AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ
ಯುವ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:01 AM

Share

ಯುವ ರಾಜ್​ಕುಮಾರ್ ಅವರು ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಪುನೀತ್ ರಾಜ್​ಕುಮಾರ್ ಜೊತೆ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿಬಂದಿತ್ತು. ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ರಾಜ್​ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕರು. ‘ರಾಜ್​ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್​ಕುಮಾರ್.

ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್​ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ 

‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಯುವ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ ಸೇರಿ ಅನೇಕರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಇದಕ್ಕೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ