ಯೋಗರಾಜ್ ಭಟ್ ನಿರ್ಮಾಣದ ಮುಂದಿನ ಚಿತ್ರಕ್ಕೆ ‘ಉಡಾಳ’ ಶೀರ್ಷಿಕೆ; ಇದು ಪಕ್ಕಾ ಜವಾರಿ ಕಥೆ

‘ಉಡಾಳ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವ ಅಮೋಲ್ ಪಾಟೀಲ್ ಅವರು ಮೂಲತಃ ಬಿಜಾಪುರದವರು. ಶಿಕ್ಷಣ ಪಡೆದ ಬಳಿಕ ಅವರು ಸಿನಿಮಾ ಕ್ಷೇತ್ರಕ್ಕೆ ಬಂದಿದ್ದಾರೆ. ಅವರಿಗೆ ಉತ್ತರ ಕರ್ನಾಟಕ ಸ್ಟೈಲ್​ನ ಸಿನಿಮಾ ಮಾಡಬೇಕು ಎನ್ನುವ ಆಸೆ ಇತ್ತು. ಈಗ ‘ಉಡಾಳ’ ಮೂಲಕ ಉತ್ತರ ಕರ್ನಾಟಕ ಸೊಗಡಿನ ಸಿನಿಮಾ ಮಾಡಲು ಅವರು ಮುಂದಾಗಿದ್ದಾರೆ.

ಯೋಗರಾಜ್ ಭಟ್ ನಿರ್ಮಾಣದ ಮುಂದಿನ ಚಿತ್ರಕ್ಕೆ ‘ಉಡಾಳ’ ಶೀರ್ಷಿಕೆ; ಇದು ಪಕ್ಕಾ ಜವಾರಿ ಕಥೆ
ಉಡಾಳ ತಂಡ
Follow us
|

Updated on:Feb 02, 2024 | 2:01 PM

ಯೋಗರಾಜ್ ಭಟ್ (Yogaraj Bhat) ಅವರು ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಬ್ಯುಸಿ ಆಗಿದ್ದಾರೆ. ಅವರು ಹಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಈಗ ಅವರ ನಿರ್ಮಾಣದ ಹೊಸ ಚಿತ್ರಕ್ಕೆ ‘ಉಡಾಳ’ ಎಂದು ಶೀರ್ಷಿಕೆ ಇಡಲಾಗಿದೆ. ರವಿ ಶಾಮನೂರು ನಿರ್ಮಾಣದಲ್ಲಿ ಯೋಗರಾಜ್ ಭಟ್​ ಅವರಿಗೆ ಸಾಥ್ ನೀಡಿದ್ದಾರೆ. ಎರಡು ವರ್ಷಗಳ ಹಿಂದೆ ‘ಪದವಿಪೂರ್ವ’ ಚಿತ್ರದ ಮೂಲಕ ಪೃಥ್ವಿ ಶಾಮನೂರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಈಗ ಅವರು ‘ಉಡಾಳ’ (Udala Movive) ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರವನ್ನು ಯೋಗರಾಜ್ ಭಟ್ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್​ನ ಡಾಲಿ ಧನಂಜಯ ಅನಾವರಣ ಮಾಡಿದ್ದಾರೆ.

ಟೈಟಲ್ ಅನಾವರಣ ಮಾಡಿದ ಬಳಿಕ ಧನಂಜಯ್ ಅವರು ಖುಷಿ ಹಂಚಿಕೊಂಡಿದ್ದಾರೆ. ಧನಂಜಯ್ ನಟನೆಯ ‘ಬಡವ ರಾಸ್ಕರ್’ ಚಿತ್ರಕ್ಕೆ ಶೀರ್ಷಿಕೆ ನೀಡಿದ್ದು ಯೋಗರಾಜ್ ಭಟ್. ಹೀಗಾಗಿ, ಧನಂಜಯ್​ಗೆ ಖುಷಿ ಇದೆ. ಅವರು ಯೋಗರಾಜ್ ಭಟ್ ನಿರ್ಮಾಣದ ಸಿನಿಮಾದ ಟೈಟಲ್ ಅನಾವರಣ ಮಾಡುವ ಮೂಲಕ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೆ, ಪೃಥ್ವಿ ಅವರ ನಟನೆಯನ್ನು ಹೊಗಳಿದ್ದಾರೆ.

ನಿರ್ದೇಶಕ ಅಮೋಲ್ ಪಾಟೀಲ್ ಅವರು ಮೂಲತಃ ಬಿಜಾಪುರದವರು. ಶಿಕ್ಷಣ ಪಡೆದು ಸಿನಿಮಾ ಕ್ಷೇತ್ರಕ್ಕೆ ಬಂದಿದ್ದಾರೆ. ಅವರಿಗೆ ಉತ್ತರ ಕರ್ನಾಟಕ ಸ್ಟೈಲ್​ನ ಸಿನಿಮಾ ಮಾಡಬೇಕು ಎನ್ನುವ ಆಸೆ ಇತ್ತು. ಈಗ ಅವರು ಉತ್ತರ ಕರ್ನಾಟಕ ಸೊಗಡಿನ ಸಿನಿಮಾ ಮಾಡಲು ಅವರು ಮುಂದಾಗಿದ್ದಾರೆ. ಹೀಗಾಗಿ ಉತ್ತರ ಕರ್ನಾಕಟದಲ್ಲಿ ಹೆಚ್ಚು ಬಳಕೆಯಲ್ಲಿ ಇರುವ ‘ಉಡಾಳ’ ಶಬ್ದವನ್ನೇ ಟೈಟಲ್ ಆಗಿ ಇಟ್ಟಿದ್ದಾರೆ.

ಅಮೋಲ್ ಪಾಟಿಲ್ ಈ ಅವಕಾಶಕ್ಕಾಗಿ ಖುಷಿಯಾಗಿದ್ದಾರೆ. ‘ನನಗೆ ಅವಕಾಶ ಕೊಟ್ಟಿದ್ದಕ್ಕೆ ಗುರುಗಳಾದ ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ಅವರಿಗೆ ಧನ್ಯವಾದ ಹೇಳುತ್ತೇನೆ. ಇದು ಉತ್ತರ ಕರ್ನಾಟಕದ ಶೈಲಿಯ ಸಿನಿಮಾ. ಫೆಬ್ರವರಿ ಅಂತ್ಯಕ್ಕೆ ಬಿಜಾಪುರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಆ ಭಗದಲ್ಲೇ ನಡೆಯಲಿದೆ’ ಎಂದು ಮಾಹಿತಿ ನೀಡಿದರು ನಿರ್ದೇಶಕರು.

ಇದನ್ನೂ ಓದಿ: ‘ಕುಲದಲ್ಲಿ ಕೀಳ್ಯಾವುದೋ’: ಸೆಟ್ಟೇರಿತು ಯೋಗರಾಜ್ ಭಟ್ಟರ ಶಿಷ್ಯನ ಸಿನಿಮಾ

ಬಿಜಾಪುರದಲ್ಲಿ ಟೂರಿಸ್ಟ್ ಗೈಡ್ ಆಗಿ ಪಕ್ಯ ಹೆಸರಿನ ಪಾತ್ರದಲ್ಲಿ ಪೃಥ್ವಿ ಕಾಣಿಸಿಕೊಳ್ಳಲಿದ್ದಾರೆ. ಹೃತಿಕಾ ಶ್ರೀನಿವಾಸ್ ಈ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಚೇತನ್ ಸಂಗೀತ ಸಂಯೋಜನೆ ಹಾಗೂ ಶಿವಶಂಕರ್ ನೂರಂಬಡ ಛಾಯಾಗ್ರಹಣ ‘ಉಡಾಳ’ ಸಿನಿಮಾಗೆ ಇದೆ. ಈ ಮೊದಲು ಪೃಥ್ವಿ ನಟಿಸಿದ್ದ ‘ಪದವಿಪೂರ್ವ’ ಚಿತ್ರವನ್ನು ಯೋಗರಾಜ್​ ಭಟ್ ಅವರೇ ನಿರ್ಮಾಣ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:54 pm, Fri, 2 February 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ