AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶೋ ಮಾರ್ಗ’ದಿಂದ ಮತ್ತೊಂದು ಒಳ್ಳೆಯ ಕೆಲಸ; 400 ವರ್ಷಗಳ ಇತಿಹಾಸ ಇರುವ ಪುಷ್ಕರಣಿ ಪುನಶ್ಚೇತನ

ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ಈ ಪುಷ್ಕರಣಿಗೆ 400 ವರ್ಷಗಳ ಇತಿಹಾಸ ಇದೆ. ಹಾಳಾಗುತ್ತಿದ್ದ ಪುಷ್ಕರಣಿಗೆ ಯಶೋ ಮಾರ್ಗ ಟೀಮ್ ಪುನಶ್ಚೇತನ ನೀಡಿದೆ. ವಿಶ್ವ ಪರಿಸರ ದಿನದಂದು ಪುಷ್ಕರಣಿಯನ್ನು ಲೋಕಾರ್ಪಣೆ ಮಾಡಿರುವುದು ವಿಶೇಷ.

‘ಯಶೋ ಮಾರ್ಗ’ದಿಂದ ಮತ್ತೊಂದು ಒಳ್ಳೆಯ ಕೆಲಸ; 400 ವರ್ಷಗಳ ಇತಿಹಾಸ ಇರುವ ಪುಷ್ಕರಣಿ ಪುನಶ್ಚೇತನ
ಯಶ್
TV9 Web
| Edited By: |

Updated on: Jun 06, 2022 | 7:38 PM

Share

ನಟ ಯಶ್ ಅವರು (Yash) ಸಿನಿಮಾ ಕೆಲಸಗಳಿಂದ ಮಾತ್ರ ಹೆಸರು ಮಾಡಿದವರಲ್ಲ. ಅವರಿಗೆ ಸಮಾಜದ ಬಗ್ಗೆ ಸಾಕಷ್ಟು ಕಾಳಜಿ ಇದೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಪರಿಸರಪರ ಕೆಲಸಗಳನ್ನು ಮಾಡುತ್ತಾರೆ. ಈ ಮೂಲಕ ಅವರು ಆಗಾಗ ಚರ್ಚೆ ಆಗುತ್ತಿರುತ್ತಾರೆ. ‘ಕೆಜಿಎಫ್ 2’ ಸಿನಿಮಾ (KGF Chapter 2) ಗೆಲುವು ಕಂಡ ಖುಷಿಯಲ್ಲಿರುವ ಅವರು ಈ ರೀತಿಯ ಕಾರ್ಯಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಅವರ ‘ಯಶೋ ಮಾರ್ಗ’ದಿಂದ ಈಗ ಮತ್ತೊಂದು ಒಳ್ಳೆಯ ಕೆಲಸ ಆಗಿದೆ. ಯಶೋ ಮಾರ್ಗ ತಂಡದಿಂದ 400 ವರ್ಷಗಳ ಇತಿಹಾಸ ಇರುವ ಪುಷ್ಕರಣಿ ಪುನಶ್ಚೇತನ ಆಗಿದೆ.

ಯಶ್ ಅವರು ‘ಯಶೋ ಮಾರ್ಗ’ ತಂಡ ಕಟ್ಟಿದ್ದಾರೆ. ಇದರ ಅಡಿಯಲ್ಲಿ ರಾಜ್ಯದ ನಾನಾ ಕೆರೆಗಳ ಹೂಳೆತ್ತುವ ಕೆಲಸ ಆಗಿದೆ. ಪಾಳು ಬಿದ್ದ ಅನೇಕ ಕೆರೆಗಳು ಈಗ ನೀರು ತುಂಬಿ ಕಂಗೊಳಿಸುತ್ತಿವೆ. ಅದೇ ರೀತಿ ಈಗ ಶಿವಮೊಗ್ಗದ ಸಾಗರ ತಾಲ್ಲೂಕಿನ ಆನಂದಪುರದಲ್ಲಿರುವ ಚಂಪಕ ಸರಸು ಪುಷ್ಕರಣಿಯನ್ನು ಸ್ವಚ್ಛ ಮಾಡುವ ಕೆಲಸ ಆಗಿದೆ.

ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ಈ ಪುಷ್ಕರಣಿಗೆ 400 ವರ್ಷಗಳ ಇತಿಹಾಸ ಇದೆ. ಹಾಳಾಗುತ್ತಿದ್ದ ಪುಷ್ಕರಣಿಗೆ ಯಶೋ ಮಾರ್ಗ ಟೀಮ್ ಪುನಶ್ಚೇತನ ನೀಡಿದೆ. ವಿಶ್ವ ಪರಿಸರ ದಿನದಂದು ಪುಷ್ಕರಣಿಯನ್ನು ಲೋಕಾರ್ಪಣೆ ಮಾಡಿರುವುದು ವಿಶೇಷ. ಯಶ್ ಅವರ ತಂಡ ಮಾಡಿದ ಈ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಶ್ ಅವರ ತಂಡದಿಂದ ಮತ್ತಷ್ಟು ಈ ರೀತಿಯ ಕಾರ್ಯಗಳು ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಇದನ್ನೂ ಓದಿ
Image
Radhika Pandit: ನಾಚಿ ನೀರಾದ ರಾಧಿಕಾ ಪಂಡಿತ್; ವೈರಲ್ ಆಯ್ತು ಫೋಟೋ
Image
Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್
Image
Radhika Pandit: ‘ನೂರಾರು ಮಕ್ಕಳ ಜೀವ ಉಳಿಸಬಲ್ಲದು’; ಎದೆಹಾಲು ದಾನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ಸಂದೇಶ
Image
Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

ಯಶ್ ಅವರ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಈ ಸಿನಿಮಾ ಬಾಲಿವುಡ್​ ಒಂದರಲ್ಲೇ 433+ ಕೋಟಿ ಬಾಚಿಕೊಂಡಿದೆ. ಈ ಕಾರಣಕ್ಕೆ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಸದ್ಯದ್ದು. ನರ್ತನ್ ಜತೆ ಯಶ್ ಕೈ ಜೋಡಿಸಲಿದ್ದಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಯಾರೊಬ್ಬರೂ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅವರ ಮುಂದಿನ ಘೋಷಣೆ ಬಗ್ಗೆ ಫ್ಯಾನ್ಸ್ ಕಾಯುತ್ತಿದ್ದಾರೆ. ಇತ್ತೀಚೆಗಷ್ಟೇ ‘ಕೆಜಿಎಫ್ 2’ 50 ದಿನ ಪೂರೈಸಿದೆ. ಈ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​ ಜನ್ಮದಿನದ ಸೆಲೆಬ್ರೇಷನ್​ನಲ್ಲಿ ಯಶ್ ಕೂಡ ಪಾಲ್ಗೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ