Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ
ಯುವ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:01 AM

ಯುವ ರಾಜ್​ಕುಮಾರ್ ಅವರು ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಪುನೀತ್ ರಾಜ್​ಕುಮಾರ್ ಜೊತೆ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿಬಂದಿತ್ತು. ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ರಾಜ್​ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕರು. ‘ರಾಜ್​ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್​ಕುಮಾರ್.

ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್​ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ 

‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಯುವ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ ಸೇರಿ ಅನೇಕರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಇದಕ್ಕೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ