್ಮದಿನ. ಅಂದು ಸಿನಿಮಾದ ಟೀಸರ್ ರಿಲೀಸ್ ಮಾಡುವ ಸಾಧ್ಯತೆ ಇದೆ.

‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್ ದಾಸ್ ನಿರ್ದೇಶನ ಇದೆ. ಇವರು ಮಲಯಾಳಂ ನಿರ್ದೇಶಕಿ. ಎರಡು ಸಿನಿಮಾಗಳನ್ನು ನಿರ್ದೇಶಿಸಿದ ಅನುಭವ ಇವರಿಗೆ ಇದೆ. ಈಗ ಇಷ್ಟು ದೊಡ್ಡ ಚಿತ್ರವನ್ನು ಹೇಗೆ ನಿಭಾಯಿಸಿದ್ದಾರೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಮ್ಯೂಸಿಕ್; ಅನಿರುದ್ಧ್ ರವಿಚಂದರ್​ ಹೊರಗಿಟ್ಟು ಕನ್ನಡಿಗನಿಗೆ ಅವಕಾಶ ಕೊಟ್ಟ ಯಶ್

ದೇಶದ ವಿವಿಧ ಕಡೆಗಳಲ್ಲಿ ಸುದ್ದಿಗೋಷ್ಠಿ ನಡೆಸಲು ತಂಡದವರು ಪ್ಲ್ಯಾನ್ ಮಾಡಿದ್ದಾರೆ. ಹಲವು ತಿಂಗಳು ಮೊದಲೇ ಶೂಟಿಂಗ್ ಪೂರ್ಣಗೊಂಡಿರುವುದರಿಂದ ಇದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ಮೊದಲದಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?