AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್

‘ಮುಂಗಾರು ಮಳೆ’ ಸಿನಿಮಾದ ಕಥೆ ಮಾಡಿಕೊಂಡು ಯೋಗರಾಜ್ ಭಟ್ ಅನೇಕ ನಿರ್ಮಾಪಕರ ಮನೆಗೆ ಅಲೆದಿದ್ದರು. ಹೋಗಿ ಕಥೆ ಹೇಳಿದ್ದಷ್ಟೇ ಬಂತು, ಆದರೆ, ಯಾರೂ ಸಿನಿಮಾ ನಿರ್ಮಾಣ ಮಾಡಲು ಒಪ್ಪಿರಲಿಲ್ಲ. ಆರು-ಏಳು ನಿರ್ಮಾಪಕರಿಗೆ ಯೋಗರಾಜ್ ಭಟ್ ಕಥೆ ಹೇಳಿದ್ದರು.

‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್
ಪುನೀತ್-ಗಣೇಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 13, 2024 | 7:57 AM

Share

‘ಮುಂಗಾರು ಮಳೆ’ ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. 2006ರಲ್ಲಿ ಬಂದ ಈ ಚಿತ್ರ ದೊಡ್ಡ ಮಟ್ಟದ ಜನಪ್ರಿಯತೆ ಪಡೆಯಿತು. ಈ ಸಿನಿಮಾದಿಂದ ಗಣೇಶ್ ಅವರ ಹೆಸರು ಮುನ್ನೆಲೆಗೆ ಬಂತು. ನಿರ್ದೇಶಕ ಯೋಗರಾಜ್ ಭಟ್ ಹೆಸರು ಸ್ಯಾಂಡಲ್​ವುಡ್​ನಲ್ಲಿ ಜನಪ್ರಿಯತೆ ಪಡೆಯಿತು. ಈ ಆಫರ್ ಮೊದಲು ಪುನೀತ್ ರಾಜ್​ಕುಮಾರ್​ಗೆ ಹೋಗಿತ್ತಂತೆ. ಆ ಬಳಿಕ ಅದು ಗಣೇಶ್ ಕೈ ಸೇರುವ ಕೆಲಸ ಆಗಿದ್ದು ದೊಡ್ಮನೆಯಿಂದಲೇ. ಆ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಿದ್ದೇವೆ.

ಯೋಗರಾಜ್ ಭಟ್ ಅವರು ‘ಮುಂಗಾರು ಮಳೆ’ ಸಿನಿಮಾದ ಕಥೆ ಮಾಡಿಕೊಂಡು ಅನೇಕ ನಿರ್ಮಾಪಕರ ಮನೆಗೆ ಅಲೆದಿದ್ದರು. ಹೋಗಿ ಕಥೆ ಹೇಳಿದ್ದಷ್ಟೇ ಬಂತು, ಆದರೆ, ಯಾರೂ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬರಲಿಲ್ಲ. ಆರು-ಏಳು ನಿರ್ಮಾಪಕರ ಮನೆ ಬಾಗಿಲನ್ನು ಯೋಗರಾಜ್ ಭಟ್ ತಟ್ಟಿ ಆಗಿತ್ತು. ಈ ಕಾರಣಕ್ಕೆ ಅವರಿಗೆ ಸಿನಿಮಾದ ಬಗ್ಗೆ ಯಾವುದೇ ಹೋಪ್ ಇರಲಿಲ್ಲ. ಸಿನಿಮಾ ಸೆಟ್ಟೇರುತ್ತದೆ ಎಂದುಕೂಡ ಅವರು ಅಂದುಕೊಂಡಿರಲಿಲ್ಲ.

‘ಆರೆಂಟು ನಿರ್ಮಾಪಕರಿಗೆ ಕಥೆ ಹೇಳಿದ್ದೆವು. ಚೆನ್ನಾಗಿ ಗೈಡ್ ಮಾಡಿದ್ದು ಅಪ್ಪು ಹಾಗೂ ರಾಘಣ್ಣ. ಸಿನಿಮಾಗೆ ಬೇಕಾಗಿದ್ದು ಎಲ್ಲವೂ ಇದರಲ್ಲಿ ಇದೆ. ಅವರ (ಅಪ್ಪು) ಇಮೇಜ್​ಗೆ ತಕ್ಕಂತೆ ಸಿನಿಮಾ ಬದಲಿಸಲು ಹೋಗಿ ಗಬ್ಬೆಬಿಸಬೇಡಿ. ಹೇಗಿದೆಯೋ ಹಾಗೆ ಸಿನಿಮಾ ಮಾಡಿ. ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಿ ಎಂದರು. ವ್ಯಾಲಿಡ್ ಪಾಯಿಂಟ್ ಕೊಟ್ಟರು’ ಎಂದಿದ್ದರು ಯೋಗರಾಜ್ ಭಟ್. ಅಂದು ಪುನೀತ್ ಹಾಗೂ ರಾಘಣ್ಣ ಈ ಐಡಿಯಾ ಕೊಡದಿದ್ದರೆ ಯೋಗರಾಜ್ ಭಟ್ ಅವರು ಸ್ಟಾರ್ ಹೀರೋಗಳ ಹುಡುಕಾಟದಲ್ಲೇ ಇರುತ್ತಿದ್ದರು.

ಇದನ್ನೂ ಓದಿ: ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಹೊಸ ಹೀರೋಗಳ ಹುಡುಕಾಟದಲ್ಲಿ ಇದ್ದ ಯೋಗರಾಜ್ ಭಟ್​ ಅವರಿಗೆ ಸಿಕ್ಕಿದ್ದು ಗಣೇಶ್. ನಂತರ ಆಗಿದ್ದೆಲ್ಲವೂ ಇತಿಹಾಸ. ಈ ಸಿನಿಮಾ ನೂರಾರು ದಿನ ಥಿಯೇಟರ್​ನಲ್ಲಿ ಓಡಿತು. ಬಾಕ್ಸ್ ಆಫೀಸ್​ನಲ್ಲೂ ದೊಡ್ಡ ಮಟ್ಟದ ಗಳಿಕೆ ಮಾಡಿತು. ಗಣೇಶ್ ಅವರು ಸ್ಯಾಂಡಲ್​ವುಡ್​ನಲ್ಲಿ ನೆಲೆ ಊರಿದರು. ಇತ್ತೀಚೆಗೆ ಅವರ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?