AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ
ಯುವ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:01 AM

Share

ಯುವ ರಾಜ್​ಕುಮಾರ್ ಅವರು ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಪುನೀತ್ ರಾಜ್​ಕುಮಾರ್ ಜೊತೆ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿಬಂದಿತ್ತು. ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ರಾಜ್​ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕರು. ‘ರಾಜ್​ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್​ಕುಮಾರ್.

ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್​ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ 

‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಯುವ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ ಸೇರಿ ಅನೇಕರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಇದಕ್ಕೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು