Yours Sincerely Raam: ಆಂಜನೇಯನ ವೇಷ ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್ ಜನ್ಮದಿನದ ಪ್ರಯುಕ್ತ ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಪೋಸ್ಟರ್ ಬಿಡುಗಡೆ ಆಗಿದೆ. ಈ ಪೋಸ್ಟರ್​ನಲ್ಲಿ ಗಣೇಶ್ ಅವರ ಗೆಟಪ್ ತುಂಬ ವಿಶೇಷವಾಗಿದೆ. ಆಂಜನೇಯನಾಗಿ ಅವರು ಕಾಣಿಸಿಕೊಂಡಿದ್ದಾರೆ. ವಿಖ್ಯಾತ್ ನಿರ್ದೇಶನದ ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾ ಈ ವರ್ಷಾಂತ್ಯಕ್ಕೆ ಬಿಡುಗಡೆ ಆಗಲಿದೆ.

Yours Sincerely Raam: ಆಂಜನೇಯನ ವೇಷ ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್
Golden Star Ganesh

Updated on: Jul 02, 2025 | 11:48 AM

ನಟ ಗಣೇಶ್ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಪಿನಾಕ’ ಮತ್ತು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ (Yours Sincerely Raam) ಸಿನಿಮಾಗಳು ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿವೆ. ಇಂದು (ಜುಲೈ 2) ಗೋಲ್ಡನ್ ಸ್ಟಾರ್ ಗಣೇಶ್ ಅವರ ಜನ್ಮದಿನ. ಆ ಪ್ರಯುಕ್ತ ಸಿನಿಮಾ ತಂಡಗಳಿಂದ ವಿಶೇಷ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ‘Yours Sincerely Raam’ ಸಿನಿಮಾದಿಂದ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದರಲ್ಲಿ ಗಣೇಶ್ (Golden Star Ganesh) ಅವರು ಆಂಜನೇಯನ ಗೆಟಪ್ ಧರಿಸಿದ್ದಾರೆ. ಈ ಪೋಸ್ಟರ್ ವೈರಲ್ ಆಗುತ್ತಿದೆ.

‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾದಲ್ಲಿ ಗಣೇಶ್ ಮತ್ತು ರಮೇಶ್ ಅರವಿಂದ್ ಅವರು ಒಟ್ಟಿಗೆ ನಟಿಸುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಎಂಬ ಕಾರಣಕ್ಕೆ ನಿರೀಕ್ಷೆ ಜಾಸ್ತಿ ಇದೆ. ಈ ಸಿನಿಮಾದ ಶೂಟಿಂಗ್ ಬಿರುಸಿನಿಂದ ನಡೆಯುತ್ತಿದೆ. ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಣೇಶ್ ಅವರಿಗೆ ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾ ತಂಡ ವಿಶ್ ಮಾಡಿದೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದುವರೆಗೂ ಗಣೇಶ್ ಅವರು ಈ ರೀತಿಯ ಗೆಟಪ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ತುಂಬ ಕ್ರಿಯೇಟಿವ್ ಆಗಿ ಈ ಪೋಸ್ಟರ್ ಮೂಡಿಬಂದಿದೆ. ಸೈಕಲ್ ಹಿಂಬದಿಯಲ್ಲಿ ಪೋಸ್ಟ್‌ ಮ್ಯಾನ್‌ ಬ್ಯಾಗ್‌ ಧರಿಸಿ ಭಜರಂಗಿ ಕುಳಿತಿದ್ದಾನೆ. ಕೈಯಲ್ಲೊಂದು ಕಾಗದ ಕೂಡ ಇದೆ. ಪೋಸ್ಟರ್ ನೋಡುತ್ತಿದ್ದರೆ ಸಿನಿಮಾ ಬಗ್ಗೆ ಇನ್ನಷ್ಟು ಕುತೂಹಲ ಮೂಡುವಂತಿದೆ.

ಈ ಸಿನಿಮಾಗೆ ವಿಖ್ಯಾತ್ ಎ.ಆರ್. ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ‘ಪುಷ್ಪಕ ವಿಮಾನ’, ‘ಇನ್ಸ್‌ಪೆಕ್ಟರ್ ವಿಕ್ರಮ್’, ‘ಮಾನ್ಸೂನ್ ರಾಗ’ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಅವರು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾದ ಮೂಲಕ ಮೊದಲ ಬಾರಿಗೆ ನಿರ್ದೇಶಕನಾಗಿದ್ದಾರೆ. ಟೈಟಲ್ ಕಾರಣದಿಂದಲೂ ಕೂಡ ಈ ಸಿನಿಮಾ ಗಮನ ಸೆಳೆದಿದೆ.

ಇದನ್ನೂ ಓದಿ: 47ನೇ ವರ್ಷದ ಹುಟ್ಟುಹಬ್ಬ ಆಚರಣೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

‘ಐರಾ ಫಿಲ್ಮ್ಸ್’ ಹಾಗೂ ‘ದಿ ರಾಯಲ ಸ್ಟುಡಿಯೋಸ್’ ಮೂಲಕ ಸತ್ಯ ರಾಯಲ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅದ್ಧೂರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ನವೀನ್ ಕುಮಾರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ, ಹರೀಶ್ ಕೊಮ್ಮೆ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಜೆ. ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕೆ. ಗುಣ ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us