AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2024: ಈ ವರ್ಷ ನಮ್ಮನ್ನಗಲಿದ ಸಿನಿ ತಾರೆಯವರಿವರು

Year Ender: 2024 ಚಿತ್ರರಂಗದ ಪಾಲಿಗೆ ಉತ್ತಮ ವರ್ಷವೇ ಆಗಿತ್ತು. 2023 ರಷ್ಟು ಅದ್ಧೂರಿ ಅಲ್ಲದಿದ್ದರೂ ಸಾಕಷ್ಟು ಒಳ್ಳೆಯ ಸಿನಿಮಾಗಳು ಬಂದವು. ಹಲವು ಸಿನಿಮಾಗಳು ಯಶಸ್ವಿಯೂ ಆದವು. ಆದರೆ ಈ ವರ್ಷ ಹಲವು ಪ್ರತಿಭಾವಂತ ನಟ-ನಟಿಯರು, ನಿರ್ದೇಶಕರು ಅಗಲಿದರು. ಈ ವರ್ಷ ನಿಧನ ಹೊಂದಿದ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯರ ಗಣ್ಯರ ಪಟ್ಟಿ ಇಲ್ಲಿದೆ.

ಮಂಜುನಾಥ ಸಿ.
|

Updated on: Dec 12, 2024 | 12:32 PM

Share
ಕನ್ನಡದ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಇದೇ ವರ್ಷ ಏಪ್ರಿಲ್ 16 ರಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ಬಳಲಿದ್ದರು. ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು ದ್ವಾರಕೀಶ್. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು.

ಕನ್ನಡದ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಇದೇ ವರ್ಷ ಏಪ್ರಿಲ್ 16 ರಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ಬಳಲಿದ್ದರು. ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು ದ್ವಾರಕೀಶ್. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು.

1 / 7
ಕನ್ನಡ ಸಿನಿಮಾ, ಟಿವಿ ಲೋಕದ ತಾರೆ ಅಪರ್ಣಾ ಇದೇ ವರ್ಷ ಜೂನ್ ತಿಂಗಳಲ್ಲಿ ನಿಧನ ಹೊಂದಿದರು. ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಅದ್ಭುತ ನಟನೆ, ಸ್ಪಷ್ಟ ಕನ್ನಡ ಉಚ್ಛಾರಣೆಯಿಂದ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದರು. ಸಾವಿರಾರು ಕಾರ್ಯಕ್ರಮಗಳ ನಿರೂಪಣೆ ಮಾಡಿದ್ದ ಅಪರ್ಣಾ, ಹಲವಾರು ಕನ್ನಡ ಸಿನಿಮಾ ಹಾಗೂ ಟಿವಿ ಶೋಗಳಲ್ಲಿಯೂ ನಟಿಸಿದ್ದರು.

ಕನ್ನಡ ಸಿನಿಮಾ, ಟಿವಿ ಲೋಕದ ತಾರೆ ಅಪರ್ಣಾ ಇದೇ ವರ್ಷ ಜೂನ್ ತಿಂಗಳಲ್ಲಿ ನಿಧನ ಹೊಂದಿದರು. ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಅದ್ಭುತ ನಟನೆ, ಸ್ಪಷ್ಟ ಕನ್ನಡ ಉಚ್ಛಾರಣೆಯಿಂದ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದರು. ಸಾವಿರಾರು ಕಾರ್ಯಕ್ರಮಗಳ ನಿರೂಪಣೆ ಮಾಡಿದ್ದ ಅಪರ್ಣಾ, ಹಲವಾರು ಕನ್ನಡ ಸಿನಿಮಾ ಹಾಗೂ ಟಿವಿ ಶೋಗಳಲ್ಲಿಯೂ ನಟಿಸಿದ್ದರು.

2 / 7
‘ಮಠ’, ‘ಎದ್ದೇಳು ಮಂಜುನಾಥ’ ಅಂಥಹಾ ಭಿನ್ನ ಸಿನಿಮಾಗಳನ್ನು ಚಿತ್ರರಂಗಕ್ಕೆ ನೀಡಿದ ನಿರ್ದೇಶಕ ಗುರುಪ್ರಸಾದ್ ನವೆಂಬರ್ ತಿಂಗಳಲ್ಲಿ ನಿಧನ ಹೊಂದಿದರು. ಸಾಲ, ಖಿನ್ನಿತೆಯಿಂದ ಬಳಲುತ್ತಿದ್ದ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾದರು. ಸರಸ್ವತಿಪುತ್ರ ಎಂದೆಲ್ಲ ಕರೆಸಿಕೊಂಡಿದ್ದ ಗುರುಪ್ರಸಾದ್, ಸ್ವಯಂಕೃತ ಅಪರಾಧದಿಂದ ಎಲ್ಲವನ್ನೂ ಕಳೆದುಕೊಂಡರು.

‘ಮಠ’, ‘ಎದ್ದೇಳು ಮಂಜುನಾಥ’ ಅಂಥಹಾ ಭಿನ್ನ ಸಿನಿಮಾಗಳನ್ನು ಚಿತ್ರರಂಗಕ್ಕೆ ನೀಡಿದ ನಿರ್ದೇಶಕ ಗುರುಪ್ರಸಾದ್ ನವೆಂಬರ್ ತಿಂಗಳಲ್ಲಿ ನಿಧನ ಹೊಂದಿದರು. ಸಾಲ, ಖಿನ್ನಿತೆಯಿಂದ ಬಳಲುತ್ತಿದ್ದ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾದರು. ಸರಸ್ವತಿಪುತ್ರ ಎಂದೆಲ್ಲ ಕರೆಸಿಕೊಂಡಿದ್ದ ಗುರುಪ್ರಸಾದ್, ಸ್ವಯಂಕೃತ ಅಪರಾಧದಿಂದ ಎಲ್ಲವನ್ನೂ ಕಳೆದುಕೊಂಡರು.

3 / 7
‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಕೆ ಶಿವರಾಂ ಅವರು ಫೆಬ್ರವರಿ 29 ರಂದು ನಿಧನರಾದರು. ಕನ್ನಡದಲ್ಲಿ ಪರೀಕ್ಷೆ ಎದುರಿಸಿ ಐಎಎಸ್ ಅಧಿಕಾರಿಯಾಗಿದ್ದ ಶಿವರಾಂ ಅವರು ಹಲವರಿಗೆ ಸ್ಪೂರ್ತಿ ತುಂಬಿದ್ದರು.

‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಕೆ ಶಿವರಾಂ ಅವರು ಫೆಬ್ರವರಿ 29 ರಂದು ನಿಧನರಾದರು. ಕನ್ನಡದಲ್ಲಿ ಪರೀಕ್ಷೆ ಎದುರಿಸಿ ಐಎಎಸ್ ಅಧಿಕಾರಿಯಾಗಿದ್ದ ಶಿವರಾಂ ಅವರು ಹಲವರಿಗೆ ಸ್ಪೂರ್ತಿ ತುಂಬಿದ್ದರು.

4 / 7
ಡಾ ರಾಜ್​ಕುಮಾರ್, ವಿಷ್ಣುವರ್ಧನ್, ಅನಂತ್​ನಾಗ್ ಸೇರಿದಂತೆ ಹಲವು ಹಿರಿಯ ಕಲಾವಿದರೊಟ್ಟಿಗೆ ನಟಿಸಿದ್ದ ಖ್ಯಾತ ಪೋಷಕ ನಟ ಟಿ ತಿಮ್ಮಯ್ಯ ಅವರು ನವೆಂಬರ್ 16 ರಂದು ನಿಧನ ಹೊಂದಿದರು. ಟಿ. ತಿಮ್ಮಯ್ಯ ಅವರು ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.

ಡಾ ರಾಜ್​ಕುಮಾರ್, ವಿಷ್ಣುವರ್ಧನ್, ಅನಂತ್​ನಾಗ್ ಸೇರಿದಂತೆ ಹಲವು ಹಿರಿಯ ಕಲಾವಿದರೊಟ್ಟಿಗೆ ನಟಿಸಿದ್ದ ಖ್ಯಾತ ಪೋಷಕ ನಟ ಟಿ ತಿಮ್ಮಯ್ಯ ಅವರು ನವೆಂಬರ್ 16 ರಂದು ನಿಧನ ಹೊಂದಿದರು. ಟಿ. ತಿಮ್ಮಯ್ಯ ಅವರು ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.

5 / 7
ಕನ್ನಡದ ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಂ ಅವರು ಹೈದರಾಬಾದ್ ಬಳಿ ನಡೆದ ಕಾರು ಅಪಘಾತದಲ್ಲಿ ಮೇ 12ರಂದು ನಿಧನ ಹೊಂದಿದರು. ಕನ್ನಡ ಮಾತ್ರವಲ್ಲದೆ ತೆಲುಗು ಧಾರಾವಾಹಿಗಳಲ್ಲಿಯೂ ಪವಿತ್ರಾ ನಟಿಸುತ್ತಿದ್ದರು. ಹೈದರಾಬಾದ್​ನಿಂದ ಕರ್ನಾಟಕಕ್ಕೆ ಬರುವಾಗ ಅವರು ನಿಧನ ಹೊಂದಿದರು. ಅವರ ನಿಧನದ ಬೆನ್ನಲ್ಲೆ ಅವರ ಗೆಳೆಯ ಸಹ ಆತ್ಮಹತ್ಯೆ ಮಾಡಿಕೊಂಡರು. ಅವರೂ ನಟರಾಗಿದ್ದರು.

ಕನ್ನಡದ ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಂ ಅವರು ಹೈದರಾಬಾದ್ ಬಳಿ ನಡೆದ ಕಾರು ಅಪಘಾತದಲ್ಲಿ ಮೇ 12ರಂದು ನಿಧನ ಹೊಂದಿದರು. ಕನ್ನಡ ಮಾತ್ರವಲ್ಲದೆ ತೆಲುಗು ಧಾರಾವಾಹಿಗಳಲ್ಲಿಯೂ ಪವಿತ್ರಾ ನಟಿಸುತ್ತಿದ್ದರು. ಹೈದರಾಬಾದ್​ನಿಂದ ಕರ್ನಾಟಕಕ್ಕೆ ಬರುವಾಗ ಅವರು ನಿಧನ ಹೊಂದಿದರು. ಅವರ ನಿಧನದ ಬೆನ್ನಲ್ಲೆ ಅವರ ಗೆಳೆಯ ಸಹ ಆತ್ಮಹತ್ಯೆ ಮಾಡಿಕೊಂಡರು. ಅವರೂ ನಟರಾಗಿದ್ದರು.

6 / 7
‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ನಟಿ ಶೋಭಿತಾ ಶಿವಣ್ಣ ಇದೇ ತಿಂಗಳ ಒಂದನೇ ತಾರೀಖು ನಿಧನ ಹೊಂದಿದರು. ಕಳೆದ ವರ್ಷವಷ್ಟೆ ವಿವಾಹವಾಗಿದ್ದ ಶೋಭಿತಾ ಶಿವಣ್ಣ, ಡಿಸೆಂಬರ್ 1 ರಂದು ಹೈದರಾಬಾದ್​ನಲ್ಲಿ ಆತ್ಮಹತ್ಯೆಗೆ ಶರಣಾದರು. ಅವರಿಗೆ ಮದುವೆ ಇಷ್ಟವಿರಲಿಲ್ಲ ಅದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಅವರ ನಿಧನದ ಬಳಿಕ ಕೇಳಿ ಬಂತು.

‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ನಟಿ ಶೋಭಿತಾ ಶಿವಣ್ಣ ಇದೇ ತಿಂಗಳ ಒಂದನೇ ತಾರೀಖು ನಿಧನ ಹೊಂದಿದರು. ಕಳೆದ ವರ್ಷವಷ್ಟೆ ವಿವಾಹವಾಗಿದ್ದ ಶೋಭಿತಾ ಶಿವಣ್ಣ, ಡಿಸೆಂಬರ್ 1 ರಂದು ಹೈದರಾಬಾದ್​ನಲ್ಲಿ ಆತ್ಮಹತ್ಯೆಗೆ ಶರಣಾದರು. ಅವರಿಗೆ ಮದುವೆ ಇಷ್ಟವಿರಲಿಲ್ಲ ಅದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಅವರ ನಿಧನದ ಬಳಿಕ ಕೇಳಿ ಬಂತು.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ