AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

Rishab Shetty Viral Video: ಸಂದರ್ಶನ​ ಮಾಡುತ್ತಲೇ ಸೂರಜ್​ ಕುಮಾರ್​ ಸಖತ್​ ಎಮೋಷನಲ್​ ಆಗಿದ್ದಾರೆ. ಅವರು ರಿಷಬ್​ ಶೆಟ್ಟಿಯ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​
ರಿಷಬ್ ಶೆಟ್ಟಿ ಸಂದರ್ಶನದ ವೈರಲ್​ ವಿಡಿಯೋ
Follow us
TV9 Web
| Updated By: ಮದನ್​ ಕುಮಾರ್​

Updated on: Oct 14, 2022 | 10:49 AM

ಸೂಪರ್​ ಹಿಟ್​ ಆಗಿರುವ ‘ಕಾಂತಾರ’ (Kantara) ಸಿನಿಮಾದಿಂದ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಜನಪ್ರಿಯತೆ ದೇಶಾದ್ಯಂತ ಹಬ್ಬಿದೆ. ಅವರಿಗೆ ಉತ್ತರ ಭಾರತದಲ್ಲೂ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಹಿಂದಿಗೂ ಈ ಚಿತ್ರ ಡಬ್​ ಆಗಿ ತೆರೆ ಕಂಡಿದೆ. ಈ ಪ್ರಯುಕ್ತ ಅನೇಕ ಮಾಧ್ಯಮಗಳಿಗೆ ಹಾಗೂ ಯೂಟ್ಯೂಬ್​ ಚಾನೆಲ್​ಗಳಿಗೆ ರಿಷಬ್​ ಶೆಟ್ಟಿ (Rishab Shetty) ಮತ್ತು ತಂಡದವರು ಸಂದರ್ಶನ ನೀಡುತ್ತಿದ್ದಾರೆ. ಇತ್ತೀಚೆಗೆ ನಡೆದ ಒಂದು ಸಂದರ್ಶನದ ತುಣುಕು ಸಖತ್​ ವೈರಲ್​ ಆಗುತ್ತಿದೆ. ಜನಪ್ರಿಯ ಯೂಟ್ಯೂಬರ್​ ಸೂರಜ್​ ಕುಮಾರ್​ ಅವರು ಈ ಸಂದರ್ಶನ (Rishab Shetty Interview) ನಡೆಸಿದ್ದಾರೆ. ಸಂದರ್ಶನದ ವೇಳೆ ಅವರು ರಿಷಬ್​ ಶೆಟ್ಟಿಯ ಕಾಲಿಗೆ ಬಿದ್ದಿದ್ದಾರೆ. ‘ಕಾಂತಾರ’ ಸಿನಿಮಾ ನೋಡಿ ಅವರು ಆ ಪರಿ ಭಾವುಕರಾಗಿದ್ದಾರೆ.

ರಿಷಬ್​ ಶೆಟ್ಟಿ ಅವರು ‘ಕಾಂತಾರ’ ಚಿತ್ರದಲ್ಲಿ ಶಿವ ಎಂಬ ಪಾತ್ರ ಮಾಡಿದ್ದಾರೆ. ಕ್ಲೈಮ್ಯಾಕ್ಸ್​ ದೃಶ್ಯದಲ್ಲಿ ಅವರ ನಟನೆಯನ್ನು ಕಂಡು ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ. ಭೂತಕೋಲದ ವೇಷದಲ್ಲಿ ಅವರ ಅಭಿನಯಕ್ಕೆ ಅನೇಕರು ಭೇಷ್​ ಎಂದಿದ್ದಾರೆ. ಯೂಟ್ಯೂಬರ್​ ಸೂರಜ್​ ಕುಮಾರ್​ ಕೂಡ ಫಿದಾ ಆಗಿದ್ದಾರೆ. ಸಂದರ್ಶನ ಮಾಡುವಾಗ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ
Image
ರೇಟಿಂಗ್ ವಿಧಾನ ಬದಲಿಸಿದ ‘ಬುಕ್ ಮೈ ಶೋ’; ಈಗ ‘ಕಾಂತಾರ’ ಚಿತ್ರಕ್ಕೆ ಸಿಕ್ಕ ರೇಟಿಂಗ್ ಎಷ್ಟು?
Image
Kantara: ಹಿಂದಿಯಲ್ಲೂ ಅಬ್ಬರಿಸಲಿದೆ ‘ಕಾಂತಾರ’; ಅ.14ರಿಂದ 2500 ಪರದೆಗಳಲ್ಲಿ ರಿಲೀಸ್​
Image
Rishab Shetty: ಐಎಂಡಿಬಿಯಲ್ಲಿ ಗಮ್ಮತ್​ ರೇಟಿಂಗ್​ ಪಡೆದ ‘ಕಾಂತಾರ’; ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ರಿಷಬ್​ ಸಿನಿಮಾ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ತಮ್ಮದೇ ಶೈಲಿಯಲ್ಲಿ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ಸೂರಜ್​ ಕುಮಾರ್​ ಫೇಮಸ್​ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳ ಸಂದರ್ಶನವನ್ನು ಅವರು ಮಾಡಿದ್ದಾರೆ. ರಿಷಬ್​ ಶೆಟ್ಟಿ ಮತ್ತು ಸಪ್ತಮಿ ಗೌಡ ಅವರ ಸಂದರ್ಶನ ಶುರುಮಾಡುವುದಕ್ಕೂ ಮುನ್ನ ‘ದಯವಿಟ್ಟು ನೀವು ಎದ್ದು ನಿಂತುಕೊಳ್ಳಿ ಸರ್​’ ಎಂದು ರಿಷಬ್​ಗೆ ಸೂರಜ್​ ಹೇಳಿದರು. ನಂತರ ರಿಷಬ್​ ಶೆಟ್ಟಿಯನ್ನು ತಬ್ಬಿಕೊಂಡರು. ಅದೂ ಸಾಲದೆಂಬಂತೆ ಕಾಲಿಗೆ ಬಿದ್ದು ನಮಸ್ಕಾರ ಮಾಡಿದರು!

ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ‘ನಾನು ತಮಾಷೆ ಮಾಡುತ್ತಿಲ್ಲ ಸರ್​. ಈ ರೀತಿ ನಾನು ಯಾರಿಗೂ ಮಾಡಿಲ್ಲ. ನಿಮ್ಮ ನಟನೆ ನೋಡಿ ನಾನು ಬ್ಲ್ಯಾಂಕ್​ ಆಗಿಬಿಟ್ಟೆ. ನಾನು ತುಂಬಾ ಸಿನಿಮಾ ನೋಡಿದ್ದೇನೆ. ಆದರೆ ಈ ಚಿತ್ರದ ಬಗ್ಗೆ ಹೇಳಲು ನನ್ನ ಬಳಿ ಪದಗಳೇ ಇಲ್ಲ. ನನ್ನ ಗರ್ಲ್​ಫ್ರೆಂಡ್​ಗಿಂತಲೂ ಹೆಚ್ಚಾಗಿ ನಿಮ್ಮನ್ನು ಪ್ರೀತಿಸುತ್ತೇನೆ’ ಎಂದು ಸೂರಜ್​ ಕುಮಾರ್​ ಹೇಳಿದ್ದಾರೆ.

ಹಿಂದಿಗೆ ‘ಕಾಂತಾರ’ ಸಿನಿಮಾ ಡಬ್​ ಆಗಿದೆ. ಇಂದಿನಿಂದ (ಅ.14) 2500 ಪರದೆಗಳಲ್ಲಿ ಹಿಂದಿ ವರ್ಷನ್​ ಪ್ರದರ್ಶನ ಕಾಣುತ್ತಿದೆ​. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ ಸಿನಿಮಾದ ಮೂಲಕ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ. ರಿಷಬ್​ ಶೆಟ್ಟಿ ಅವರ ಡಿಮ್ಯಾಂಡ್​ ಕೂಡ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್