AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2022: ಪೂರ್ಣಗೊಳ್ಳುತ್ತಿದೆ 2022: ಈ ವರ್ಷ ಭಾರತ ಚಿತ್ರರಂಗದಲ್ಲಿ ಗೆಲುವು ಕಂಡ ಚಿತ್ರಗಳಿವು

ಈ ವರ್ಷ ಕನ್ನಡ ಚಿತ್ರರಂಗ ಬಂಗಾರದ ಬೆಳೆ ತೆಗೆದಿದೆ. ಬಾಲಿವುಡ್​​ನಲ್ಲಿ ಈ ವರ್ಷ ಗೆದ್ದಿದ್ದು ಕೆಲವೇ ಕೆಲವು ಚಿತ್ರಗಳು ಮಾತ್ರ. ಕನ್ನಡದಲ್ಲಿ ಈ ವರ್ಷ ಸಾವಿರಾರು ಕೋಟಿ ಬಿಸ್ನೆಸ್ ಮಾಡಿದ ಸಿನಿಮಾ ಕೂಡ ಇದೆ.

Year Ender 2022: ಪೂರ್ಣಗೊಳ್ಳುತ್ತಿದೆ 2022: ಈ ವರ್ಷ ಭಾರತ ಚಿತ್ರರಂಗದಲ್ಲಿ ಗೆಲುವು ಕಂಡ ಚಿತ್ರಗಳಿವು
Year Ender 2022
TV9 Web
| Edited By: |

Updated on: Dec 24, 2022 | 3:43 PM

Share

2022 ಪೂರ್ಣಗೊಳ್ಳುತ್ತಿದೆ. ಈ ವರ್ಷ ಕನ್ನಡ ಚಿತ್ರರಂಗ ಬಂಗಾರದ ಬೆಳೆ ತೆಗೆದಿದೆ. ಬಾಲಿವುಡ್​​ನಲ್ಲಿ ಈ ವರ್ಷ ಗೆದ್ದಿದ್ದು ಕೆಲವೇ ಕೆಲವು ಚಿತ್ರಗಳು ಮಾತ್ರ. ಕನ್ನಡದಲ್ಲಿ ಈ ವರ್ಷ ಸಾವಿರಾರು ಕೋಟಿ ಬಿಸ್ನೆಸ್ ಮಾಡಿದ ಸಿನಿಮಾ ಕೂಡ ಇದೆ. ಆ ಬಗ್ಗೆ ಇಲ್ಲಿದೆ ವಿವರ

‘ಕೆಜಿಎಫ್ 2’

ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಮಾಡಿದ ದಾಖಲೆಗಳ ಸಂಖ್ಯೆ ತುಂಬಾನೇ ದೊಡ್ಡದು. ಈ ಸಿನಿಮಾ 1400 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಬಾಲಿವುಡ್​ನಲ್ಲೇ ಈ ಸಿನಿಮಾ 430 ಕೋಟಿ ಬಾಚಿಕೊಂಡಿದೆ ಎಂಬುದು ವಿಶೇಷ. ಈ ಚಿತ್ರದಿಂದ ಕನ್ನಡ ಚಿತ್ರರಂಗದ ಕೀರ್ತಿ ಹೆಚ್ಚಿದೆ.

‘777 ಚಾರ್ಲಿ’

ರಕ್ಷಿತ್ ಶೆಟ್ಟಿ ನಟನೆಯ ಕಿರಣ್ ರಾಜ್ ನಿರ್ದೇಶನದ ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರ 150 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ನಿರ್ಮಾಪಕರಾಗಿ ರಕ್ಷಿತ್ ಶೆಟ್ಟಿ ಗೆದ್ದು ಬೀಗಿದ್ದಾರೆ. ಪ್ರಾಣಿ ಪ್ರಿಯರು ಇಷ್ಟಪಟ್ಟು ಈ ಸಿನಿಮಾ ನೋಡಿದ್ದಾರೆ.

‘ಜೇಮ್ಸ್​’

ಪುನೀತ್ ರಾಜ್​ಕುಮಾರ್ ಹೀರೋ ಆಗಿ ಕಾಣಿಸಿಕೊಂಡ ಕೊನೆಯ ಸಿನಿಮಾ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ಬಿಸ್ನೆಸ್ ಮಾಡಿದೆ ಎನ್ನಲಾಗಿದೆ. ಈ ಚಿತ್ರವನ್ನು ಪ್ರೇಕ್ಷಕರು ಭಾವುಕರಾಗಿ ಕಣ್ತುಂಬಿಕೊಂಡರು.

‘ವಿಕ್ರಾಂತ್ ರೋಣ’

ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂತು. ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾ ಈ ವರ್ಷದ ಹಿಟ್ ಸಾಲಿನಲ್ಲಿದೆ. ಈ ಚಿತ್ರದಿಂದ ಸುದೀಪ್ ಗೆಲುವು ಕಂಡಿದ್ದಾರೆ.

‘ಕಾಂತಾರ’

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಯಾರೂ ಊಹಿಸದ ರೀತಿಯಲ್ಲಿ ಕಮಾಯಿ ಮಾಡಿದೆ. ಕೇವಲ 15 ಕೋಟಿ ಬಜೆಟ್​ನಲ್ಲಿ ರೆಡಿ ಆದ ಈ ಸಿನಿಮಾ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​​​ಗೆ ಒಳ್ಳೆಯ ಲಾಭ ಆಗಿದೆ.

‘ಆರ್​ಆರ್​ಆರ್​’

ರಾಜಮೌಳಿ ನಿರ್ದೇಶನದ ಜ್ಯೂ.ಎನ್​ಟಿಆರ್​, ರಾಮ್ ಚರಣ್​, ಆಲಿಯಾ ಭಟ್​, ಅಜಯ್ ದೇವಗನ್ ಮೊದಲಾದವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ಕೂಡ ಹಲವು ದಾಖಲೆ ಬರೆದಿವೆ. ಈ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡಲಿದೆ ಎಂಬ ಊಹೆ ಎಲ್ಲರಿಗೂ ಇತ್ತು. ಆದರೆ, ಇಷ್ಟುದೊಡ್ಡ ಮಟ್ಟದ ಗಳಿಕೆ ಮಾಡುತ್ತದೆ ಎಂಬ ಅಂದಾಜು ಇರಲಿಲ್ಲ.

‘ಬ್ರಹ್ಮಾಸ್ತ್ರ’

ರಣಬೀರ್ ಕಪೂರ್, ಅಮಿತಾಭ್ ಬಚ್ಚನ್​, ಶಾರುಖ್ ಖಾನ್​ ಮೊದಲಾದವರು ನಟಿಸಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಯಿತು. ಬಾಲಿವುಡ್​ನಲ್ಲಿ ಗೆಲುವು ಕಂಡ ಕೆಲವೇ ಕೆಲವು ಸಿನಿಮಾಗಳಲ್ಲಿ ಈ ಚಿತ್ರ ಕೂಡ ಇದೆ. ಈ ಸಿನಿಮಾ ನೂರಾರು ಕೋಟಿ ಬಿಸ್ನೆಸ್ ಮಾಡಿದೆ.

‘ಭೂಲ್​ ಭುಲಯ್ಯ 2’

‘ಭೂಲ್​ ಭುಲಯ್ಯ’ ಚಿತ್ರದ ಸೀಕ್ವೆಲ್ ಆಗಿ ‘ಭೂಲ್​ ಭುಲಯ್ಯ 2’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರದಿಂದ ಕಾರ್ತಿಕ್ ಆರ್ಯನ್ ಅವರು ಗೆಲುವು ಕಂಡಿದ್ದಾರೆ ಈ ಚಿತ್ರದಿಂದ ಸೊರಗಿದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಮೈಲೇಜ್ ಸಿಕ್ಕಿತ್ತು.

‘ಪೊನ್ನಿಯನ್ ಸೆಲ್ವನ್​ 1’

ಮಣಿರತ್ನಂ ನಿರ್ದೇಶನದ ‘ಪೊನ್ನಿಯನ್ ಸೆಲ್ವನ್​ 1’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಕಾರ್ತಿ, ಐಶ್ವರ್ಯಾ ರೈ ಮೊದಲಾದವರು ನಟಿಸಿದ್ದರು.

‘ವಿಕ್ರಮ್​’

ಕಮಲ್ ಹಾಸನ್​, ಫಹಾದ್ ಫಾಸಿಲ್, ವಿಜಯ್ ಸೇತುಪತಿ, ಸೂರ್ಯ ನಟನೆಯ ‘ವಿಕ್ರಮ್’ ಸಿನಿಮಾ ಈ ವರ್ಷ ದೊಡ್ಡ ಮಟ್ಟದ ಗೆಲುವು ಕಂಡಿದೆ. ಈ ಚಿತ್ರದಿಂದ ಕಮಲ್ ಹಾಸನ್ ಅವರು ನಿರ್ಮಾಪಕರಾಗಿ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ: ಆಸ್ಕರ್ ರೇಸ್​ಗೆ ‘ಕಾಂತಾರ’, ಸಿನಿಮಾಗೆ ಪ್ರೀಕ್ವೆಲ್​; ವಿಜಯ್ ಕಿರಗಂದೂರು ಕೊಟ್ರು ಬಿಗ್​​ ಅಪ್​ಡೇಟ್

ಇದಲ್ಲದೆ, ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’, ಅಜಯ್ ದೇವಗನ್ ನಟನೆಯ ‘ದೃಶ್ಯಂ 2’, ತೆಲುಗಿನ ‘ಕಾರ್ತಿಕೇಯಾ 2’, ಸಮಂತಾ ನಟನೆಯ ‘ಯಶೋದಾ’, ‘ಸೀತಾ ರಾಮಂ’, ‘ಮೇಜರ್​’, ಕನ್ನಡದ ‘ಗಂಧದ ಗುಡಿ’, ‘ಓಲ್ಡ್ ಮಾಂಕ್​’, ‘ಗುರು ಶಿಷ್ಯರು’, ‘ಗಾಳಿಪಟ 2’ ಮೊದಲಾದ ಚಿತ್ರಗಳು ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್