AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್ ಹೇಳಿದ ವಿಶೇಷ ಸಾಲುಗಳನ್ನು ನೆನಪಿಸಿಕೊಂಡ ಯೂಟ್ಯೂಬ್​ ಸಂಸ್ಥೆ

ಪುನೀತ್ ರಾಜ್​ಕುಮಾರ್​ ಅವರು ‘ಫುಡ್​ ಲವರ್ಸ್​ ಟಿವಿ’ ಯೂಟ್ಯೂಬ್​ ಚಾನೆಲ್​ಗೆ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ಅವರು ಒಂದು ವಿಶೇಷ ಸಾಲುಗಳನ್ನು ಹೇಳಿದ್ದರು. ಇದರ ಸ್ಕ್ರೀನ್​ಶಾಟ್​ಅನ್ನು ಯೂಟ್ಯೂಬ್ ​ಹಂಚಿಕೊಂಡಿದೆ.

ಪುನೀತ್​ ರಾಜ್​ಕುಮಾರ್ ಹೇಳಿದ ವಿಶೇಷ ಸಾಲುಗಳನ್ನು ನೆನಪಿಸಿಕೊಂಡ ಯೂಟ್ಯೂಬ್​ ಸಂಸ್ಥೆ
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Jan 18, 2022 | 7:26 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ನಮ್ಮನ್ನು ಅಗಲಿ ಮೂರು ತಿಂಗಳು ಕಳೆಯುತ್ತಾ ಬಂದಿದೆ. ಅವರಿಲ್ಲ ಎಂಬ ಸತ್ಯದ ಜತೆ ಸಾಗೋದು ಎಲ್ಲರಿಗೂ ಕಷ್ಟವಾಗುತ್ತದೆ. ಪುನೀತ್​ ಅವರು ಏಕಾಏಕಿ ಮೃತಪಡುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಲೇ ಇಲ್ಲ. ಈ ಮಧ್ಯೆ ಪುನೀತ್​ ರಾಜ್​ಕುಮಾರ್​ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಪುನೀತ್ ಮಾಡಿದ ಸಾಧನೆ, ಪುನೀತ್​ ಮಾಡಿದ ಸಮಾಜ ಸೇವೆ, ಅಪ್ಪು ಅವರ ಸಿನಿಮಾಗಳು, ಅವರು ಹೇಳಿದ ವಿಶೇಷ ಸಾಲುಗಳನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈಗ ಯೂಟ್ಯೂಬ್​ ಇಂಡಿಯಾ (YouTube India) ಕೂಡ ಪುನೀತ್​ ಅವರು ಈ ಮೊದಲು ಹೇಳಿದ ಸಾಲುಗಳನ್ನು ನೆನಪಿಸಿಕೊಂಡಿದೆ. ಈ ಬಗ್ಗೆ ಟ್ವೀಟ್​ ಒಂದನ್ನು ಮಾಡಿದೆ.

ಪುನೀತ್ ರಾಜ್​ಕುಮಾರ್​ ಅವರು ‘ಫುಡ್​ ಲವರ್ಸ್​ ಟಿವಿ’ ಯೂಟ್ಯೂಬ್​ ಚಾನೆಲ್​ಗೆ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ಅವರು ಒಂದು ವಿಶೇಷ ಸಾಲುಗಳನ್ನು ಹೇಳಿದ್ದರು. ಇದರ ಸ್ಕ್ರೀನ್​ಶಾಟ್​ಅನ್ನು ಯೂಟ್ಯೂಬ್ ​ಹಂಚಿಕೊಂಡಿದೆ. ಇದನ್ನು ಸಾಕಷ್ಟು ಮಂದಿ ರೀಟ್ವೀಟ್​ ಮಾಡಿಕೊಂಡಿದ್ದಾರೆ. ಹಾಗಾದರೆ, ಪುನೀತ್​ ಹೇಳಿದ ಆ ವಿಶೇಷ ಮಾತುಗಳು ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಮುಂದಿನ ಬೇಂಚ್​ನಲ್ಲಿ ಕುಳಿತರೆ ನಿಮಗೆ ಬೋರ್ಡ್​ ಮಾತ್ರ ಕಾಣುತ್ತದೆ. ಆದರೆ, ಬ್ಯಾಕ್​ ಬೇಂಚ್​ನಲ್ಲಿ ಕುಳಿತರೆ ಇಡೀ ಜಗತ್ತೇ ಕಾಣುತ್ತದೆ’ ಎಂದು ಪುನೀತ್​ ಹೇಳಿದ್ದರು. ಇದನ್ನು ಪೋಸ್ಟ್ ಮಾಡಿರುವ ಯೂಟ್ಯೂಬ್​, ‘ಲೆಜೆಂಡ್​ ಒಮ್ಮೆ ಹೀಗೆ’ ಹೇಳಿದ್ದರು ಎಂದು ಬರೆದುಕೊಂಡಿದೆ.

‘ಯುವರತ್ನ’ ಕ್ಕೆ ಸಿಕ್ಕಿತ್ತು ಅದ್ದೂರಿ ಸ್ವಾಗತ 

ಪುನೀತ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಅವರನ್ನು ಆರಾಧಿಸುವ ಸಾಕಷ್ಟು ಮಂದಿ ಇದ್ದಾರೆ. ಅವರ ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದರು. ಅವರ ಕಟೌಟ್​ಗೆ ಮಾಲೆ ಹಾಕಿ, ಹಾಲಿನ ಅಭಿಷೇಕ ಮಾಡುತ್ತಿದ್ದರು. ‘ಯುವರತ್ನ’ ಸಿನಿಮಾವನ್ನು ಕಿರುತೆರೆ ಪ್ರೇಕ್ಷಕರು ಹೀಗೆಯೇ ಸ್ವಾಗತಿಸಿದ್ದಾರೆ.

‘ಯುವರತ್ನ’ ಸಿನಿಮಾ ಪ್ರಸಾರವಾಗುತ್ತಿದ್ದಂತೆ ಅವರ ಅಭಿಮಾನಿಗಳು ಟಿವಿಗೆ ಹಾರ ಹಾಕಿ ಪೂಜೆ ಮಾಡಿದ್ದಾರೆ. ಈ ಮೂಲಕ ಪುನೀತ್​ ಸತ್ತಿಲ್ಲ ಎನ್ನುವ ಭಾವನೆಯನ್ನು ಮನದಲ್ಲಿ ಇಟ್ಟುಕೊಂಡಿದ್ದಾರೆ. ಈ ರೀತಿ ಮಾಡಿರುವುದು ಕೇವಲ ಒಬ್ಬಿಬ್ಬರಲ್ಲ. ಅನೇಕರು ಇದೇ ರೀತಿ ‘ಯುವರತ್ನ’ನನ್ನು​ ಸ್ವಾಗತಿಸಿದ್ದಾರೆ. ಸದ್ಯ, ವಿಡಿಯೋ ವೈರಲ್​ ಆಗುತ್ತಿದೆ. ಇದು ಪುನೀತ್​ ಮೇಲಿನ ಅಭಿಮಾನಕ್ಕೆ ಸಾಕ್ಷಿ ಆಗಿದೆ.

ಇದನ್ನೂ ಓದಿ: ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

ಪುನೀತ್​ ರಾಜ್​ಕುಮಾರ್​ ಕುರಿತು ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಲೇಡಿ ಬಾಡಿ ಬಿಲ್ಡರ್​ ಮಮತಾ

Published On - 3:53 pm, Tue, 18 January 22

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!