‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್

‘ಮುಂಗಾರು ಮಳೆ’ ಸಿನಿಮಾದ ಕಥೆ ಮಾಡಿಕೊಂಡು ಯೋಗರಾಜ್ ಭಟ್ ಅನೇಕ ನಿರ್ಮಾಪಕರ ಮನೆಗೆ ಅಲೆದಿದ್ದರು. ಹೋಗಿ ಕಥೆ ಹೇಳಿದ್ದಷ್ಟೇ ಬಂತು, ಆದರೆ, ಯಾರೂ ಸಿನಿಮಾ ನಿರ್ಮಾಣ ಮಾಡಲು ಒಪ್ಪಿರಲಿಲ್ಲ. ಆರು-ಏಳು ನಿರ್ಮಾಪಕರಿಗೆ ಯೋಗರಾಜ್ ಭಟ್ ಕಥೆ ಹೇಳಿದ್ದರು.

‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್
ಪುನೀತ್-ಗಣೇಶ್
Edited By:

Updated on: Sep 13, 2024 | 7:57 AM

‘ಮುಂಗಾರು ಮಳೆ’ ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. 2006ರಲ್ಲಿ ಬಂದ ಈ ಚಿತ್ರ ದೊಡ್ಡ ಮಟ್ಟದ ಜನಪ್ರಿಯತೆ ಪಡೆಯಿತು. ಈ ಸಿನಿಮಾದಿಂದ ಗಣೇಶ್ ಅವರ ಹೆಸರು ಮುನ್ನೆಲೆಗೆ ಬಂತು. ನಿರ್ದೇಶಕ ಯೋಗರಾಜ್ ಭಟ್ ಹೆಸರು ಸ್ಯಾಂಡಲ್​ವುಡ್​ನಲ್ಲಿ ಜನಪ್ರಿಯತೆ ಪಡೆಯಿತು. ಈ ಆಫರ್ ಮೊದಲು ಪುನೀತ್ ರಾಜ್​ಕುಮಾರ್​ಗೆ ಹೋಗಿತ್ತಂತೆ. ಆ ಬಳಿಕ ಅದು ಗಣೇಶ್ ಕೈ ಸೇರುವ ಕೆಲಸ ಆಗಿದ್ದು ದೊಡ್ಮನೆಯಿಂದಲೇ. ಆ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಿದ್ದೇವೆ.

ಯೋಗರಾಜ್ ಭಟ್ ಅವರು ‘ಮುಂಗಾರು ಮಳೆ’ ಸಿನಿಮಾದ ಕಥೆ ಮಾಡಿಕೊಂಡು ಅನೇಕ ನಿರ್ಮಾಪಕರ ಮನೆಗೆ ಅಲೆದಿದ್ದರು. ಹೋಗಿ ಕಥೆ ಹೇಳಿದ್ದಷ್ಟೇ ಬಂತು, ಆದರೆ, ಯಾರೂ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬರಲಿಲ್ಲ. ಆರು-ಏಳು ನಿರ್ಮಾಪಕರ ಮನೆ ಬಾಗಿಲನ್ನು ಯೋಗರಾಜ್ ಭಟ್ ತಟ್ಟಿ ಆಗಿತ್ತು. ಈ ಕಾರಣಕ್ಕೆ ಅವರಿಗೆ ಸಿನಿಮಾದ ಬಗ್ಗೆ ಯಾವುದೇ ಹೋಪ್ ಇರಲಿಲ್ಲ. ಸಿನಿಮಾ ಸೆಟ್ಟೇರುತ್ತದೆ ಎಂದುಕೂಡ ಅವರು ಅಂದುಕೊಂಡಿರಲಿಲ್ಲ.

‘ಆರೆಂಟು ನಿರ್ಮಾಪಕರಿಗೆ ಕಥೆ ಹೇಳಿದ್ದೆವು. ಚೆನ್ನಾಗಿ ಗೈಡ್ ಮಾಡಿದ್ದು ಅಪ್ಪು ಹಾಗೂ ರಾಘಣ್ಣ. ಸಿನಿಮಾಗೆ ಬೇಕಾಗಿದ್ದು ಎಲ್ಲವೂ ಇದರಲ್ಲಿ ಇದೆ. ಅವರ (ಅಪ್ಪು) ಇಮೇಜ್​ಗೆ ತಕ್ಕಂತೆ ಸಿನಿಮಾ ಬದಲಿಸಲು ಹೋಗಿ ಗಬ್ಬೆಬಿಸಬೇಡಿ. ಹೇಗಿದೆಯೋ ಹಾಗೆ ಸಿನಿಮಾ ಮಾಡಿ. ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಿ ಎಂದರು. ವ್ಯಾಲಿಡ್ ಪಾಯಿಂಟ್ ಕೊಟ್ಟರು’ ಎಂದಿದ್ದರು ಯೋಗರಾಜ್ ಭಟ್. ಅಂದು ಪುನೀತ್ ಹಾಗೂ ರಾಘಣ್ಣ ಈ ಐಡಿಯಾ ಕೊಡದಿದ್ದರೆ ಯೋಗರಾಜ್ ಭಟ್ ಅವರು ಸ್ಟಾರ್ ಹೀರೋಗಳ ಹುಡುಕಾಟದಲ್ಲೇ ಇರುತ್ತಿದ್ದರು.

ಇದನ್ನೂ ಓದಿ: ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಹೊಸ ಹೀರೋಗಳ ಹುಡುಕಾಟದಲ್ಲಿ ಇದ್ದ ಯೋಗರಾಜ್ ಭಟ್​ ಅವರಿಗೆ ಸಿಕ್ಕಿದ್ದು ಗಣೇಶ್. ನಂತರ ಆಗಿದ್ದೆಲ್ಲವೂ ಇತಿಹಾಸ. ಈ ಸಿನಿಮಾ ನೂರಾರು ದಿನ ಥಿಯೇಟರ್​ನಲ್ಲಿ ಓಡಿತು. ಬಾಕ್ಸ್ ಆಫೀಸ್​ನಲ್ಲೂ ದೊಡ್ಡ ಮಟ್ಟದ ಗಳಿಕೆ ಮಾಡಿತು. ಗಣೇಶ್ ಅವರು ಸ್ಯಾಂಡಲ್​ವುಡ್​ನಲ್ಲಿ ನೆಲೆ ಊರಿದರು. ಇತ್ತೀಚೆಗೆ ಅವರ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us