AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಸಂಗೀತ ಹಕ್ಕುಗಳು 'ಧುರಂಧರ್ 2' ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟವಾಗಿವೆ. ಜೀ ಮ್ಯೂಸಿಕ್ 42 ಕೋಟಿ ರೂ.ಗಳಿಗೆ ‘ಟಾಕ್ಸಿಕ್’ ಹಕ್ಕುಗಳನ್ನು ಖರೀದಿಸಿದೆ. ರವಿ ಬಸ್ರೂರು ಸೇರಿ ಐವರು ಸಂಗೀತ ನಿರ್ದೇಶಕರು ಕೆಲಸ ಮಾಡಿರುವುದು ಹೈಪ್ ಹೆಚ್ಚಿಸಿದೆ. ವಿಶಾಲ್ ಮಿಶ್ರಾ, ತನಿಷ್ಕ್ ಬಾಗ್ಚಿ ಅವರಂತಹ ಬಾಲಿವುಡ್ ಸಂಗೀತ ನಿರ್ದೇಶಕರ ಕೊಡುಗೆಯೂ ಇದ್ದು, ಸ್ಯಾಂಡಲ್​ವುಡ್​ಗೆ ಇದು ದೊಡ್ಡ ಗೆಲುವು.

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ
ಯಶ್-ರಣವೀರ್
ರಾಜೇಶ್ ದುಗ್ಗುಮನೆ
|

Updated on: Feb 23, 2026 | 9:25 AM

Share

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ. ರವಿ ಬಸ್ರೂರು ಜೊತೆ ಸಿನಿಮಾದಲ್ಲಿ ಒಟ್ಟೂ ಐದು ಮ್ಯೂಸಿಕ್ ಡೈರೆಕ್ಟರ್​​​ಗಳು ಕೆಲಸ ಮಾಡಿದ್ದಾರೆ! ಸಿನಿಮಾದ ಮೆರುಗು ಹೆಚ್ಚಿಸಲು ಐವರು ಪ್ರತಿಭಾವಂತ ಸಂಗೀತ ನಿರ್ದೇಶಕರ ಸಮಾಗಮ ಆಗಿದೆ. ಈ ಚಿತ್ರದಲ್ಲಿ ಒಟ್ಟು 6 ಹಾಡುಗಳು ಇರಲಿವೆ.

ಇದನ್ನೂ ಓದಿ: ‘ಧುರಂಧರ್ 2 vs ಟಾಕ್ಸಿಕ್’ ಒಬ್ಬರ ಹೊಟ್ಟೆ ಇನ್ನೊಬ್ಬರು ಹೊಡೆದಂತೆ: ನಿರ್ದೇಶಕ ಬೇಸರ

ಈ ಕಾರಣದಿಂದ ಸಿನಿಮಾ ಹಾಡಿನ ಹಕ್ಕನ್ನು 42 ಕೋಟಿ ರೂಪಾಯಿಗೆ ಜೀ ಮ್ಯೂಸಿಕ್ ಖರೀದಿ ಮಾಡಿದೆ. ‘ಧುರಂಧರ್ 2’ ಹಾಡಿನ ಹಕ್ಕು 27 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಮೊದಲ ಭಾಗದ ಹಾಡುಗಳು ಸೂಪರ್ ಹಿಟ್ ಆದ ಬಳಿಕವೂ ಕೇವಲ 27 ಕೋಟಿ ರೂಪಾಯಿಗೆ ಇಷ್ಟು ಕಡಿಮೆ ಮೊತ್ತದಲ್ಲಿ ಹಾಡನ್ನು ಖರೀದಿ ಮಾಡಲಾಗಿದೆ. ಅಂದರೆ ‘ಟಾಕ್ಸಿಕ್’ ಚಿತ್ರಕ್ಕೆ ಹೆಚ್ಚುವರಿಯಾಗಿ 15 ಕೋಟಿ ರೂಪಾಯಿ ಸಿಕ್ಕಿದೆ.

‘ಟಾಕ್ಸಿಕ್​’ನಲ್ಲಿ ಬಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ, ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ಈ ಎಲ್ಲ ಪ್ರತಿಭಾವಂತರ ಸಂಗಮ ಆಗಿರುವುದರಿಂದ ‘ಟಾಕ್ಸಿಕ್’ ಸಿನಿಮಾದ ಹಾಡುಗಳ ಮೇಲೆ ಹೈಪ್ ಹೆಚ್ಚಾಗಿದೆ. ರವಿ ಬಸ್ರೂರು ಅವರು ಹಿನ್ನೆಲೆ ಸಂಗೀತದ ಜತೆಗೆ ಕೇವಲ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ