AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನೋಡಿರೋದೇ ಎರಡನೇ ಭಾಗ’; ‘ಕಾಂತಾರ’ ಗುಟ್ಟು ರಿವೀಲ್ ಮಾಡಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ 100 ದಿನಕ್ಕೂ ಹೆಚ್ಚು ದಿನಗಳ ಕಾಲ ಪ್ರದರ್ಶನ ಕಂಡಿದೆ. ಇತ್ತೀಚೆಗೆ ‘ಕಾಂತಾರ’ ಚಿತ್ರದ ಶತದಿನೋತ್ಸವ ಸಮಾರಂಭ ಬೆಂಗಳೂರಿನ ಬಂಟರ ಸಂಘದಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ.

‘ನೀವು ನೋಡಿರೋದೇ ಎರಡನೇ ಭಾಗ’; ‘ಕಾಂತಾರ’ ಗುಟ್ಟು ರಿವೀಲ್ ಮಾಡಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Feb 06, 2023 | 8:04 AM

Share

‘ಕಾಂತಾರ’ ಸಿನಿಮಾ (Kantara Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ (Rishab Shetty) ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರಕ್ಕೆ ಎರಡನೇ ಭಾಗ ಬರಲಿದೆ ಎಂಬ ಬಗ್ಗೆ ಚರ್ಚೆ ಆಗುತ್ತಲೇ ಇದೆ. ಈ ವಿಚಾರದಲ್ಲಿ ಈಗ ರಿಷಬ್ ಶೆಟ್ಟಿ ಅವರು ಒಂದು ವಿಚಾರ ರಿವೀಲ್ ಮಾಡಿದ್ದಾರೆ. ‘ಕಾಂತಾರ’ಕ್ಕೆ ಪ್ರಿಕ್ವೆಲ್ ಬರಲಿದೆ ಎಂದು ಅವರು ಹೇಳಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ 100 ದಿನಕ್ಕೂ ಹೆಚ್ಚು ದಿನಗಳ ಕಾಲ ಪ್ರದರ್ಶನ ಕಂಡಿದೆ. ಇತ್ತೀಚೆಗೆ ‘ಕಾಂತಾರ’ ಚಿತ್ರದ ಶತದಿನೋತ್ಸವ ಸಮಾರಂಭ ಬೆಂಗಳೂರಿನ ಬಂಟರ ಸಂಘದಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ. ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕಾರ್ಯಕ್ರಮ ಆಯೋಜಿಸಿದ್ದರು. ‘ಕಾಂತಾರ’ ಚಿತ್ರದ ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಗಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದರು. ಈ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಅವರು ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

‘ಕಾಂತಾರದ ಗೆಲುವು ಖುಷಿ ಕೊಟ್ಟಿದೆ. ಈ ಕಥೆಯನ್ನು ಮೊದಲು ಕಾರ್ತಿಕ್ ಗೌಡ ಅವರ ಹತ್ತಿರ, ನಂತರ ವಿಜಯ್ ಅವರ ಬಳಿ ಹೇಳಿದೆ. ತಕ್ಷಣ ಒಪ್ಪಿಗೆ ನೀಡಿ ನಿರ್ಮಾಣಕ್ಕೆ ಮುಂದಾದರು. ಚಿತ್ರವನ್ನು ನಾನು ಅಂದುಕೊಂಡಂತೆ ತರಲು ಸಂಪೂರ್ಣ ಸಹಕಾರ ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ನಾನು ಆಭಾರಿ’ ಎಂದರು ರಿಷಬ್.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara: ಹಿಂದಿಯಲ್ಲೂ 100 ದಿನ ಪೂರೈಸಿದ ‘ಕಾಂತಾರ’ ಚಿತ್ರ; ರಿಷಬ್​ ಶೆಟ್ಟಿಗೆ ಉತ್ತರ ಭಾರತದಲ್ಲಿ ಭರ್ಜರಿ ಮೆಚ್ಚುಗೆ

‘ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ. ನನ್ನ ಮಡದಿ ಪ್ರಗತಿ ಅವರಿಗೆ ವಿಶೇಷ ಧನ್ಯವಾದ. ‘ಕಾಂತಾರ ಭಾಗ 2’ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದಾರೆ. ನೀವು ನೋಡಿರುವುದೇ ಎರಡನೇ ಪಾರ್ಟ್​. ಮುಂದೆ ಬರೋದು ಈ ಚಿತ್ರದ ಮೊದಲ ಭಾಗ’ ಎಂದು ಮಾಹಿತಿ ನೀಡಿದರು ರಿಷಬ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್