AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಸಿನಿಮಾ ಪ್ರಮೋಷನ್​ಗೆ ಯೋಗರಾಜ್ ಭಟ್ ಪ್ರಕಟಿಸಿದರು ಹೊಸ ನ್ಯೂಸ್ ಪೇಪರ್

‘ಗರಡಿ’ ಚಿತ್ರ ಬಿಸಿ ಪಾಟೀಲ್ ಬ್ಯಾನರ್ ಮೂಲಕ ಮೂಡಿ ಬರುತ್ತಿದೆ. ನವೆಂಬರ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನವೆಂಬರ್ 1ರಂದು ರಾಣಿಬೆನ್ನೂರಿನಲ್ಲಿ ದರ್ಶನ್ ಅವರು ಈ ಚಿತ್ರದ ಟ್ರೇಲರ್​ನ ರಿಲೀಸ್ ಮಾಡಲಿದ್ದಾರೆ. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ಒಡೆತನದ ಕೆರಾಡಿ ಸ್ಟುಡಿಯೋ ಪ್ರಮೋಷನ್ ಮಾಡಲಿದೆ.

‘ಗರಡಿ’ ಸಿನಿಮಾ ಪ್ರಮೋಷನ್​ಗೆ ಯೋಗರಾಜ್ ಭಟ್ ಪ್ರಕಟಿಸಿದರು ಹೊಸ ನ್ಯೂಸ್ ಪೇಪರ್
ಗರಡಿ ತಂಡ
ರಾಜೇಶ್ ದುಗ್ಗುಮನೆ
|

Updated on:Oct 22, 2023 | 3:32 PM

Share

ಯೋಗರಾಜ್ ಭಟ್ (Yogaraj Bhat) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಸಿನಿಮಾ ಪ್ರಮೋಷನ್​ಗೆ ಹಲವು ಮಾರ್ಗಗಳನ್ನು ಅನುಸರಿಸುತ್ತಾರೆ. ಈಗ ಅವರು ‘ಗರಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಬಾರಿ ಅವರು ಸಿನಿಮಾ ಪ್ರಮೋಷನ್​ಗೆ ಹೊಸ ಪ್ರಯತ್ನ ಮಾಡಿದ್ದಾರೆ. ‘ಭಟ್ರು ವಾಣಿ’ ಹೆಸರಿನ ಇ-ಪೇಪರ್ ರಿಲೀಸ್ ಮಾಡಿದ್ದಾರೆ! ಪೇಪರ್​ನಲ್ಲಿ ಸಿನಿಮಾ ಬಗ್ಗೆ ವಿವರ ಇದೆ.

‘ಗರಡಿ’ ಚಿತ್ರ ಬಿಸಿ ಪಾಟೀಲ್ ಬ್ಯಾನರ್ ಮೂಲಕ ಮೂಡಿ ಬರುತ್ತಿದೆ. ನವೆಂಬರ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನವೆಂಬರ್ 1ರಂದು ರಾಣಿಬೆನ್ನೂರಿನಲ್ಲಿ ದರ್ಶನ್ ಅವರು ಈ ಚಿತ್ರದ ಟ್ರೇಲರ್​ನ ರಿಲೀಸ್ ಮಾಡಲಿದ್ದಾರೆ. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ಒಡೆತನದ ಕೆರಾಡಿ ಸ್ಟುಡಿಯೋ ಪ್ರಮೋಷನ್ ಮಾಡಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ‘ಭಟ್ರು ವಾಣಿ’ಯಲ್ಲಿ ಬರೆಯಲಾಗಿದೆ.

‘ಗರಡಿ’ ಸಿನಿಮಾದಲ್ಲಿ ಪೈಲ್ವಾನ್ ಓರ್ವನ ಬರ್ಬರ ಹತ್ಯೆ ನಡೆದಿರುತ್ತದೆ. ಈ ಪ್ರಕರಣ ಹೋದಂತೆ ಜಟಿಲ ಆಗುತ್ತದೆ. ಈ ಬಗ್ಗೆ ಪೇಪರ್​ನಲ್ಲಿ ಬರೆಯಲಾಗಿದೆ. ಸದ್ಯ ‘ಗರಡಿ’ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಈಗಾಗಲೇ ‘ಗರಡಿ’ ಸಿನಿಮಾದ ಹಾಡುಗಳು ಹಿಟ್ ಆಗಿವೆ. ‘ಹೊಡಿರೆಲೆ ಹಲಗಿ..’ ಹಾಡು ಸದ್ದು ಮಾಡಿದೆ. ಯೋಗರಾಜ್​ ಭಟ್​ ಅವರು ಇದಕ್ಕೆ ಸಾಹಿತ್ಯ ಬರೆದಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಹಾಡು ಮೂಡಿ ಬಂದಿದೆ. ಕಲಾ ನಿರ್ದೇಶಕ ಹೊಸಮನೆ ಮೂರ್ತಿ ಅವರು ಹಾಕಿದ ವಿಶೇಷವಾದ ಸೆಟ್​ಗಳಲ್ಲಿ ಇಡೀ ಹಾಡನ್ನು ಶೂಟ್ ಮಾಡಲಾಗಿದೆ. ಪೇಪರ್ ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ‘ಇಂಥ ಚಿತ್ರದ ಅವಶ್ಯಕತೆ ಬಹಳ ಇತ್ತು, ಸೂಕ್ತ ಸಮಯಕ್ಕೆ ಇದು ಬಂದಿದೆ’: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಯೋಗರಾಜ್​ ಭಟ್​ ಹೊಗಳಿಕೆ

‘ಸೌಮ್ಯ ಫಿಲ್ಮ್ಸ್​’ ಮತ್ತು​ ‘ಕೌರವ ಪ್ರೊಡಕ್ಷನ್​ ಹೌಸ್​​’ ಅಡಿಯಲ್ಲಿ ‘ಗರಡಿ’ ಸಿನಿಮಾ ನಿರ್ಮಾಣ ಆಗಿದೆ. ಬಿಸಿ ಪಾಟೀಲ್​ ಅವರ ಪತ್ನಿ ವನಜಾ ಪಾಟೀಲ್​ ಈ ಸಿನಿಮಾ ನಿರ್ಮಿಸಿದ್ದಾರೆ. ಸೂರ್ಯ, ಸೋನಲ್ ಮಾಂಥೆರೋ, ಬಿಸಿ ಪಾಟೀಲ್, ಪೃಥ್ವಿ ಶಾಮನೂರು, ಧರ್ಮಣ್ಣ ಕಡೂರು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:31 pm, Sun, 22 October 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ