AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ 50ನೇ ಸಿನಿಮಾಗೆ ‘ಕಿಂಗ್’ ಟೈಟಲ್; ರಗಡ್ ಅವತಾರದಲ್ಲಿ ಬಂದ ಲೂಸ್ ಮಾದ

ಲೂಸ್ ಮಾದ ಯೋಗಿ ಅವರ 50ನೇ ಚಿತ್ರ 'ಕಿಂಗ್' ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ರಗಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿರುವ ಯೋಗಿ, ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಶಿವರಾಜ್‌ಕುಮಾರ್ ಬಿಡುಗಡೆ ಮಾಡಿದ ಚಿತ್ರದ ಟೀಸರ್ ಉತ್ತಮ ಪ್ರತಿಕ್ರಿಯೆ ಗಳಿಸಿದ್ದು, ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ 'ಕಿಂಗ್' ಅಬ್ಬರಿಸಲು ಸಿದ್ಧವಾಗಿದೆ.

ಯೋಗಿ 50ನೇ ಸಿನಿಮಾಗೆ ‘ಕಿಂಗ್’ ಟೈಟಲ್; ರಗಡ್ ಅವತಾರದಲ್ಲಿ ಬಂದ ಲೂಸ್ ಮಾದ
ಶಿವಣ್ಣ ಯೋಗಿ
ರಾಜೇಶ್ ದುಗ್ಗುಮನೆ
|

Updated on: Feb 13, 2026 | 12:07 PM

Share

ಯೋಗಿ ಅವರ ವೃತ್ತಿ ಜೀವನ ಸಾಕಷ್ಟು ಏರಿಳಿತಗಳಿಂದ ಕೂಡಿದೆ. ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಬೇರೆಯದೇ ಲೆಕ್ಕ ಶುರು ಎಂದು ಅವರು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಅವರ ಐವತ್ತನೇ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಕಿಂಗ್’ ಟೈಟಲ್ ಇಡಲಾಗಿದೆ. ಈ ಸಿನಿಮಾ ಟೈಟಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಟೀಸರ್ ಕೂಡ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಭಾರಿ ಬಜೆಟ್​​ನಲ್ಲಿ ಚಿತ್ರ ಸಿದ್ಧವಾಗುತ್ತಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ವೃತ್ತಿ ಜೀವನದಲ್ಲಿ ಯೋಗಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಹಲವು ರೀತಿಯ ಪಾತ್ರಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಈಗ ಅವರು ‘ಕಿಂಗ್’ ಸಿನಿಮಾದಲ್ಲಿ ಸಖತ್ ರಗಡ್ ಅವತಾರ ತಾಳಲು ರೆಡಿ ಆಗಿದ್ದಾರೆ. ಈ ಚಿತ್ರದ ಟೀಸರ್ ರಾ ಆಗಿದೆ. ಶಿವರಾಜ್​ಕುಮಾರ್ ಅವರು ಟೀಸರ್ ರಿಲೀಸ್ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.

‘ಯೋಗಿ ನಂಗೆ ತುಂಬಾನೇ ಆಪ್ತ. ಅವರು ನನ್ನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಪುನೀತ್ ಜೊತೆ ತುಂಬಾನೇ ಆಪ್ತವಾಗಿದ್ದರು. ಹೀಗಾಗಿ, ಯೋಗಿನ ನೋಡಿದಾಗೆಲ್ಲ ಅಪ್ಪುನ ನೆನಪಾಗುತ್ತದೆ. ಈ ಸಿನಿಮಾ ಗೆಲ್ಲಲೇಬೇಕು. ಈ ಚಿತ್ರದ ಸಕ್ಸಸ್ ಪಾರ್ಟಿಯಲ್ಲಿ ನಾನು ಭಾಗಿ ಆಗುತ್ತೇನೆ’ ಎಂದು ಅವರು ಭರವಸೆ ನೀಡಿದ್ದಾರೆ.

‘ಕಿಂಗ್’ ಚಿತ್ರದ ಬಜೆಟ್ ದೊಡ್ಡದು. ಈ ಬಗ್ಗೆ ಯೋಗಿ ಆತಂಕ ವ್ಯಕ್ತಪಡಿಸಿದರು. ಆದರೆ, ನಿರ್ಮಾಪಕರು ಧೈರ್ಯ ತುಂಬಿದರಂತೆ. ಹೀಗಾಗಿ, ಅವರು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಮುಂದಿನ ದಿನಗಳಲ್ಲಿ ದೊಡ್ಡ ಸಿನಿಮಾಗಳನ್ನು ಮಾಡುವ ಆಲೋಚನೆ ಅವರಿಗೆ ಇದೆ.

ಇದನ್ನೂ ಓದಿ: ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಜಾಕ್ ಅವರು ‘ಕಿಂಗ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.ಈ ಚಿತ್ರವನ್ನು ಮಹೇಂದರ್, ಸಿದ್ದೇಶ್, ಸಂತೋಶ್ ಬಸವರಾಜ್ ಮೊದಲಾದವರು ನಿರ್ದೇಶನ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಈ ಚಿತ್ರವನ್ನು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸಾಗರ್ ಎಂಬ ಛಾಯಾಗ್ರಹಣ ಚಿತ್ರಕ್ಕಿದೆ. ಇದೇ ಟೈಟಲ್ ಅಲ್ಲಿ ಬಾಲಿವುಡ್​​ನಲ್ಲೂ ಸಿನಿಮಾ ಬರುತ್ತಿದೆ. ‘ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ನಾವು ಮೂರು ವರ್ಷಗಳ ಹಿಂದೆಯೇ ಚಿತ್ರಕ್ಕೆ ಟೈಟಲ್ ಇಟ್ಟಿದ್ದೇವೆ’ ಎನ್ನುತ್ತಾರೆ ನಿರ್​ದೇಶಕ ಜಾಕ್. ಈ ಚಿತ್ರ ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ