Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಲಕ್ಷ​ ವೀವ್ಸ್​ ಗಡಿಯಲ್ಲಿ ‘ಯಟ್ಟ ಯಟ್ಟ’ ಹಾಡು; ಗಣಿ​ ಜತೆ ಅದಿತಿ, ರಚನಾ, ಮೇಘಾ ‘ತ್ರಿಬಲ್​​ ರೈಡಿಂಗ್​’

Golden Star Ganesh | Triple Riding: ‘ಇದೊಂದು ಪಕ್ಕಾ ಕಾಮಿಡಿ ಚಿತ್ರ. ಅದರಲ್ಲೂ ಕೊನೆಯ 20 ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ’ ಎಂದು ‘ತ್ರಿಬಲ್ ರೈಡಿಂಗ್’ ಸಿನಿಮಾ ಬಗ್ಗೆ ನಟ ಗಣೇಶ್​ ಹೇಳಿದ್ದಾರೆ.

40 ಲಕ್ಷ​ ವೀವ್ಸ್​ ಗಡಿಯಲ್ಲಿ ‘ಯಟ್ಟ ಯಟ್ಟ’ ಹಾಡು; ಗಣಿ​ ಜತೆ ಅದಿತಿ, ರಚನಾ, ಮೇಘಾ ‘ತ್ರಿಬಲ್​​ ರೈಡಿಂಗ್​’
ಮೇಘಾ ಶೆಟ್ಟಿ, ಗಣೇಶ್, ರಚನಾ ಇಂದರ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 19, 2022 | 3:43 PM

‘ಗೋಲ್ಡನ್​ ಸ್ಟಾರ್​’ ಗಣೇಶ್ (Golden Star Ganesh)​ ನಟನೆಯ ಸಿನಿಮಾಗಳಲ್ಲಿ ಹಾಡುಗಳು ಸೂಪರ್​ ಆಗಿರುತ್ತವೆ ಎಂಬುದು ಅಭಿಮಾನಿಗಳ ನಂಬಿಕೆ. ಆ ನಂಬಿಕೆಯನ್ನು ಗಣಿ ಎಂದಿಗೂ ಹುಸಿ ಮಾಡಿಲ್ಲ. ಈಗ ಅವರು ನಟಿಸಿರುವ ‘ತ್ರಿಬಲ್​ ರೈಡಿಂಗ್​’ ಸಿನಿಮಾದಲ್ಲೂ ಹಾಡಿನ ಗಮ್ಮತ್ತು ಜೋರಾಗಿದೆ. ಈ ಚಿತ್ರದ ‘ಯಟ್ಟ ಯಟ್ಟ..’ (Yatta Yatta Song) ಹಾಡು ಬಿಡುಗಡೆ ಆಗಿದೆ. ಈ ಗೀತೆಗೆ ಚಂದನ್​ ಶೆಟ್ಟಿ ಹಾಗೂ ಮಂಗ್ಲಿ ಅವರು ಜೊತೆಯಾಗಿ ಧ್ವನಿ ನೀಡಿದ್ದಾರೆ. ಮೂರು ದಿನ ಕಳೆಯುವುದರೊಳಗೆ ಯೂಟ್ಯೂಬ್​ನಲ್ಲಿ 4 ಮಿಲಿಯನ್​ ವೀವ್ಸ್​ ಪಡೆಯುವತ್ತ ಮುನ್ನುಗ್ಗುತ್ತಿದೆ ಈ ಗೀತೆ. ಮಹೇಶ್​ ಗೌಡ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಸಾಯಿ ಕಾರ್ತಿಕ್​ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ತ್ರಿಬಲ್​ ರೈಡಿಂಗ್​’ (Triple Riding) ಚಿತ್ರದಲ್ಲಿ ಗಣೇಶ್​ ಜೊತೆಯಲ್ಲಿ ಅದಿತಿ ಪ್ರಭುದೇವ, ರಚನಾ ಇಂದರ್​ ಹಾಗೂ ಮೇಘಾ ಶೆಟ್ಟಿ ಅವರ ನಟಿಸಿದ್ದಾರೆ.

ಇತ್ತೀಚೆಗೆ ‘ತ್ರಿಬಲ್​ ರೈಡಿಂಗ್​’ ಸಿನಿಮಾದ ‘ಯಟ್ಟ ಯಟ್ಟ..’ ಹಾಡಿನ ಬಿಡುಗಡೆ ಸಮಾರಂಭ ನಡೆಯಿತು. ಅದರಲ್ಲಿ ಚಿತ್ರತಂಡದ ಸದಸ್ಯರು ಭಾಗಿ ಆಗಿದ್ದರು. ಗಣೇಶ್​ ಮತ್ತು ನಿರ್ದೇಶಕ ಮಹೇಶ್​ ಗೌಡ ಅವರು ‘ಮುಂಗಾರು ಮಳೆ’ ಸಮಯದಿಂದಲೂ ಪರಿಚಿತರು. ಜೊತೆಯಾಗಿ ಸಿನಿಮಾ ಮಾಡಬೇಕು ಎಂಬ ಅವರ ಕನಸು ಈಗ ಈಡೇರಿದೆ. ಈ ಚಿತ್ರದಲ್ಲಿ ಒಳ್ಳೆಯ ಪಾತ್ರ ನೀಡಿರುವ ನಿರ್ದೇಶಕರಿಗೆ ಗಣೇಶ್​ ಧನ್ಯವಾದ ಹೇಳಿದ್ದಾರೆ. ಮೊದಲ ಬಾರಿ ನಿರ್ಮಾಣ ಮಾಡಿರುವ ರಾಮ್ ಗೋಪಾಲ್ ವೈ.ಎಂ. ಅವರಿಗೆ ಒಳ್ಳೆಯದಾಗಲಿ ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ
Image
ಅಭಿಮಾನಿಯ ಬಾಳಲ್ಲಿ ಮಿರಾಕಲ್ ಮಾಡಿದ್ದ ಗೋಲ್ಡನ್ ಸ್ಟಾರ್ ಗಣೇಶ್​; ಇಲ್ಲಿದೆ ಅಚ್ಚರಿಯ ವಿಚಾರ
Image
Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​
Image
ಗಣೇಶ್​ ಪುತ್ರಿ ಚಾರಿತ್ರ್ಯ ಬರ್ತ್​ಡೇ ಪಾರ್ಟಿ ಫೋಟೋಗಳು; ಮುದ್ದು ಮಗಳಿಗೆ ‘ಗೋಲ್ಡನ್​ ಸ್ಟಾರ್​’ ವಿಶ್​
Image
‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​

‘ಚಿತ್ರದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟ್​ ಮತ್ತು ಟರ್ನ್​ಗಳು ಇವೆ. ಇದೊಂದು ಪಕ್ಕಾ ಕಾಮಿಡಿ ಚಿತ್ರ. ಅದರಲ್ಲೂ ಚಿತ್ರದ ಕೊನೆಯ 20 ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. ತ್ರಿಬಲ್ ರೈಡಿಂಗ್ ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನ ಈ ಚಿತ್ರದಲ್ಲಿ ನೋಡಬಹುದು’ ಎಂದಿದ್ದಾರೆ ಗಣೇಶ್​.

ಮೇಘಾ ಶೆಟ್ಟಿ ಅವರು ಈ ಚಿತ್ರದಲ್ಲಿ ಡಾಕ್ಟರ್ ಪಾತ್ರ ಮಾಡಿದ್ದಾರೆ. ‘ಲವ್ ಮಾಕ್ಟೇಲ್’ ಖ್ಯಾತಿಯ ನಟಿ ರಚನಾ ಇಂದರ್​ ಅವರು ಹಠಮಾರಿ ಹೆಣ್ಣಿನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗಣೇಶ್​ ಜೊತೆ ನಟಿಸಿರುವುದು ಅವರಿಬ್ಬರಿಗೂ ಖುಷಿ ನೀಡಿದೆ.

ಗಣೇಶ್ ಮತ್ತು ಚಂದನ್​ ಶೆಟ್ಟಿ ಕಾಂಬಿನೇಷನ್​ನಲ್ಲಿ ಬರುತ್ತಿರುವ ಮೂರನೇ ಹಾಡು ಇದು. ಈ ಹಾಡಿನ ರೀತಿ ಸಿನಿಮಾ ಕೂಡ ಸೂಪರ್​ ಹಿಟ್​ ಆಗಲಿ ಎಂದು ಚಂದನ್​ ಶೆಟ್ಟಿ ಹಾರೈಸಿದ್ದಾರೆ. ಸಾಯಿ ಕಾರ್ತಿಕ್ ಸಂಗೀತದ ಬಗ್ಗೆಯೂ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!