AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶೋ ಮಾರ್ಗ’ದಿಂದ ಮತ್ತೊಂದು ಒಳ್ಳೆಯ ಕೆಲಸ; 400 ವರ್ಷಗಳ ಇತಿಹಾಸ ಇರುವ ಪುಷ್ಕರಣಿ ಪುನಶ್ಚೇತನ

ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ಈ ಪುಷ್ಕರಣಿಗೆ 400 ವರ್ಷಗಳ ಇತಿಹಾಸ ಇದೆ. ಹಾಳಾಗುತ್ತಿದ್ದ ಪುಷ್ಕರಣಿಗೆ ಯಶೋ ಮಾರ್ಗ ಟೀಮ್ ಪುನಶ್ಚೇತನ ನೀಡಿದೆ. ವಿಶ್ವ ಪರಿಸರ ದಿನದಂದು ಪುಷ್ಕರಣಿಯನ್ನು ಲೋಕಾರ್ಪಣೆ ಮಾಡಿರುವುದು ವಿಶೇಷ.

‘ಯಶೋ ಮಾರ್ಗ’ದಿಂದ ಮತ್ತೊಂದು ಒಳ್ಳೆಯ ಕೆಲಸ; 400 ವರ್ಷಗಳ ಇತಿಹಾಸ ಇರುವ ಪುಷ್ಕರಣಿ ಪುನಶ್ಚೇತನ
ಯಶ್
TV9 Web
| Edited By: |

Updated on: Jun 06, 2022 | 7:38 PM

Share

ನಟ ಯಶ್ ಅವರು (Yash) ಸಿನಿಮಾ ಕೆಲಸಗಳಿಂದ ಮಾತ್ರ ಹೆಸರು ಮಾಡಿದವರಲ್ಲ. ಅವರಿಗೆ ಸಮಾಜದ ಬಗ್ಗೆ ಸಾಕಷ್ಟು ಕಾಳಜಿ ಇದೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಪರಿಸರಪರ ಕೆಲಸಗಳನ್ನು ಮಾಡುತ್ತಾರೆ. ಈ ಮೂಲಕ ಅವರು ಆಗಾಗ ಚರ್ಚೆ ಆಗುತ್ತಿರುತ್ತಾರೆ. ‘ಕೆಜಿಎಫ್ 2’ ಸಿನಿಮಾ (KGF Chapter 2) ಗೆಲುವು ಕಂಡ ಖುಷಿಯಲ್ಲಿರುವ ಅವರು ಈ ರೀತಿಯ ಕಾರ್ಯಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಅವರ ‘ಯಶೋ ಮಾರ್ಗ’ದಿಂದ ಈಗ ಮತ್ತೊಂದು ಒಳ್ಳೆಯ ಕೆಲಸ ಆಗಿದೆ. ಯಶೋ ಮಾರ್ಗ ತಂಡದಿಂದ 400 ವರ್ಷಗಳ ಇತಿಹಾಸ ಇರುವ ಪುಷ್ಕರಣಿ ಪುನಶ್ಚೇತನ ಆಗಿದೆ.

ಯಶ್ ಅವರು ‘ಯಶೋ ಮಾರ್ಗ’ ತಂಡ ಕಟ್ಟಿದ್ದಾರೆ. ಇದರ ಅಡಿಯಲ್ಲಿ ರಾಜ್ಯದ ನಾನಾ ಕೆರೆಗಳ ಹೂಳೆತ್ತುವ ಕೆಲಸ ಆಗಿದೆ. ಪಾಳು ಬಿದ್ದ ಅನೇಕ ಕೆರೆಗಳು ಈಗ ನೀರು ತುಂಬಿ ಕಂಗೊಳಿಸುತ್ತಿವೆ. ಅದೇ ರೀತಿ ಈಗ ಶಿವಮೊಗ್ಗದ ಸಾಗರ ತಾಲ್ಲೂಕಿನ ಆನಂದಪುರದಲ್ಲಿರುವ ಚಂಪಕ ಸರಸು ಪುಷ್ಕರಣಿಯನ್ನು ಸ್ವಚ್ಛ ಮಾಡುವ ಕೆಲಸ ಆಗಿದೆ.

ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ಈ ಪುಷ್ಕರಣಿಗೆ 400 ವರ್ಷಗಳ ಇತಿಹಾಸ ಇದೆ. ಹಾಳಾಗುತ್ತಿದ್ದ ಪುಷ್ಕರಣಿಗೆ ಯಶೋ ಮಾರ್ಗ ಟೀಮ್ ಪುನಶ್ಚೇತನ ನೀಡಿದೆ. ವಿಶ್ವ ಪರಿಸರ ದಿನದಂದು ಪುಷ್ಕರಣಿಯನ್ನು ಲೋಕಾರ್ಪಣೆ ಮಾಡಿರುವುದು ವಿಶೇಷ. ಯಶ್ ಅವರ ತಂಡ ಮಾಡಿದ ಈ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಶ್ ಅವರ ತಂಡದಿಂದ ಮತ್ತಷ್ಟು ಈ ರೀತಿಯ ಕಾರ್ಯಗಳು ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಇದನ್ನೂ ಓದಿ
Image
Radhika Pandit: ನಾಚಿ ನೀರಾದ ರಾಧಿಕಾ ಪಂಡಿತ್; ವೈರಲ್ ಆಯ್ತು ಫೋಟೋ
Image
Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್
Image
Radhika Pandit: ‘ನೂರಾರು ಮಕ್ಕಳ ಜೀವ ಉಳಿಸಬಲ್ಲದು’; ಎದೆಹಾಲು ದಾನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ಸಂದೇಶ
Image
Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

ಯಶ್ ಅವರ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಈ ಸಿನಿಮಾ ಬಾಲಿವುಡ್​ ಒಂದರಲ್ಲೇ 433+ ಕೋಟಿ ಬಾಚಿಕೊಂಡಿದೆ. ಈ ಕಾರಣಕ್ಕೆ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಸದ್ಯದ್ದು. ನರ್ತನ್ ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಯಾರೊಬ್ಬರೂ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅವರ ಮುಂದಿನ ಘೋಷಣೆ ಬಗ್ಗೆ ಫ್ಯಾನ್ಸ್ ಕಾಯುತ್ತಿದ್ದಾರೆ. ಇತ್ತೀಚೆಗಷ್ಟೇ ‘ಕೆಜಿಎಫ್ 2’ 50 ದಿನ ಪೂರೈಸಿದೆ. ಈ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​ ಜನ್ಮದಿನದ ಸೆಲೆಬ್ರೇಷನ್​ನಲ್ಲಿ ಯಶ್ ಕೂಡ ಪಾಲ್ಗೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!