AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ
ಯುವ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:01 AM

Share

ಯುವ ರಾಜ್​ಕುಮಾರ್ ಅವರು ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಪುನೀತ್ ರಾಜ್​ಕುಮಾರ್ ಜೊತೆ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿಬಂದಿತ್ತು. ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ರಾಜ್​ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕರು. ‘ರಾಜ್​ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್​ಕುಮಾರ್.

ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್​ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ 

‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಯುವ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ ಸೇರಿ ಅನೇಕರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಇದಕ್ಕೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ