AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Angry Rantman: ಚಿತ್ರವಿಚಿತ್ರವಾಗಿ ಸಿನಿಮಾ ವಿಮರ್ಶೆ ಮಾಡಿ ಫೇಮಸ್ ಆಗಿದ್ದ ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ನಿಧನ  

Angry Rantman Death News: ಇತ್ತೀಚಿನ ದಿನಗಳಲ್ಲಿ ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 11 ದಿನಗಳ ಹಿಂದೆ ಅವರ ತಂದೆ ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ್ದರು. ಮಗನ ಸ್ಥಿತಿ ಸರಿ ಇಲ್ಲ ಎಂದಿದ್ದರು. ಈಗ ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ನಿಧನ ಹೊಂದಿದ್ದಾರೆ.

Angry Rantman: ಚಿತ್ರವಿಚಿತ್ರವಾಗಿ ಸಿನಿಮಾ ವಿಮರ್ಶೆ ಮಾಡಿ ಫೇಮಸ್ ಆಗಿದ್ದ ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ನಿಧನ  
ರ್ಯಾಂಟ್​ಮ್ಯಾನ್
TV9 Web
| Edited By: |

Updated on:Apr 17, 2024 | 3:08 PM

Share

ಆ್ಯಂಗ್ರಿ ರ‍್ಯಾಂಟ್​ಮ್ಯಾನ್ (Angry Rantman) ಎಂದೇ ಫೇಮಸ್ ಆಗಿದ್ದ 27 ವರ್ಷದ ಅಭ್ರದೀಪ್ ಸಾಹಾ ಅವರು ನಿಧನ ಹೊಂದಿದ್ದಾರೆ. ಚಿತ್ರವಿಚಿತ್ರವಾಗಿ ಸಿನಿಮಾ ವಿಮರ್ಶೆ ಮಾಡಿ ಅವರು ಫೇಮಸ್ ಆಗಿದ್ದರು. ಸಾಕಷ್ಟು ಜೋಶ್​ನಲ್ಲಿ ಸಿನಿಮಾ ವಿಮರ್ಶೆ ಮಾಡುತ್ತಿದ್ದರು. ಇದರ ಜೊತೆಗೆ ಇತರ ವಿಡಿಯೋಗಳನ್ನು ಕೂಡ ಮಾಡುತ್ತಿದ್ದರು. ಅವರಿಗೆ 4.8 ಲಕ್ಷ ಹಿಂಬಾಲಕರು ಇದ್ದರು. ಅವರ ನಿಧನವಾರ್ತೆ ಅನೇಕರಿಗೆ ಶಾಕಿಂಗ್ ಎನಿಸಿದೆ. ಅವರಿಗೆ ಕೇವಲ 27 ವರ್ಷ ವಯಸ್ಸಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರ ಸಾವಿಗೆ ಎಲ್ಲರೂ ಸಾಂತಪ ಸೂಚಿಸುತ್ತಿದ್ದಾರೆ. ಅವರು ನಿಧನ ವಾರ್ತೆ ಅನೇಕರಿಗೆ ಶಾಕಿಂಗ್ ಎನಿಸಿದೆ.

ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಹೀಗಾಗಿ ಕಳೆದ ತಿಂಗಳು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 11 ದಿನಗಳ ಹಿಂದೆ ಅವರ ತಂದೆ ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ್ದರು. ‘ನನ್ನ ಮಗ ಇನ್ನೂ ಐಸಿಯುನಲ್ಲೇ ಇದ್ದಾನೆ’ ಎಂದು ಹೇಳಿದ್ದರು. ದಿನ ಕಳೆದಂತೆ ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ಆರೋಗ್ಯ ಹದಗೆಡುತ್ತಲೇ ಹೋಯಿತು. ಈಗ ಅವರು ನಿಧನ ಹೊಂದಿದ್ದಾರೆ ಎಂದು ವರದಿ ಆಗಿದೆ.

ಎರಡು ದಿನಗಳ ಹಿಂದೆ ರ‍್ಯಾಂಟ್​ಮ್ಯಾನ್ ಆರೋಗ್ಯದ ಬಗ್ಗೆ ಅಪ್​ಡೇಟ್ ಒಂದು ಸಿಕ್ಕಿತ್ತು. ಅವರನ್ನು ಸಪೋರ್ಟ್ ಸಿಸ್ಟಮ್​ನಲ್ಲಿ ಇಡಲಾಗಿದೆ ಎಂದು ಹೇಳಲಾಗಿತ್ತು. ಈಗ ವೈದ್ಯರಿಗೆ ಅವರನ್ನು ಉಳಿಸೋಕೆ ಸಾಧ್ಯವಾಗಿಲ್ಲ. ಅವರು ನಿಧನ ಹೊಂದಿದ್ದಾರೆ.

ಇದನ್ನೂ ಓದಿ: ವಿನೋದ್ ರಾಜ್ ಸೇರಿ ಅನೇಕರನ್ನು ಪರಿಚಯಿಸಿದ್ದೇಕೆ ದ್ವಾರಕೀಶ್? ವಿಷ್ಣು ಮೇಲಿನ ಸಿಟ್ಟು ಕಾರಣವಾ?

ಆ್ಯಂಗ್ರಿ ರ‍್ಯಾಂಟ್​ಮ್ಯಾನ್ ಪರಿಚಯ ಕನ್ನಡದ ಮಂದಿಗೂ ಇತ್ತು. ಅವರು ‘ಕೆಜಿಎಫ್ 2’ ಸಿನಿಮಾದ ವಿಮರ್ಶೆ ಮಾಡಿದ್ದರು. ‘ರಾಕಿಭಾಯ್ ಪ್ರಧಾನಮಂತ್ರಿ ಆದರೆ ನಮ್ಮ ದೇಶ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಇರುತ್ತದೆ’ ಎಂದು ಕೂಗಿ ಹೇಳಿದ್ದರು. 10 ನಿಮಿಷಗಳ ಈ ವಿಡಿಯೋ ಬರೋಬ್ಬರಿ 17 ಲಕ್ಷ ವೀಕ್ಷಣೆ ಕಂಡಿದೆ. ಅವರು ಕೂಗಾಡಿಕೊಂಡು ಸಿನಿಮಾ ವಿಮರ್ಶೆ ಹೇಳಿದ್ದರು. ಯಶ್ ನಟನೆಯನ್ನು ಹಾಡಿ ಹೊಗಳಿದ್ದರು. ಈ ರೀತಿಯ ವಿಡಿಯೋಗಳಿಂದ ಅವರು ಹೆಚ್ಚು ಪರಿಚಿತರಾಗಿದ್ದರು. ಈಗ ಅವರಿಲ್ಲ ಎಂಬ ವಿಚಾರವನ್ನು ಅನೇಕರಿಗೆ ನಂಬೋಕೆ ಆಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:02 pm, Wed, 17 April 24

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ