AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಸಿನಿಮಾ ಪ್ರಮೋಷನ್​ಗೆ ಯೋಗರಾಜ್ ಭಟ್ ಪ್ರಕಟಿಸಿದರು ಹೊಸ ನ್ಯೂಸ್ ಪೇಪರ್

‘ಗರಡಿ’ ಚಿತ್ರ ಬಿಸಿ ಪಾಟೀಲ್ ಬ್ಯಾನರ್ ಮೂಲಕ ಮೂಡಿ ಬರುತ್ತಿದೆ. ನವೆಂಬರ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನವೆಂಬರ್ 1ರಂದು ರಾಣಿಬೆನ್ನೂರಿನಲ್ಲಿ ದರ್ಶನ್ ಅವರು ಈ ಚಿತ್ರದ ಟ್ರೇಲರ್​ನ ರಿಲೀಸ್ ಮಾಡಲಿದ್ದಾರೆ. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ಒಡೆತನದ ಕೆರಾಡಿ ಸ್ಟುಡಿಯೋ ಪ್ರಮೋಷನ್ ಮಾಡಲಿದೆ.

‘ಗರಡಿ’ ಸಿನಿಮಾ ಪ್ರಮೋಷನ್​ಗೆ ಯೋಗರಾಜ್ ಭಟ್ ಪ್ರಕಟಿಸಿದರು ಹೊಸ ನ್ಯೂಸ್ ಪೇಪರ್
ಗರಡಿ ತಂಡ
ರಾಜೇಶ್ ದುಗ್ಗುಮನೆ
|

Updated on:Oct 22, 2023 | 3:32 PM

Share

ಯೋಗರಾಜ್ ಭಟ್ (Yogaraj Bhat) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಸಿನಿಮಾ ಪ್ರಮೋಷನ್​ಗೆ ಹಲವು ಮಾರ್ಗಗಳನ್ನು ಅನುಸರಿಸುತ್ತಾರೆ. ಈಗ ಅವರು ‘ಗರಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಬಾರಿ ಅವರು ಸಿನಿಮಾ ಪ್ರಮೋಷನ್​ಗೆ ಹೊಸ ಪ್ರಯತ್ನ ಮಾಡಿದ್ದಾರೆ. ‘ಭಟ್ರು ವಾಣಿ’ ಹೆಸರಿನ ಇ-ಪೇಪರ್ ರಿಲೀಸ್ ಮಾಡಿದ್ದಾರೆ! ಪೇಪರ್​ನಲ್ಲಿ ಸಿನಿಮಾ ಬಗ್ಗೆ ವಿವರ ಇದೆ.

‘ಗರಡಿ’ ಚಿತ್ರ ಬಿಸಿ ಪಾಟೀಲ್ ಬ್ಯಾನರ್ ಮೂಲಕ ಮೂಡಿ ಬರುತ್ತಿದೆ. ನವೆಂಬರ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನವೆಂಬರ್ 1ರಂದು ರಾಣಿಬೆನ್ನೂರಿನಲ್ಲಿ ದರ್ಶನ್ ಅವರು ಈ ಚಿತ್ರದ ಟ್ರೇಲರ್​ನ ರಿಲೀಸ್ ಮಾಡಲಿದ್ದಾರೆ. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ಒಡೆತನದ ಕೆರಾಡಿ ಸ್ಟುಡಿಯೋ ಪ್ರಮೋಷನ್ ಮಾಡಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ‘ಭಟ್ರು ವಾಣಿ’ಯಲ್ಲಿ ಬರೆಯಲಾಗಿದೆ.

‘ಗರಡಿ’ ಸಿನಿಮಾದಲ್ಲಿ ಪೈಲ್ವಾನ್ ಓರ್ವನ ಬರ್ಬರ ಹತ್ಯೆ ನಡೆದಿರುತ್ತದೆ. ಈ ಪ್ರಕರಣ ಹೋದಂತೆ ಜಟಿಲ ಆಗುತ್ತದೆ. ಈ ಬಗ್ಗೆ ಪೇಪರ್​ನಲ್ಲಿ ಬರೆಯಲಾಗಿದೆ. ಸದ್ಯ ‘ಗರಡಿ’ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಈಗಾಗಲೇ ‘ಗರಡಿ’ ಸಿನಿಮಾದ ಹಾಡುಗಳು ಹಿಟ್ ಆಗಿವೆ. ‘ಹೊಡಿರೆಲೆ ಹಲಗಿ..’ ಹಾಡು ಸದ್ದು ಮಾಡಿದೆ. ಯೋಗರಾಜ್​ ಭಟ್​ ಅವರು ಇದಕ್ಕೆ ಸಾಹಿತ್ಯ ಬರೆದಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಹಾಡು ಮೂಡಿ ಬಂದಿದೆ. ಕಲಾ ನಿರ್ದೇಶಕ ಹೊಸಮನೆ ಮೂರ್ತಿ ಅವರು ಹಾಕಿದ ವಿಶೇಷವಾದ ಸೆಟ್​ಗಳಲ್ಲಿ ಇಡೀ ಹಾಡನ್ನು ಶೂಟ್ ಮಾಡಲಾಗಿದೆ. ಪೇಪರ್ ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ‘ಇಂಥ ಚಿತ್ರದ ಅವಶ್ಯಕತೆ ಬಹಳ ಇತ್ತು, ಸೂಕ್ತ ಸಮಯಕ್ಕೆ ಇದು ಬಂದಿದೆ’: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಯೋಗರಾಜ್​ ಭಟ್​ ಹೊಗಳಿಕೆ

‘ಸೌಮ್ಯ ಫಿಲ್ಮ್ಸ್​’ ಮತ್ತು​ ‘ಕೌರವ ಪ್ರೊಡಕ್ಷನ್​ ಹೌಸ್​​’ ಅಡಿಯಲ್ಲಿ ‘ಗರಡಿ’ ಸಿನಿಮಾ ನಿರ್ಮಾಣ ಆಗಿದೆ. ಬಿಸಿ ಪಾಟೀಲ್​ ಅವರ ಪತ್ನಿ ವನಜಾ ಪಾಟೀಲ್​ ಈ ಸಿನಿಮಾ ನಿರ್ಮಿಸಿದ್ದಾರೆ. ಸೂರ್ಯ, ಸೋನಲ್ ಮಾಂಥೆರೋ, ಬಿಸಿ ಪಾಟೀಲ್, ಪೃಥ್ವಿ ಶಾಮನೂರು, ಧರ್ಮಣ್ಣ ಕಡೂರು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:31 pm, Sun, 22 October 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!