AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ
ಯುವ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:01 AM

Share

ಯುವ ರಾಜ್​ಕುಮಾರ್ ಅವರು ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಪುನೀತ್ ರಾಜ್​ಕುಮಾರ್ ಜೊತೆ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿಬಂದಿತ್ತು. ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ರಾಜ್​ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕರು. ‘ರಾಜ್​ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್​ಕುಮಾರ್.

ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್​ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ 

‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಯುವ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ ಸೇರಿ ಅನೇಕರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಇದಕ್ಕೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ