AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​​​​ನಲ್ಲಿ ಎರಡನೇ ಬಾರಿ ಗಾಳಿಪಟ ಹಾರಿಸ್ತಾರೆ ಭಟ್ರು; ‘ಗಾಳಿಪಟ 2’ ರಿಲೀಸ್ ದಿನಾಂಕ ಅನೌನ್ಸ್​

ಯೋಗರಾಜ್​ ಭಟ್​ ಅವರ ಸಿನಿಮಾ ಯಾವಾಗಲೂ ಡಿಫರೆಂಟ್​ ಆಗಿರುತ್ತವೆ. ಅವರ ಸಾಹಿತ್ಯವಂತೂ ಇನ್ನೂ ಡಿಫರೆಂಟ್​. ಇತ್ತೀಚೆಗೆ ರಿಲೀಸ್ ಆಗಿದ್ದ ಈ ಸಿನಿಮಾದ ‘ಎಕ್ಸಾಂ ಸಾಂಗ್​..’ ಮೆಚ್ಚುಗೆ ಪಡೆದುಕೊಂಡಿತ್ತು.

ಆಗಸ್ಟ್​​​​ನಲ್ಲಿ ಎರಡನೇ ಬಾರಿ ಗಾಳಿಪಟ ಹಾರಿಸ್ತಾರೆ ಭಟ್ರು; ‘ಗಾಳಿಪಟ 2’ ರಿಲೀಸ್ ದಿನಾಂಕ ಅನೌನ್ಸ್​
ದಿಗಂತ್​-ಗಣೇಶ್​-
TV9 Web
| Edited By: |

Updated on: May 07, 2022 | 9:57 PM

Share

ಗಣೇಶ್ (Ganesh)​, ದಿಗಂತ್​, ಪವನ್​ ಕುಮಾರ್​ ನಟಿಸುತ್ತಿರುವ ‘ಗಾಳಿಪಟ 2’ (Gaalipata 2) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಯೋಗರಾಜ್​ ಭಟ್​ ನಿರ್ದೇಶನದ ಆ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಮೊದಲು ತೆರೆಗೆ ಬಂದಿದ್ದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈಗ ಸೀಕ್ವೆಲ್​ನ ರಿಲೀಸ್ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಈ ಬಗ್ಗೆ ಯೋಗರಾಜ್​ ಭಟ್ (Yogaraj Bhat)​ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯೋಗರಾಜ್​ ಭಟ್​ ಅವರ ಸಿನಿಮಾ ಯಾವಾಗಲೂ ಡಿಫರೆಂಟ್​ ಆಗಿರುತ್ತವೆ. ಅವರ ಸಾಹಿತ್ಯವಂತೂ ಇನ್ನೂ ಡಿಫರೆಂಟ್​. ಇತ್ತೀಚೆಗೆ ರಿಲೀಸ್ ಆಗಿದ್ದ ಈ ಸಿನಿಮಾದ ‘ಎಕ್ಸಾಂ ಸಾಂಗ್​..’ ಮೆಚ್ಚುಗೆ ಪಡೆದುಕೊಂಡಿತ್ತು. ವಿದ್ಯಾರ್ಥಿಗಳ ಪಾತ್ರದಲ್ಲಿ ಗಣೇಶ್​, ಪವನ್​ ಕುಮಾರ್​, ದಿಗಂತ್​ ಕಾಣಿಸಿಕೊಂಡಿದ್ದರು. ಈಗ ಸಿನಿಮಾ ತಂಡದಿಂದ ರಿಲೀಸ್​ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ಯೋಗರಾಜ್​ ಭಟ್ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಒಂದಿಷ್ಟು ಮೊಹಬ್ಬತ್, ಜೊತೆಗೆ ಮತ್ತೊಂದಷ್ಟು ಸ್ನೇಹವನ್ನು ಹೊತ್ತು ಇದೇ ಆಗಸ್ಟ್ 12ರಂದು ನಿಮ್ಮ ಮುಂದೆ ಬರುತ್ತಿದ್ದೇವೆ. ಅದೇ ಹಳೆಯ ಅಕ್ಕರೆ ಮತ್ತು ಪ್ರೀತಿಯನ್ನು ಬಯಸುವ ಗಾಳಿಪಟ 2 ಚಿತ್ರತಂಡ’ ಎಂದು ಯೋಗರಾಜ್​ ಭಟ್ ಬರೆದುಕೊಂಡಿದ್ದಾರೆ. ಈ ಮೂಲಕ ಆಗಸ್ಟ್​​ ಸಮಯದಲ್ಲಿ ಗಾಳಿಪಟ ಹಾರಿಸುವ ಘೋಷಣೆ ಆಗಿದೆ.

ನಿರ್ದೇಶಕ ಯೋಗರಾಜ್​ ಭಟ್​ ಮತ್ತು ನಟ ಗಣೇಶ್​ ಕಾಂಬಿನೇಷನ್​ ಎಂದರೆ ಸಿನಿಪ್ರಿಯರಿಗೆ ಏನೋ ಒಂದು ಥರ ಕುತೂಹಲ. ‘ಮುಂಗಾರು ಮಳೆ’ ಸಿನಿಮಾದಲ್ಲಿ ಈ ಜೋಡಿ ಮಾಡಿದ ಮೋಡಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕನ್ನಡ ಚಿತ್ರರಂಗದಲ್ಲಿ ಆ ಸಿನಿಮಾ ಟ್ರೆಂಡ್​ ಸೆಟರ್​ ಚಿತ್ರವಾಗಿ ಹೊರಹೊಮ್ಮಿತ್ತು. ನಂತರ ‘ಗಾಳಿಪಟ’ ಸಿನಿಮಾದಲ್ಲಿಯೂ ಅವರಿಬ್ಬರು ಕಮಾಲ್​ ಮಾಡಿದ್ದರು. ಆ ಚಿತ್ರದಲ್ಲಿ ನಟ ದಿಗಂತ್​ ಕೂಡ ಕೈ ಜೋಡಿಸಿದ್ದರು. ಈಗ ‘ಗಾಳಿಪಟ 2’ (Gaalipata 2) ಸಿನಿಮಾ ಬಗ್ಗೆ ಎಲ್ಲಿಲ್ಲದ ನಿರೀಕ್ಷೆ ಸೃಷ್ಟಿ ಆಗಿದೆ.

ಈ ಸಿನಿಮಾಗೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಉಮಾ ಎಂ. ರಮೇಶ್​ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಸಂತೋಷ್​ ರೈ ಪಾತಾಜೆ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ‘ಗಾಳಿಪಟ’ ಚಿತ್ರ ಹಿಟ್ ಆಗಿತ್ತು. ಆ ಕಾರಣದಿಂದ ‘ಗಾಳಿಪಟ 2’ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಮೂಡಿದೆ. ಈ ಬಾರಿ ಯೋಗರಾಜ್​ ಭಟ್​ ಅವರು ಯಾವ ಕಥೆಯನ್ನು ಜನರ ಮುಂದಿರಿಸುತ್ತಿದ್ದಾರೆ ಎಂಬ ಕೌತುಕ ಮೂಡಿದೆ. ಬುಲೆಟ್​ ಪ್ರಕಾಶ್​, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತ್ ನಾಗ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ